ಪ್ರತಿಮೆ ನಿರ್ಮಾಣಕ್ಕೆ ಕೊಡುಗೈ ದಾನಿಯಾದ ಬಿಎಸ್ವೈ: ಕೆಂಪೇಗೌಡ, ಬಸವಣ್ಣ ಪ್ರತಿಮೆಗೆ 68 ಕೋಟಿ ರೂ.
ನಾಡಿನ ಪ್ರಸಿದ್ಧ ಭಕ್ತಿಧಾಮಗಳಾದ ಮಂತ್ರಾಲಯ, ವಾರಣಾಸಿ ಮತ್ತು ಶ್ರೀಶೈಲದಲ್ಲಿ ವಸತಿ ನಿಲಯ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web 5 Mar 2020, 8:06 pm
ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಮೆಗಳ ಸ್ಥಾಪನೆಗೆ ಅತಿ ಹೆಚ್ಚು ಅನುದಾನವನ್ನು ಮೀಸಲಿರಿಸಿದ್ದಾರೆ.
ಸಮಾಜ ಸುಧಾರಕ ಬಸವಣ್ಣ ಮತ್ತು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆಗಳ ಸ್ಥಾಪನೆಗೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹಣ ಮೀಸಲು ಇಡಲಾಗಿದೆ.
ಈ ಇಬ್ಬರು ಮಹನೀಯರ ಬೃಹತ್ ಪ್ರತಿಮೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬಜೆಟ್ನಲ್ಲಿ ಧಾರಾಳವಾಗಿ ಕಾಣಿಕೆ ನೀಡಿದ್ದಾರೆ.
ಬಸವ, ಕೆಂಪೇಗೌಡರ ಪ್ರತಿಮೆಗಳ ನಿರ್ಮಾಣಕ್ಕೆ ಒಟ್ಟು 68 ಕೋಟಿ ರೂ ಅನುದಾನ ನೀಡುವ ಭರವಸೆ ನೀಡಲಾಗಿದೆ.
ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುಮಾರು 100 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಲಾಗಿದೆ.
ಇದೇ ರೀತಿ ಚಿತ್ರದುರ್ಗದ ಮುರುಘಾಮಠದಲ್ಲಿ ಸುಮಾರು 300 ಅಡಿ ಎತ್ತರದ ಬಸವ ಪ್ರತಿಮೆ ನಿರ್ಮಾಣಕ್ಕೂ ಅನುದಾನ ಒದಗಿಸಲಾಗಿದೆ.
ಎರಡೂ ಪ್ರತಿಮೆಗಳ ನಿರ್ಮಾಣಕ್ಕೆ 66 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.
ಇದೇ ರೀತಿ ಪ್ರಸಿದ್ಧ ಭಕ್ತಿಧಾಮಗಳಾದ ಮಂತ್ರಾಲಯ, ವಾರಣಾಸಿ ಮತ್ತು ಶ್ರೀಶೈಲದಲ್ಲಿ ವಸತಿ ನಿಲಯ ನಿರ್ಮಾಣ ಮಾಡಲಾಗುವುದು ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಮಾಜ ಸುಧಾರಕ ಬಸವಣ್ಣ ಮತ್ತು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆಗಳ ಸ್ಥಾಪನೆಗೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹಣ ಮೀಸಲು ಇಡಲಾಗಿದೆ.
ಈ ಇಬ್ಬರು ಮಹನೀಯರ ಬೃಹತ್ ಪ್ರತಿಮೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬಜೆಟ್ನಲ್ಲಿ ಧಾರಾಳವಾಗಿ ಕಾಣಿಕೆ ನೀಡಿದ್ದಾರೆ.
ಬಸವ, ಕೆಂಪೇಗೌಡರ ಪ್ರತಿಮೆಗಳ ನಿರ್ಮಾಣಕ್ಕೆ ಒಟ್ಟು 68 ಕೋಟಿ ರೂ ಅನುದಾನ ನೀಡುವ ಭರವಸೆ ನೀಡಲಾಗಿದೆ.
ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುಮಾರು 100 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಲಾಗಿದೆ.
ಇದೇ ರೀತಿ ಚಿತ್ರದುರ್ಗದ ಮುರುಘಾಮಠದಲ್ಲಿ ಸುಮಾರು 300 ಅಡಿ ಎತ್ತರದ ಬಸವ ಪ್ರತಿಮೆ ನಿರ್ಮಾಣಕ್ಕೂ ಅನುದಾನ ಒದಗಿಸಲಾಗಿದೆ.
ಎರಡೂ ಪ್ರತಿಮೆಗಳ ನಿರ್ಮಾಣಕ್ಕೆ 66 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.
ಇದೇ ರೀತಿ ಪ್ರಸಿದ್ಧ ಭಕ್ತಿಧಾಮಗಳಾದ ಮಂತ್ರಾಲಯ, ವಾರಣಾಸಿ ಮತ್ತು ಶ್ರೀಶೈಲದಲ್ಲಿ ವಸತಿ ನಿಲಯ ನಿರ್ಮಾಣ ಮಾಡಲಾಗುವುದು ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.