ಆ್ಯಪ್ನಗರ

ಸಾರಿಗೆ ವಲಯದಲ್ಲಿ ಉದ್ಯೋಗ ಸೃಷ್ಟಿಗೆ ಎನ್‌ಡಿಎ ಆದ್ಯತೆ

ರೈಲ್ವೆ, ನದಿಗಳ ಜೋಡಣೆ ಮತ್ತು ಹೆದ್ದಾರಿ ವಿಸ್ತರಣೆ ಯೋಜನೆಗಳಿಗೆ ಹೆಚ್ಚಿನ ಹಣ ಹೋಗಲಿದೆ. ಹೆಚ್ಚುವರಿಯಾಗಿ ರಕ್ಷಣಾ ವಲಯದ ಆಧುನೀಕರಣಕ್ಕೆ 9 ಲಕ್ಷ ಕೋಟಿ ರೂ. ಹಂಚಿಕೆ ಮಾಡುವ ಯೋಜನೆಯೂ ಇದೆ.

TNN 27 May 2019, 9:46 am
ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ಮುಂದಿನ 5 ವರ್ಷಗಳಲ್ಲಿ ರೈಲ್ವೆ, ಹೆದ್ದಾರಿ, ನದಿಗಳ ಜೋಡಣೆ ಸೇರಿದಂತೆ ಸಾರಿಗೆ ವಲಯಕ್ಕೆ 30 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡುವ ಸಾಧ್ಯತೆ ಇದೆ. ಮೂಲ ಸೌಕರ್ಯ ವಲಯ ಉತ್ತೇಜಿಸುವ ಉದ್ದೇಶಿತ 100 ಲಕ್ಷ ಕೋಟಿ ರೂ.ಗಳ ಹೂಡಿಕೆ ಯೋಜನೆಯಲ್ಲಿ ಸಾರಿಗೆ ವಲಯದ ಪಾಲು ಮೂರನೇ ಒಂದು ಭಾಗದಷ್ಟಿದೆ.
Vijaya Karnataka Web Job


ಈ ಕ್ರಮದಿಂದ ಆರ್ಥಿಕತೆ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ. ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಬಿಜೆಪಿಯು ಭವಿಷ್ಯದ ಹೂಡಿಕೆಗಳಿಗೆ ಸಂಬಂಧಿಸಿದ ನೀಲಿನಕ್ಷೆಯನ್ನು ತಯಾರಿಸಿತ್ತು. ಅದರ ಪ್ರಕಾರ, ರೈಲ್ವೆ, ನದಿಗಳ ಜೋಡಣೆ ಮತ್ತು ಹೆದ್ದಾರಿ ವಿಸ್ತರಣೆ ಯೋಜನೆಗಳಿಗೆ ಹೆಚ್ಚಿನ ಹಣ ಹೋಗಲಿದೆ. ಹೆಚ್ಚುವರಿಯಾಗಿ ರಕ್ಷಣಾ ವಲಯದ ಆಧುನೀಕರಣಕ್ಕೆ 9 ಲಕ್ಷ ಕೋಟಿ ರೂ. ಹಂಚಿಕೆ ಮಾಡುವ ಯೋಜನೆಯೂ ಇದೆ.

ಮುಂದಿನ 5 ವರ್ಷಗಳಲ್ಲಿ ಬುಲೆಟ್‌ ರೈಲುಗಳಿಗಾಗಿ ಹೊಸ ಕಾರಿಡಾರ್‌ಗಳ ನಿರ್ಮಾಣಕ್ಕೆ 10 ಲಕ್ಷ ಕೋಟಿ ರೂ. ಮತ್ತು ಬಂದರು ವಲಯಕ್ಕೆ 3 ಲಕ್ಷ ಕೋಟಿ ರೂ. ಹಂಚಿಕೆ ಮಾಡುವ ಆಶಯವನ್ನು ಬಿಜೆಪಿ ಸರಕಾರ ಹೊಂದಿದೆ. ರೈಲ್ವೆ, ಬಂದರು, ಏರ್‌ಪೋರ್ಟ್‌ಗಳ ಜೊತೆಗೆ ಶಿಕ್ಷಣ ಮತ್ತು ಆರೋಗ್ಯ, ಕೃಷಿ ವಲಯಗಳಿಗೂ ಹೆಚ್ಚಿನ ಹಂಚಿಕೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

2013-14ರಿಂದ ಬಂಡವಾಳ ವೆಚ್ಚವು ಶೇ.113ರಷ್ಟು ಏರಿಕೆಯಾಗಿದೆ. ಮುಂದಿನ 5 ವರ್ಷಗಳಲ್ಲಿ ಜಿಡಿಪಿ ತ್ವರಿತ ಬೆಳವಣಿಗೆಗೆ ಪೂರಕವಾಗಿ ಹೂಡಿಕೆಗಳನ್ನು ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ. ಬಿಜೆಪಿಯ ಬ್ಲೂಪ್ರಿಂಟ್‌ನಲ್ಲಿ 37 ನದಿಗಳನ್ನು ಜೋಡಣೆ ಮಾಡುವ ಬಗ್ಗೆ ಸಲಹೆ ನೀಡಲಾಗಿದೆ. ಈ ಯೋಜನೆಯಿಂದ ನೀರಿನ ಕೊರತೆಯಿರುವ ಪ್ರದೇಶಗಳಲ್ಲಿ ಕೃಷಿ ಮತ್ತು ಕುಡಿಯುವ ನೀರಿಗೆ ಜೀವ ದೊರೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ