ಆ್ಯಪ್ನಗರ

ಕುಮಾರಣ್ಣನ ಬಜೆಟ್‌ನಲ್ಲಿ ಬೆಂಗಳೂರು ಮಹಾನಗರಕ್ಕೆ ಕೊಡುಗೆಗಳೇನು ಗೊತ್ತಾ ?

ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಮಂಡಿಸಿದ ಸಿಎಂ ಕುಮಾರಸ್ವಾಮಿ ಬೆಂಗಳೂರು ಮಹಾನಗರಕ್ಕೆ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ. ನಮ್ಮ ಮೆಟ್ರೋ ರೈಲು ಯೋಜನೆ ಹಂತ-3ರ ವ್ಯಾಪ್ತಿಯಲ್ಲಿ ಒಟ್ಟು 95 ಕಿ.ಮೀ.ಗಳ ಉದ್ದದ ಮಾರ್ಗದ ಅಧ್ಯಯನ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

Vijaya Karnataka Web 5 Jul 2018, 3:56 pm
ಬೆಂಗಳೂರು: ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಮಂಡಿಸಿದ ಸಿಎಂ ಕುಮಾರಸ್ವಾಮಿ ಬೆಂಗಳೂರು ಮಹಾನಗರಕ್ಕೆ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ. ನಮ್ಮ ಮೆಟ್ರೋ ರೈಲು ಯೋಜನೆ ಹಂತ-3ರ ವ್ಯಾಪ್ತಿಯಲ್ಲಿ ಒಟ್ಟು 95 ಕಿ.ಮೀ.ಗಳ ಉದ್ದದ ಮಾರ್ಗದ ಅಧ್ಯಯನ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ ಉತ್ತಮ ಸಾರಿಗೆ ಸಂಪರ್ಕ ಏರ್ಪಡಿಸಲು 15,825 ಕೋಟಿ ರೂ.ಗಳ ವೆಚ್ಚದಲ್ಲಿ ಪರಸ್ಪರ ಸಂಪರ್ಕ ಹೊಂದಿರುವ ಆರು ಎಲಿವೇಟೆಡ್ ಕಾರಿಡಾರ್‌ಗಳ ನಿರ್ಮಾಣ ಮಾಡುವುದಾಗಿಯೂ ತಿಳಿಸಿದ್ದಾರೆ.
Vijaya Karnataka Web kumarswamy


ಬೆಳ್ಳಂದೂರು ಕೆರೆಯ ಸರ್ವಾಂಗೀಣ ಪುನಶ್ಚೇತನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಬಜೆಟ್‌ನಲ್ಲಿ 50 ಕೋಟಿ ರೂ. ಅನುದಾನ ನೀಡಲಾಗಿದೆ. ಜತೆಗೆ,
ಮುಂದಿನ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ ಪ್ರದೇಶಗಳ ಕೃಷಿ ಚಟುವಟಿಕೆಗಳ ಹನಿ ನೀರಾವರಿಗೆ ಈ ನೀರನ್ನು ಬಳಸುವ ಉದ್ದೇಶ ಹೊಂದಿದೆ ಎಂದೂ ಮಾಹಿತಿ ನೀಡಿದರು.

ಅಲ್ಲದೆ, ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಭೂಮಾಲೀಕರಿಗೆ ಎರಡನೇ ಹಂತದಲ್ಲಿ 3000 ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ ಪ್ಲಾಸ್ಟಿಕ್‍ನಿಂದ ಪ್ಯಾಕ್ ಮಾಡಿದ ವಸ್ತುಗಳ ಮೇಲೆ ಶೇ. 3 ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಹಾಗೆ, ಬೆಂಗಳೂರು ನಗರದಲ್ಲಿ ಬಡವರಿಗೆ ಬಹುಮಹಡಿ ಮನೆಗಳ ನಿರ್ಮಾಣ ಮಾಡುವುದಾಗಿಯೂ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಇನ್ನು, ಪೀಣ್ಯ ಕೈಗಾರಿಕಾ ವಲಯದಲ್ಲಿ ರಾಸಾಯನಿಕ ತ್ಯಾಜ್ಯ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ನೀಡಲಾಗಿದ್ದು, ಬೆಂಗಳೂರಿನ ಬಾರ್ ಕೌನ್ಸಿಲ್‍ನ ನ್ಯಾಯಾಂಗ ಚಟುವಟಿಕೆಗಳಿಗೆ5 ಕೋಟಿ ರೂ. ಆರ್ಥಿಕ ನೆರವು ನೀಡುವುದಾಗಿಯೂ ಬಜೆಟ್‌ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ