ಆ್ಯಪ್ನಗರ

ಗರ್ಭಗುಡಿ, ತೀರ್ಥಮಂಟಪ, ಸುತ್ತುಪೌಳಿ ಶಿಲಾನ್ಯಾಸ

ಉಡುಪಿ ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿದರು.

Vijaya Karnataka 11 Jul 2019, 5:55 pm
ಹೆಬ್ರಿ: ಜೀರ್ಣೋದ್ಧಾರಗೊಳ್ಳುತ್ತಿರುವ ಮುದ್ರಾಡಿಯ ಗ್ರಾಮದೇವರು ಬೆಳಗುಂಡಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಗರ್ಭಗುಡಿ, ತೀರ್ಥಮಂಟಪ, ಸುತ್ತುಪೌಳಿ ಶಿಲಾನ್ಯಾಸ ಬುಧವಾರ ನಡೆಯಿತು.
Vijaya Karnataka Web KRL-10KB BELAGUNDI

ಉಡುಪಿ ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿ, ಕ್ಲಪ್ತ ಸಮಯದಲ್ಲಿ ಗ್ರಾಮಸ್ಥರು, ಊರ-ಪರವೂರ ಭಕ್ತಾದಿಗಳ ಸಹಕಾರದಲ್ಲಿ ನೂತನ ದೇಗುಲ ನಿರ್ಮಾಣಗೊಂಡು ಗ್ರಾಮ ಸುಭೀಕ್ಷೆಯಾಗಲಿ ಎಂದು ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುದ್ರಾಡಿ ಮೇಲ್ಮನೆ ದಿವ್ಯಸಾಗರ ದಿವಾಕರ ಎನ್‌.ಶೆಟ್ಟಿ ಅಧ್ಯಕ್ಷ ತೆಯಲ್ಲಿ ನಡೆದ ಸಮಾರಂಭದಲ್ಲಿ ತಂತ್ರಿಗಳಾದ ಪ್ರೇಮಚಂದ್ರ ಐತಾಳ್‌, ಭಾನುಚಂದ್ರ ಐತಾಳ್‌ ಶಿಲಾನ್ಯಾಸ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಡಿ.ಪೂಜಾರಿ, ಅರ್ಚಕರಾದ ಬಿ. ರಾಘವೇಂದ್ರ ಅಡಿಗ, ಎಂ. ರಾಘವೇಂದ್ರ ಅಡಿಗ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಾಂಡುರಂಗ ಪ್ರಭು, ವಾಸ್ತುತಜ್ಞ ಕುಡುಪು ಕೃಷ್ಣರಾಜ ತಂತ್ರಿ, ಶಿಲ್ಪಿ ಭಟ್ಕಳ ಶ್ರೀಧರ ನಾಯ್ಕ, ಸಮಿತಿಯ ಮಂಜುನಾಥ ಹೆಗ್ಡೆ , ಗಣಪತಿ ಎಂ. ಮತ್ತಿತರರು ಉಪಸ್ಥಿತರಿದ್ದರು.
ಸಾಹಿತಿ ಅಂಬಾತನಯ ಮುದ್ರಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯಿತಿ ಸದಸ್ಯ ಸಂತೋಷ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಪೋಳಿ ಧಿಶ್ರೀಧರ ಹೆಬ್ಬಾರ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ