ಆ್ಯಪ್ನಗರ

ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಿಗೆ ಏನೇನು?

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರಕಾರದ ಮೊದಲ ಬಜೆಟ್, ಜುಲೈ 05 ಗುರುವಾರದಂದು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ನಲ್ಲಿ ಜೆಡಿಎಸ್ ಪ್ರಾಬಲ್ಯದ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಕರಾವಳಿ ಪ್ರದೇಶಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಬಗ್ಗೆ ಗಂಭೀರವಾದ ಆರೋಪಗಳು ಕೇಳಿಬಂದಿದೆ. ಅಷ್ಟಕ್ಕೂ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಗೆ ಘೋಷಿಸಿರುವ ಯೋಜನೆಗಳೇನು? ಈ ಬಗ್ಗೆ ವಿವರಗಳನ್ನು ಕೊಡಲಾಗಿದೆ.

Vijaya Karnataka Web 5 Jul 2018, 3:30 pm
ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರಕಾರದ ಮೊದಲ ಬಜೆಟ್, ಜುಲೈ 05 ಗುರುವಾರದಂದು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ನಲ್ಲಿ ಜೆಡಿಎಸ್ ಪ್ರಾಬಲ್ಯದ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಕರಾವಳಿ ಪ್ರದೇಶಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಬಗ್ಗೆ ಗಂಭೀರವಾದ ಆರೋಪಗಳು ಕೇಳಿಬಂದಿದೆ. ಅಷ್ಟಕ್ಕೂ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಗೆ ಘೋಷಿಸಿರುವ ಯೋಜನೆಗಳೇನು? ಈ ಬಗ್ಗೆ ವಿವರಗಳನ್ನು ಕೊಡಲಾಗಿದೆ.
Vijaya Karnataka Web hd-kumaraswamy-04


ಮೈಸೂರು ಜಿಲ್ಲೆಗೆ ಏನೇನು?

  • 3 ಕೋಟಿ ರೂ. ವೆಚ್ಚದಲ್ಲಿ ರೇಶ್ಮೆ ಗೂಡು. ಮಾರುಕಟ್ಟೆ ಸ್ಥಾಪನೆ; 2018-19ರಲ್ಲಿ 1 ಕೋಟಿ ರೂ. ಅನುದಾನ.
  • ಹೃದ್ರೋಗ ಮತ್ತು ಕ್ಯಾನ್ಸರ್ ಹಾಗೂ ಇತರ ರೋಗಗಳಿಗೆ ಸಂಬಂಧಿಸಿದ ತೃತೀಯ ಹಂತದ ಆರೋಗ್ಯ ಸೇವೆ ಒದಗಿಸಲು ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.
  • ಚಾಮರಾಜನಗರ ವೈದ್ಯಕೀಯ ಕಾಲೇಜುಗಳಲ್ಲಿ 450 ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆ ಸ್ಥಾಪನೆ. 200 ಕೋಟಿ ರೂ. ಅನುದಾನ.
  • ಐಸಿಬಿ ಘಟಕ.
  • ಮೈಸೂರು ನಗರ ಹಾಗೂ ಮಾರ್ಗ ಮಧ್ಯದ 92 ಹಳ್ಳಿಗಳಿಗೆ ಹಳೇ ಉಂಡವಾಡಿ ಬಳಿ ಕಾವೇರಿ ನದಿಯಿಂದ ಹೆಚ್ಚುವರಿಯಾಗಿ 300 ಎಂಎಲ್‌ಡಿ ನೀರು ಪೂರೈಕೆ ಯೋಜನೆಗೆ 50 ಕೋಟಿ ರೂ. ಅನುದಾನ.

ಮಂಡ್ಯ ಜಿಲ್ಲೆಗೆ ಏನೇನು?
  • ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯನ್ನು 800 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಅನುದಾನ.
  • ಜಗತ್ ಪ್ರಸಿದ್ಧ ಗಗನಚುಕ್ಕಿ, ಭರಚುಕ್ಕಿ ಜಲಪಾತ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ಹೆಚ್ಚುವರಿ ಪ್ರವಾಸಿ ಸೌಲಭ್ಯ ಒದಗಿಸಲು 5 ಕೋಟಿ ರೂ. ಅನುದಾನ.
  • ಲೋಕಪಾವನಿ ನದಿಯಿಂದ ಮಂಡ್ಯ ಜಿಲ್ಲೆಯ ಹಾಗೂ ಇತರೆ ಕೆರೆಗಳಿಗೆ ನೀರು ತುಂಬಿಸುವ ಹಾಗೂ ಮಂಡ್ಯ ತಾಲ್ಲೂಕಿನ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗೆ 30 ಕೋಟಿ ರೂ.ಗಳ ಅನುದಾನ.
  • ಮಂಡ್ಯ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್.

ಹಾಸನ ಜಿಲ್ಲೆಗೆ ಏನೇನು?
  • ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ.
  • ಹಾಸನ ಹಾಲು ಒಕ್ಕೂಟದಲ್ಲಿ 15 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ 50 ಕೋಟಿ ರೂ.
  • ನಗರಕ್ಕೆ ರೂ. 30 ಕೋಟಿ ವೆಚ್ಚದಲ್ಲಿ ರಿಂಗ್ ರೋಡ್ ಸೌಲಭ್ಯ.
  • ಸ್ನಾನಗೃಹ ಉಪಕರಣಗಳ ಉತ್ಪಾದನಾ ಜಿಲ್ಲೆಯಾಗಿ ಅಭಿವೃದ್ದಿ.
  • ಹಾಸನ ತಾಲೂಕಿಗೆ 160 ಕೆರೆಗಳಿಗೆ ಹೇಮಾವತಿ ನೀರು.
  • ಇದಕ್ಕಾಗಿ 70 ಕೋಟಿ ರೂಪಾಯಿಗಳ ಯೋಜನೆ ಜಾರಿ.
  • ಬೇಲೂರಿನಲ್ಲಿ ಪ್ರವಾಸಿ ಗೈಡ್ ಗಳಿಗೆ ತರಬೇತಿ ನೀಡಲು ಖಾಸಗಿ ತರಬೇತಿ ಸಂಸ್ಥೆ.
  • ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಪ್ರೋತ್ಸಾಹ.
  • ಕೆಎಸ್ಆರ್‌ಟಿಸಿ ಆಧುನಿಕರಣಕ್ಕೆ 10 ಕೋಟಿ.
  • ಹಾಸನ ನಗರದ ಚನ್ನಪಟ್ಟಣ ಕೆರೆಯ ಅಭಿವೃದ್ಧಿಗೆ 36 ಕೋಟಿ ರೂ. ಅನುದಾನ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ