ಆ್ಯಪ್ನಗರ

ಈ ಬಾರಿಯ ಬಜೆಟ್ ನಿರೀಕ್ಷೆಗಳೇನು?: ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಸರ್ಕಾರದ ನೀತಿ ಏನು?

ಇದೇ ಫೆ.01ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಕೇಂದ್ರ ಹಣಕಾಸು ಸಚಿವಾಲಯ ಬಜೆಟ್ ಸಿದ್ಧತೆಯ ಅಂತಿಮ ಹಂತಕ್ಕೆ ಬಂದು ತಲುಪಿದೆ. ಈ ಮಧ್ಯೆ ಕೊರೊನಾ ಕಾಲದ ಮೊದಲ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವುದರಿಂದ ಸಹಜವಾಗಿ ಜನಸಾಮಾನ್ಯರ ನಿರೀಕ್ಷೆಗಳು ಹೆಚ್ಚಾಗಿವೆ. ಅದರಂತೆ ಈ ಬಾರಿಯ ಬಜೆಟ್‌ನಿಂದ ನಾವು ಏನನ್ನು ನಿರೀಕ್ಷಿಸಬಹುದು ಎಂಬುದರ ವಿಸ್ತೃತ ಮಾಹಿತಿ ಇಲ್ಲಿದೆ.

Vijaya Karnataka Web 22 Jan 2021, 8:25 pm
ಇದೇ ಫೆ.01ರಂದು ಕೊರೊನಾ ಕಾಲದ ಮೊದಲ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಈ ಬಾರಿಯ ಕೇಂದ್ರ ಬಜೆಟ್ ಮೇಲೆ ಜನಸಾಮಾನ್ಯರ ನಿರೀಕ್ಷೆಗಳು ಹೆಚ್ಚಾಗಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಜನಪ್ರಿಯ ಘೋಷಣೆಗಳು ಈ ಬಾರಿಯ ಬಜೆಟ್‌ನಲ್ಲಿ ಇರಲಿದೆಯೋ ಇಲ್ಲವೋ ಎಂಬ ಕುತೂಹಲ ಮನೆ ಮಾಡಿದೆ. ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಸರ್ಕಾರ ಕೆಲವು ಅಗತ್ಯ ಹಾಗೂ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡರೂ ಅಚ್ಚರಿಯಿಲ್ಲ. ಆದರೆ ಜನಸಾಮಾನ್ಯರಿಗೆ ಯಾವುದೇ ಹೊರೆಯಾಗದಂತೆ ಬಜೆಟ್ ರಚಿಸುವ ಸವಾಲು ಕೂಡ ಕೇಂದ್ರ ಸರ್ಕಾರದ ಮುಂದಿದೆ. ಹಾಗಾದರೆ ಈ ಬಾರಿಯ ಬಜೆಟ್ ನಿರೀಕ್ಷೆಗಳು ಏನಿರಲಿವೆ ಎಂಬುದನ್ನು ಗಮನಿಸುವುದಾದರೆ..
Vijaya Karnataka Web Budget 2021
ಸಂಗ್ರಹ ಚಿತ್ರ



  1. ಜಿಡಿಪಿ ಸ್ಥಿರತೆ
    ಕೊರೊನಾ ಹೊಡೆತದಿಂದಾಗಿ 2020-21 ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಹಿಮ್ಮುಖವಾಗಿ ಚಲಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಜಿಡಿಪಿ ಸ್ಥಿರತೆ ಕಾಪಾಡಿಕೊಳ್ಳುವುದು ಕೇಂದ್ರ ಸರ್ಕಾರಕ್ಕೆ ಸವಾಲಾಗಿದ್ದು, ಈ ಬಾರಿಯ ಬಜೆಟ್ ಇದರತ್ತ ಹೆಚ್ಚಿನ ಬೆಳಕು ಚೆಲ್ಲಲಿದೆ ಎಂದು ನಿರೀಕ್ಷಿಸಲಾಗಿದೆ.
  2. ಉದ್ಯಮಕ್ಕೆ ಚೈತನ್ಯ
    ಕೊರೊನಾ ಹೊಡೆತದಿಂದಾಗಿ 2020-21 ಹಣಕಾಸು ವರ್ಷದಲ್ಲಿ ದೇಶದ ಉದ್ಯಮ ವಲಯ ಭಾರೀ ಹೊಡೆತವನ್ಗನೇ ತಿಂದಿದೆ. ಉದ್ಯಮ ವಲಯವನ್ನು ಮೇಲೆತ್ತಲು ಕೇಂದ್ರ ಸರ್ಕಾರ ಈಗಾಗಲೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ, ಆದರೆ ಬಜೆಟ್‌ನಲ್ಲೂ ಕೇಂದ್ರ ಸರ್ಕಾರ ಈ ವಲಯದತ್ತ ಹೆಚ್ಚಿನ ಒತ್ತು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಮುಖವಾಗಿ ಆತ್ಮನಿರ್ಭರ ಭಾರತ ಯೋಜನೆಗೆ ವೇಗ ನೀಡಿ ದೇಶಿ ಉದ್ಯಮ ಹಾಗೂ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವಲಯವನ್ನು ಲಾಭದತ್ತ ಕೊಂಡೊಯ್ಯುವುದು ಮೋದಿ ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.
  3. ಮೂಲಭೂತ ಸೌಕರ್ಯ ವೃದ್ಧಿ
    ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕ್ಷೇತ್ರವನ್ನು ಬಲಪಡಿಸುವುದು ಕೇಂದ್ರ ಸರ್ಕಾರದ ಉದ್ದೇಶ. ದೇಶದಲ್ಲಿ ಹೆಚ್ಚೆಚ್ಚು ಆರ್ಥಿಕ ಚಟುವಟಿಕೆಗಳು ನಡೆದಷ್ಟೂ ಆರ್ಥಿಕ ಪರಿಸ್ಥಿತಿ ಬಲಗೊಳ್ಳಲು ಸಹಾಯಕವಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ವೃದ್ಧಿಗೆ ಒತ್ತು ನೀಡಿ ಆರ್ಥಿಕ ಚಟುವಟಿಕೆಗೆ ಪುನಶ್ಚೇತನ ನೀಡಲಾಗುವುದು ಎಂದು ನಿರೀಕ್ಷಿಸಲಾಗಿದೆ.
  4. ತೆರಿಗೆ
    ಇನ್ನು ಕೊರೊನಾ ವೈರಸ್ ನೀಡಿರುವ ಆರ್ಥಿಕ ಹೊಡೆತದಿಂದಾಗಿ ಪಾರಾಗಲು ತೆರಿಗೆ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸಲಿದ್ದು, ತೆರಿಗೆ ಕಡಿತದ ನಿರೀಕ್ಷೆ ಇಟ್ಟುಕೊಳ್ಳದಿರುವುದೇ ಉತ್ತಮ. ಜನಸಾಮಾನ್ಯರಿಗೆ ಹೊರೆಯಾಗದಂತೆ ತೆರಿಗೆ ಪದ್ದತಿಯನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲಿದೆ ಎಂಬ ನಿರೀಕ್ಷೆ ಇರುವುದು ಸುಳ್ಳಲ್ಲ. ದೇಶದ ಆರ್ಥಿಕ ಸ್ಥಿರತೆಗಾಗಿ ತಸಬಲವಾದ ತೆರಿಗೆ ಅನುಷ್ಠಾನವೊಂದೇ ದಾರಿ ಎಂಬುದನ್ನು ನಾವು ಮರೆಯಬಾರದು.
  5. ಕಾಗದರಹಿತ ಬಜೆಟ್
    ಕೊರೊನಾ ಹಾವಳಿ ಕಾರಣಕ್ಕೆ ಈ ಬಾರಿ ಕಾಗದರಹಿತ ಬಜೆಟ್ ಮಂಡಿಸಲಿ ಕೇಂದ್ರ ಹಣಕಾಸು ಸಚಿವಾಲಯ ನಿರ್ಧರಿಸಿದೆ. ಸಂಸದರಿಗೆ ಬಜೆಟ್ ಪ್ರತಿಯನ್ನು ಡಿಜಿಟಲ್ ರೂಪದಲ್ಲಿ ನೀಡಲು ನಿರ್ಧರಿಸಲಾಗಿದ್ದು, ಸದನದಲ್ಲಿ ಕಾಗದದ ಉಪಯೋಗಕ್ಕೆ ಬ್ರೇಕ್ ಹಾಕಲಾಗಿದೆ. ಇದು ಈ ಬಾರಿಯ ಬಜೆಟ್ ವಿಶೇಷತ ಎಂದು ಹೇಳಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ