ಆ್ಯಪ್ನಗರ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಬಜೆಟ್‌ನಲ್ಲಿ 25 ಕೋಟಿ ರೂ. ಘೋಷಣೆ

ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಮಂಡಿಸಿದ ಸಿಎಂ ಕುಮಾರಸ್ವಾಮಿ ಜಾತಿ, ಧರ್ಮಗಳಿಗೂ ಕೊಡುಗೆ ನೀಡಿದ್ದಾರೆ. ಈ ಪೈಕಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಹಾಗೂ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Vijaya Karnataka Web 5 Jul 2018, 5:05 pm
ಬೆಂಗಳೂರು: ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಮಂಡಿಸಿದ ಸಿಎಂ ಕುಮಾರಸ್ವಾಮಿ ಜಾತಿ, ಧರ್ಮಗಳಿಗೂ ಕೊಡುಗೆ ನೀಡಿದ್ದಾರೆ. ಈ ಪೈಕಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಹಾಗೂ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
Vijaya Karnataka Web cm budget


ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ನೆರವು ನೀಡಬೇಕೆಂದು ಈ ಸಮುದಾಯದ ಬಹಳ ದಿನಗಳ ಬೇಡಿಕೆಯಾಗಿದೆ. ಹೀಗಾಗಿ ನಮ್ಮ ಸರಕಾರವು ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಿದೆ. ಅಲ್ಲದೆ, ಇದಕ್ಕೆ 25 ಕೋಟಿ ರೂ.ಗಳನ್ನು ಒದಗಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷೊಸಿದ್ದಾರೆ.

ಅಲ್ಲದೆ, ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ ಆಚರಿಸುವುದಾಗಿಯೂ ಕುಮಾರಸ್ವಾಮಿ ತಿಳಿಸಿದ್ದಾರೆ. ಆದಿ ಶಂಕರಾಚಾರ್ಯರು ನಮ್ಮ ಧಾರ್ಮಿಕ ಪರಂಪರೆಯ ಮೇರು ವ್ಯಕ್ತಿಗಳಾಗಿದ್ದಾರೆ. ಇವರ ಗೌರವಾರ್ಥ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ