ಆ್ಯಪ್ನಗರ

ಇದು ಕೂಡ 'ಜುಮ್ಲಾ ಬಜೆಟ್' ಎಂದ ದಿನೇಶ್ ಗುಂಡೂರಾವ್

ಬರ ಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇದುವರೆಗೂ ಪ್ರಧಾನಿ ಅವರು ರೈತರ ಪರ ನಿಲ್ಲಲಿಲ್ಲ. ಆದರೆ, ಈಗ ರೈತರ ಪರವಾಗಿ ಮಾತನಾಡುವುದು ಅವರ ಢೋಂಗಿತನವನ್ನು ಎತ್ತಿ ತೋರಿಸುತ್ತಿದೆ.

Vijaya Karnataka Web 1 Feb 2019, 4:20 pm
ರಾಯಚೂರು: ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಪ್ರಧಾನಿ ನರೇಂದ್ರ ಮೋದಿ ವೈಫಲ್ಯತೆಗೆ ಹಿಡಿದ ಕೈಗನ್ನಡಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
Vijaya Karnataka Web dinesh


ನಗರದಲ್ಲಿ ಮಾತನಾಡಿದ ಅವರು, ಬರ ಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇದುವರೆಗೂ ಪ್ರಧಾನಿ ಅವರು ರೈತರ ಪರ ನಿಲ್ಲಲಿಲ್ಲ. ಆದರೆ, ಈಗ ರೈತರ ಪರವಾಗಿ ಮಾತನಾಡುವುದು ಅವರ ಢೋಂಗಿತನವನ್ನು ಎತ್ತಿ ತೋರಿಸುತ್ತಿದೆ. ಯಾವುದೇ ಸಾಧನೆ ಮಾಡದ ಕೇಂದ್ರ ಸರಕಾರ, ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ರೈತರ ಪರ ಬಜೆಟ್ ಮಂಡಿಸಿದ್ದಾರೆ ಎಂದು ಕಿಡಿಕಾರಿದರು.

45 ವರ್ಷಗಳಿಗೆ ಹೋಲಿಸಿದರೆ, ದೇಶದಲ್ಲಿ ಈಗಿರುವಷ್ಟು ನಿರುದ್ಯೋಗ ಸಮಸ್ಯೆ ಇರಲಿಲ್ಲ. ಮೋದಿ ಹೇಳುವ ಅಂಕಿ-ಅಂಶಗಳು ಮೇಲೆ ಅನುಮಾನ ವ್ಯಕ್ತವಾಗುತ್ತಿದೆ. ಇದು ಅರ್ಥವಿಲ್ಲದ ಬಜೆಟ್ ಎಂದಿದ್ದಾರೆ.

ಕಳೆದ ನಾಲ್ಕು ವರ್ಷದ ಬಜೆಟ್‌ನಂತೆಯೇ, ಇದು ಕೂಡ ಮೋದಿಯ ಜುಮ್ಲಾ ಬಜೆಟ್. ಇದು ನಿರಾಶಾದಾಯಕ ಬಜೆಟ್ ಎಂದು ದಿನೇಶ್ ಗುಂಡೂರಾವ್ ಗುಡುಗಿದ್ದಾರೆ.

ಫೆ.6ರಂದು ಕೆಪಿಸಿಸಿ ವಿಸ್ತೃತ ಸಾಮಾನ್ಯ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ಬಳಿಕ ಲೋಕಸಭೆ ಚುನಾವಣೆ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ