ಆ್ಯಪ್ನಗರ

Modi 2.0 Budget: ಆರ್ಥಿಕ ಸುಧಾರಣೆಯತ್ತ ನಿರ್ಮಲಾ ನಡೆ?: ಜುಲೈ 5ಕ್ಕೆ ಬಜೆಟ್‌

ಮೋದಿ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್‌ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಮಂಡಿಸಲಿದ್ದಾರೆ. ಗುರುವಾರ ಲೋಕಸಭೆಯಲ್ಲಿ ದೇಶದ ಆರ್ಥಿಕ ಸಮೀಕ್ಷೆ ವರದಿ ಮಂಡನೆಯಾಗಲಿದೆ.

Multiple Agencies 3 Jul 2019, 6:28 pm
ಹೊಸದಿಲ್ಲಿ: ಹೊಸ ಸರಕಾರದ ಹೊಸ ಯೋಜನೆ, ಆರ್ಥಿಕ ಲೆಕ್ಕಾಚಾರಗಳ ಬಜೆಟ್‌ ಜುಲೈ 5 ರಂದು ಮಂಡನೆಯಾಗಲಿದೆ.
Vijaya Karnataka Web nirmala sitharaman

ರಾಷ್ಟ್ರದ ಮೊತ್ತ ಮೊದಲ ಪೂರ್ಣ ಅವಧಿಯ ಮಹಿಳಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಲೋಕಸಭೆಯಲ್ಲಿ ಮೋದಿ 2.0 ಸರಕಾರದ ಮೊದಲ ಬಜೆಟ್‌ ಮಂಡಿಸಲಿದ್ದಾರೆ.

2019-20ರ ಹಣಕಾಸು ವರ್ಷದ ಸರಕಾರದ ವರಮಾನ, ವಿವಿಧ ಯೋಜನೆ, ಇಲಾಖೆಗಳಿಗೆ ಅನುದಾನ ಹಂಚಿಕೆ ಇತ್ಯಾದಿಗಳ ಆರ್ಥಿಕ ಲೆಕ್ಕಾಚಾರಗಳನ್ನು ಮಂಡಿಸಲಿದ್ದಾರೆ.

ಶುಕ್ರವಾರ ಬಜೆಟ್‌ ಮಂಡನೆಯಾಗಲಿದ್ದು, ಗುರುವಾರ(ಜುಲೈ 4) ರಂದು ದೇಶದ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಾಗುತ್ತದೆ.
ಮಾಜಿ ಪ್ರಧಾನಿ ಇಂದಿರಾಗಾಂಧಿ ಬಳಿಕ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ರಾಷ್ಟ್ರದ ಬಜೆಟ್‌ ಭಾಷಣ ಮಾಡಲಿದ್ದಾರೆ. ಇಂದಿರಾಗಾಂಧಿ ಪ್ರಧಾನಿ ಹುದ್ದೆಯ ಜತೆಗೆ ಹಣಕಾಸು ಇಲಾಖೆಯನ್ನೂ ನೋಡಿಕೊಳ್ಳುತ್ತಿದ್ದರು.

ಫೆ.1 ರಂದು ಲೋಕಸಭೆ ಚುನಾವಣೆಯ ಮುನ್ನ ಮೋದಿ ಸರಕಾರದ ಮೊದಲ ಅವಧಿಯ ಕೊನೆಯ ಬಜೆಟ್‌(ಮಧ್ಯಂತರ) ಅನ್ನು ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಮಂಡಿಸಿದ್ದರು.

ಬಜೆಟ್‌ನಲ್ಲಿ ಏನೇನಿರುತ್ತೆ? ಊಹೆ ಏನು?
ಲೋಕಸಭೆ ಚುನಾವಣೆಯ ವೇಳೆ ನೀಡಿದ ಆಶ್ವಾಸನೆ, ಯೋಜನೆಗಳ ಅನುಷ್ಠಾನಕ್ಕೆ ಪ್ರಾಧಾನ್ಯತೆ ನೀಡುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಈ ಮಧ್ಯೆ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ಸರಕಾರ ಈಗಾಗಲೇ ಸಂಪುಟದಲ್ಲಿ ಒಪ್ಪಿಗೆ ಪಡೆದಿದೆ. ಸುಮಾರು 6 ಸಾವಿರ ಸಣ್ಣ ಹಿಡುವಳಿದಾರರು ಸೇರಿದಂತೆ ಎಲ್ಲ ವರ್ಗದ ಕೃಷಿಕರಿಗೆ ಈ ಯೋಜನೆ ಸಹಕಾರಿಯಾಗಲಿದೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಭಾಷಣ ಆರಂಭಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಒತ್ತು, ಖಾಸಗಿ ಬಂಡವಾಳ ಹೂಡಿಕೆಗೆ ಆದ್ಯತೆ, ಡಿಜಿಟಲ್‌ ಬ್ಯಾಂಕಿಂಗ್‌ ವರ್ಗಕ್ಕೆ ಇನ್ನಷ್ಟು ಯೋಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ದೃಷ್ಟಿ ಇಟ್ಟಿದೆ ಎನ್ನಲಾಗಿದೆ.

ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ಸುಧಾರಣೆಗಾಗಿ ಕ್ರಮ, ರೈತರ ಆದಾಯ ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆಯ ಜತೆ ದೇಶದ ಆರ್ಥಿಕ ಪ್ರಗತಿಯನ್ನು ಇನ್ನಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ನಿರ್ಮಲಾ ಸೀತಾರಾಮನ್‌ ಬಜೆಟ್‌ ಇರಲಿದೆ ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ