ಆ್ಯಪ್ನಗರ

ರಾಜ್ಯ ಬಜೆಟ್: ಇಲಾಖಾವಾರು ಅನುದಾನ ಎಷ್ಟು?

ರಾಜ್ಯ ಮೈತ್ರಿ ಸರಕಾರದ ಮೊದಲ ಬಜೆಟ್‌ ಅನ್ನು ಸಿಎಂ ಕುಮಾರಸ್ವಾಮಿ ಗುರುವಾರ ಮಂಡನೆ ಮಾಡಿದ್ದು, ರೈತರ ಸಾಲಮನ್ನಾದಂತಹ ಪ್ರಮುಖ ಘೋಷಣೆ ಮಾಡಿದ್ದಾರೆ. ಅದರ ಜತೆಗೆ ಹಿಂದಿನ ಸರಕಾರ ಯೋಜನೆಗಳನ್ನು ಕೂಡ ಮುಂದುವರಿಸಿಕೊಂಡು ಹೋಗುವುದಾಗಿ ಹಣಕಾಸು ಖಾತೆಯ ಜವಾಬ್ದಾರಿಯನ್ನೂ ಹೊಂದಿರುವ ಕುಮಾರಸ್ವಾಮಿ ತಿಳಿಸಿದ್ದಾರೆ.

Vijaya Karnataka Web 5 Jul 2018, 6:12 pm
ಬೆಂಗಳೂರು: ರಾಜ್ಯ ಮೈತ್ರಿ ಸರಕಾರದ ಮೊದಲ ಬಜೆಟ್‌ ಅನ್ನು ಸಿಎಂ ಕುಮಾರಸ್ವಾಮಿ ಗುರುವಾರ ಮಂಡನೆ ಮಾಡಿದ್ದು, ರೈತರ ಸಾಲಮನ್ನಾದಂತಹ ಪ್ರಮುಖ ಘೋಷಣೆ ಮಾಡಿದ್ದಾರೆ. ಅದರ ಜತೆಗೆ ಹಿಂದಿನ ಸರಕಾರ ಯೋಜನೆಗಳನ್ನು ಕೂಡ ಮುಂದುವರಿಸಿಕೊಂಡು ಹೋಗುವುದಾಗಿ ಹಣಕಾಸು ಖಾತೆಯ ಜವಾಬ್ದಾರಿಯನ್ನೂ ಹೊಂದಿರುವ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web CM Hdk


2 ಲಕ್ಷದ 25 ಸಾವಿರ ಕೋಟಿ ಗಾತ್ರದ ಬಜೆಟ್‌ನಲ್ಲಿ ವಿವಿಧ ಇಲಾಖೆಗೆ ಮೀಸಲಿರಿಸಿದ ಅನುದಾನದ ವಿವರ ಇಲ್ಲಿದೆ. ಕಂದಾಯ ಇಲಾಖೆಗೆ 7,180 ಕೋಟಿ ರೂ ಅನುದಾನ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಗೆ ಶೇ. 4ರಂತೆ 10,200 ಕೋಟಿ ರೂ, ಪ್ರಾಥಮಿಕ ಶಿಕ್ಷಣ ಇಲಾಖೆಗೆ 150 ಕೋಟಿ ರೂ. ಸಹಿತ ಶಿಕ್ಷಣ ಕ್ಷೇತ್ರಕ್ಕೆ ಶೇ. 11ರಷ್ಟು ಅಂದರೆ 26,581 ಕೋಟಿ ರೂ. ಅನುದಾನ ನೀಡಲಾಗಿದೆ.

ಜಲ ಸಂಪನ್ಮೂಲ ಇಲಾಖೆಗೆ 18,142 ಕೋಟಿ ರೂ. ಅನುದಾನ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ 7642 ಕೋಟಿ ರೂ. ಹಣ ಮೀಸಲಿಡಲಾಗಿದೆ. ಜತೆಗೆ ಜಲಸಂಪನ್ಮೂಲ ಇಲಾಖೆಗೆ 18,142 ಕೋಟಿ ರೂ, ನಗರಾಭಿವೃದ್ಧಿ 17,727 ಕೋಟಿ ರೂ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 14,449 ಕೋಟಿ ರೂ. ಹಣ ಒದಗಿಸಲಾಗುತ್ತದೆ.

ವಿದ್ಯುತ್ ಇಲಾಖೆಗೆ14,123 ಕೋಟಿ ರೂ., ಸಮಾಜ ಕಲ್ಯಾಣ ಇಲಾಖೆಗೆ 11,788 ಕೋಟಿ ರೂ., ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 7,953 ಕೋಟಿ ರೂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ 9,317 ಕೋಟಿ ರೂ., ಕೃಷಿ ಮತ್ತು ತೋಟಗಾರಿಕೆಗೆ 7,642 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ 5,725 ಕೋಟಿ ರೂ. ಮತ್ತು ವಸತಿ 3,942 ಕೋಟಿ ರೂ., ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ 3,866 ಕೋಟಿ ರೂ. ಮೀಸಲಿಡಲಾಗಿದೆ. ಇತರೆ ಇಲಾಖೆಗಳಿಗೆ 82,196 ಕೋಟಿ ರೂ. ಮೀಸಲಿಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ