ಬಳ್ಳಾರಿ: ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎಂಟು ಕೈಗಾರಿಕೋದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ಎಂಟು ಕೈಗಾರಿಕೋದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 40.73 ಕೋಟಿ ರೂ. ವೆಚ್ಚದಲ್ಲಿ ರೈಸ್ ಮಿಲ್ ಇಂಡಸ್ಟ್ರಿ, ರೆಡಿಮೇಡ್ ಗಾರ್ಮೆಂಟ್, ಕೋಲ್ಡ್ ಸ್ಟೋರೇಜ್ ಸೇರಿ ಒಟ್ಟು 8 ಕೈಗಾರಿಕೋದ್ಯಮಗಳ ಸ್ಥಾಪನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಕೈಗಾರಿಕೆಗಳ ನಿರ್ಮಾಣದಿಂದ ಜಿಲ್ಲೆಗಳಲ್ಲಿ ಸುಮಾರು 543 ಉದ್ಯೋಗಗಳು ಸೃಷ್ಟಿಯಾಗಲಿದ್ದು, ನಿರುದ್ಯೋಗಿಗಳಿಗೆ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ 2020-25ರವರೆಗಿನ ನೂತನ ಕೈಗಾರಿಕಾ ನೀತಿಯನ್ನು ಜಿಲ್ಲಾಮಟ್ಟದಲ್ಲಿ ಪರಿಚಯಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ ಸೋಮಶೇಖರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ರವಿಕುಮಾರ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 40.73 ಕೋಟಿ ರೂ. ವೆಚ್ಚದಲ್ಲಿ ರೈಸ್ ಮಿಲ್ ಇಂಡಸ್ಟ್ರಿ, ರೆಡಿಮೇಡ್ ಗಾರ್ಮೆಂಟ್, ಕೋಲ್ಡ್ ಸ್ಟೋರೇಜ್ ಸೇರಿ ಒಟ್ಟು 8 ಕೈಗಾರಿಕೋದ್ಯಮಗಳ ಸ್ಥಾಪನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಕೈಗಾರಿಕೆಗಳ ನಿರ್ಮಾಣದಿಂದ ಜಿಲ್ಲೆಗಳಲ್ಲಿ ಸುಮಾರು 543 ಉದ್ಯೋಗಗಳು ಸೃಷ್ಟಿಯಾಗಲಿದ್ದು, ನಿರುದ್ಯೋಗಿಗಳಿಗೆ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ 2020-25ರವರೆಗಿನ ನೂತನ ಕೈಗಾರಿಕಾ ನೀತಿಯನ್ನು ಜಿಲ್ಲಾಮಟ್ಟದಲ್ಲಿ ಪರಿಚಯಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ ಸೋಮಶೇಖರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ರವಿಕುಮಾರ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.