ಆ್ಯಪ್ನಗರ

Budget Session 2019: ನಿಗದಿಯಂತೆ ಜೇಟ್ಲಿ ಬಜೆಟ್ ಮಂಡನೆ : ಊಹಾಪೋಹಗಳಿಗೆ ತೆರೆ ಎಳೆದ ಅಧಿಕಾರಿಗಳು

ಚಿಕಿತ್ಸೆ ನಿಮಿತ್ತ ಅಮೆರಿಕಗೆ ತೆರಳಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಸರಕಾರದ ಕೊನೆಯ ಬಜೆಟ್ ಮಂಡನೆಗೆ ಗೈರಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ.

Vijaya Karnataka Web 17 Jan 2019, 1:23 pm
ಹೊಸದಿಲ್ಲಿ: ಚಿಕಿತ್ಸೆ ನಿಮಿತ್ತ ಅಮೆರಿಕಗೆ ತೆರಳಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಸರಕಾರದ ಕೊನೆಯ ಬಜೆಟ್ ಮಂಡನೆಗೆ ಗೈರು ಹಾಜರಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ನಿಗದಿಯಂತೆ ಅವರೇ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
Vijaya Karnataka Web arun jeatly


2019, ಫೆಬ್ರವರಿ 1ರಂದು 2019-20ರ ಸಾಲಿನ ಮಧ್ಯಂತರ ಬಜೆಟ್ ಮಂಡನೆಯಾಗುತ್ತಿದೆ.

ಹಣಕಾಸು ಸಚಿವರು ಚಿಕಿತ್ಸೆ ಪಡೆದು ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ದಿನದ ಆಸುಪಾಸಿನಲ್ಲಿ ಭಾರತಕ್ಕೆ ಮರಳುವ ಸಾಧ್ಯತೆ ಇದ್ದು, ಫೆ.1 ರಂದು ಪಾರ್ಲಿಮೆಂಟ್‌ನಲ್ಲಿ ಭಾಷಣ ಮಾಡಲಿದ್ದಾರೆ. ನಿಗದಿಯಂತೆ ಅವರೇ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸರಕಾರ ತಿಳಿಸಿದೆ.

ಚಿಕಿತ್ಸೆ ಪಡೆಯುತ್ತಿರುವ ಅರುಣ್ ಜೇಟ್ಲಿ ಅವರು ಬೇಗ ಗುಣಮುಖರಾಗಲಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ರಾಜಕೀಯ ಧುರೀಣರು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

'ಜೇಟ್ಲಿ ಅವರ ತೊಡೆಯಲ್ಲಿ ಗಡ್ಡೆ ಕಾಣಿಸಿಕೊಂಡಿದ್ದು, ಅದು ಮೃದು ಅಂಗಾಂಗ ಕ್ಯಾನ್ಸರ್. ಅದು ಬಹುಬೇಗ ದೇಹದ ಇತರ ಭಾಗಗಳಿಗೂ ವ್ಯಾಪಿಸುತ್ತದೆ. ಹೀಗಾಗಿ ಚಿಕಿತ್ಸೆ ಪಡೆಯಲು ಅಮೆರಿಕಗೆ ತರಳಿರುವ ಅವರು, 2019-20ರ ಮಧ್ಯಂತರ ಬಜೆಟ್ ಮಂಡಿಸುವ ಸಾಧ್ಯತೆ ಇಲ್ಲ' ಎಂದು ವೈಬ್‌ಸೈಟ್‌ವೊಂದು ವರದಿ ಮಾಡವ ಮೂಲಕ ಗೊಂದಲ ಸೃಷ್ಟಿಸಿತ್ತು. ಆದರೆ, ಈ ವರದಿಯನ್ನು ಕೇಂದ್ರ ಸರಕಾರ ತಳ್ಳಿ ಹಾಕಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಕಿಡ್ನಿ ಸಮಸ್ಯೆಯಿಂದ ಏಮ್ಸ್‌ಗೆ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ದಾಖಲಾಗಿದ್ದ ಅರುಣ್ ಜೇಟ್ಲಿ (66) ಅವರು, ಮೇ ತಿಂಗಳಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ