ಆ್ಯಪ್ನಗರ

ನೋಟು ನಿಷೇಧದಿಂದ ಜನ ಸಾಮಾನ್ಯರಿಗೆ ಸಂಕಷ್ಟ: ಬಜೆಟ್‌ನಲ್ಲಿ ಸಿಎಂ

ಪ್ರಧಾನಿ ಅವರ ನೋಟು ನಿಷೇಧದಿಂದ ಜನ ಸಾಮಾನ್ಯರು ಬಹಳಷ್ಟು ಸಂಕಷ್ಟ ಅನುಭವಿಸುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್‌ ಮಂಡನೆಯಲ್ಲಿ ಹೇಳಿದ್ದಾರೆ.

ವಿಕ ಸುದ್ದಿಲೋಕ 15 Mar 2017, 1:12 pm
ಬೆಂಗಳೂರು: ಪ್ರಧಾನಿ ಅವರ ನೋಟು ನಿಷೇಧದಿಂದ ಜನ ಸಾಮಾನ್ಯರು ಬಹಳಷ್ಟು ಸಂಕಷ್ಟ ಅನುಭವಿಸುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್‌ ಮಂಡನೆಯಲ್ಲಿ ಹೇಳಿದ್ದಾರೆ.
Vijaya Karnataka Web karnataka budget 2017 note ban
ನೋಟು ನಿಷೇಧದಿಂದ ಜನ ಸಾಮಾನ್ಯರಿಗೆ ಸಂಕಷ್ಟ: ಬಜೆಟ್‌ನಲ್ಲಿ ಸಿಎಂ


ಯಾವುದೇ ಸಾರ್ವಜನಿಕ ನೀತಿಯು ನಿಗದಿತ ಗುರಿಯನ್ನು ಸಾಧಿಸುವ ಉದ್ದೇಶದೊಂದಿಗೆ ಅದನ್ನು ಸೂಕ್ತವಾಗಿ ಕಾರ್ಯಗತಗೊಳಿಸುವಲ್ಲೂ ಹೆಚ್ಚು ಸಮರ್ಥವಾಗಿರಬೇಕು ಎಂದು ಅವರು ಹೇಳಿದ್ದಾರೆ.

ಜನರಿಗೆ ಬಹಳಷ್ಟು ಸಂಕಷ್ಟವುಂಟು ಮಾಡಿದ್ದ ನೋಟು ಅಪಮೌಲ್ಯೀಕರಣದಿಂದ ಸಾಧಿಸಿದ ಫಲಶೃತಿ ಏನು ಎಂಬುದನ್ನು ಸರಕಾರ ಇನ್ನು ತಿಳಿಸಬೇಕಿದೆ ಎಂದರು. ರೈತರು ಮತ್ತು ಗ್ರಾಮೀಣರಿಗೆ ಸೇವೆ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವ ಸಹಕಾರ ವಲಯವು ನೋಟು ಅಪಮೌಲ್ಯೀಕರಣದಿಂದಾಗಿ ಸಂಪೂರ್ಣ ಸ್ತಬ್ಧಗೊಂಡಿತು. ವಹಿಸಿದ್ದ ಜವಾಬ್ದಾರಿ ನಿರ್ವಹಿಸಲು ಬ್ಯಾಂಕಿಂಗ್‌ ವ್ಯವಸ್ಥೆ ಸನ್ನದ್ಧಗೊಳ್ಳದೆ ಇದ್ದುದು ಅದರ ಅನುಷ್ಠಾನದ ರೀತಿಯಲ್ಲಿನ ಸಿದ್ಧತೆಯ ಕೊರತೆಯನ್ನು ಜಾಹೀರುಪಡಿಸಿತು. ಅನುಷ್ಠಾನದ ನಡುವೆಯೇ ಗುರಿಯ ದಿಕ್ಕನ್ನು ಬದಲಿಸಲಾಯಿತು, ನಿಯಮಗಳನ್ನು ಪದೇ ಪದೆ ಪರಿಷ್ಕರಿಸಲಾಯಿತು ಎಂದು ಮುಖ್ಯಮಂತ್ರಿ ದೂರಿದರು.

ಅಪಮೌಲ್ಯೀಕರಣದ ಅಗತ್ಯತೆಯೇ ಚರ್ಚಾಸ್ಪದವಾಗಿದೆ. ಕೇಂದ್ರ ಸರಕಾರ ಮತ್ತು ಆರ್‌ಬಿಐ ಕನಿಷ್ಟ ಪಕ್ಷ ಮುಂದೆ ಒದಗಬಹುದಾದ ತೊಂದರೆಗಳನ್ನು ಮುಂದಾಲೋಚಿಸಿ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಕಾರ್ಯಸಾಧ್ಯವಾದ ಮತ್ತು ಸಶಕ್ತ ವ್ಯವಸ್ಥೆಯನ್ನು ಜಾರಿಗೆ ತರಬೇಕಿತ್ತು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ