ಆ್ಯಪ್ನಗರ

ಬಜೆಟ್‌ನಲ್ಲಿ ಬೆಂಗಳೂರಿಗೆ ಭರ್ಜರಿ ಗಿಫ್ಟ್‌ ಘೋಷಿಸಿದ ಸಿಎಂ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ತಮ್ಮ ಬಜೆಟ್‌ನಲ್ಲಿ ಬೆಂಗಳೂರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8772 ಕೋಟಿ ರೂ. ಅನುದಾನವನ್ನು ತೆಗೆದಿಟ್ಟಿದ್ದಾರೆ. ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ, ಔಟರ್‌ ರಿಂಗ್‌ ರೋಡ್‌, ವಿದ್ಯುತ್‌ ಚಿತಾಗಾರದಂತಹ ಯೋಜನೆಗಳನ್ನು ಯಡಿಯೂರಪ್ಪ ಸಿಲಿಕಾನ್‌ ಸಿಟಿಗಾಗಿ ಘೋಷಿಸಿದ್ದಾರೆ.

Vijaya Karnataka Web 5 Mar 2020, 12:07 pm
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ 7ನೇ ಬಜೆಟ್‌ನಲ್ಲಿ ಬೆಂಗಳೂರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಸಿಲಿಕಾನ್‌ ಸಿಟಿಗಾಗಿ ಹೊಸ ಯೋಜನೆಗಳನ್ನು ಪ್ರಕಟಿಸಿರುವ ಸಿಎಂ ಭಾರಿ ಅನುದಾನವನ್ನು ರಾಜಧಾನಿಯ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8772 ಕೋಟಿ ರೂ. ಅನುದಾನವನ್ನು ತೆಗೆದಿಡಲಾಗಿದೆ.
Vijaya Karnataka Web BENGALURU


ಔಟರ್‌ ರಿಂಗ್‌ ರೋಡ್‌
ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಿಂದ ಏರ್‌ಪೋರ್ಟ್‌ಗೆ ಔಟರ್‌ರಿಂಗ್‌ ರೋಡ್‌ ಯೋಜನೆಯನ್ನು ಸಿಎಂ ಯಡಿಯೂರಪ್ಪ ಈ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಈ ಯೋಜನೆಗಾಗಿ 14,500 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ತೆಗೆದಿಟ್ಟಿದ್ದು, ಒಟ್ಟು 56 ಕಿ.ಮೀ ದೂರದ ರಸ್ತೆ ನಿರ್ಮಣಾವಾಗಲಿದೆ.

1500 ಬಸ್‌ಗಳ ಖರೀದಿ
ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಈ ಬಜೆಟ್‌ನಲ್ಲಿ 1500 ಬಸ್‌ಗಳ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಇದಕ್ಕಾಗಿ ಬಿ.ಎಸ್‌.ಯಡಿಯೂರಪ್ಪ ಮುಂಗಡ ಪತ್ರದಲ್ಲಿ 600 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.

ಕರ್ನಾಟಕ ಬಜೆಟ್‌ 2020: ಸಂಪುಟ ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ!

ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ
ಬೆಂಗಳೂರು ನಗರಕ್ಕೆ ಭವಿಷ್ಯದ ಯೋಜನೆಯೊಂದನ್ನು ಪ್ರಕಟಿಸಿರುವ ಬಿಎಸ್‌ವೈ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಯೋಜನೆಯನ್ನು ಘೋಷಿಸಿದ್ದಾರೆ. ಮೆಟ್ರೋ ಮತ್ತು ಬಿಎಂಟಿಸಿ ನಿಲ್ದಾಣಗಳಿಗೆ ಸಂಪರ್ಕ ಸಾಧಿಸುವ ಸಲುವಾಗಿ ಎಲೆಕ್ಟ್ರಿಕ್‌ ಟ್ಯಾಕ್ಸಿ ಯೋಜನೆ ತರಲಾಗಿದೆ.

ನವನಗರೋತ್ತಾನ ಯೋಜನೆ
ನವನಗರೋತ್ತಾನ ಯೋಜನೆಗೆ 8344 ಕೋಟಿ ರೂ. ಅನುದಾನವನ್ನು ತೆಗೆದಿಡಲಾಗಿದ್ದು, ಯೋಜನೆಯಡಿ ಬೆಂಗಳೂರಿನ ಸುತ್ತಮುತ್ತಲ 110 ಹಳ್ಳಿಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಇನ್ನು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೆಗೌಡರ ಪ್ರತಿಮೆಯನ್ನು ಸ್ಥಾಪಿಸಲು 60 ಕೋಟಿ ರೂ. ಮೀಸಲಿಡಲಾಗಿದೆ.

ಬಿಎಸ್‌ವೈ ಬಜೆಟ್‌ 2020 Live: 7ನೇ ಬಾರಿಗೆ ಬಜೆಟ್‌ ಮಂಡಿಸುತ್ತಿರುವ ಯಡಿಯೂರಪ್ಪ

ಇನ್ನು, ಬೆಂಗಳೂರಿನ ನಾಲ್ಕು ಕಡೆ ಹೊಸ ವಿದ್ಯುತ್‌ ಚಿತಾಗಾರ, ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ 24 ಕಡೆ ಮೇಲ್ಸೇತುವೆಗಳ ನಿರ್ಮಾಣ ಮಾಡುವುದಾಗಿ ಹಾಗೂ 4 ಕಡೆ ಕಲಾಮಂದಿರಗಳನ್ನು ಸ್ಥಾಪಿಸುವುದಾಗಿ ಯಡಿಯೂರಪ್ಪ ಈ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ