ಹೊಸದಿಲ್ಲಿ: ಕಲ್ಲಿದ್ದಲು ಲಭ್ಯವಿರುವ ಪ್ರದೇಶಗಳಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಕಾರಣ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯಗೊಂಡಿದೆ. ಇದರಿಂದಾಗಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಭಾರೀ ಕುಸಿತವಾಗಿದೆ. ದಿಲ್ಲಿ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿದ್ಯುತ್ ಬಿಕ್ಕಟ್ಟು ತಲೆದೋರಿದೆ. ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ತಮ್ಮ ಒಟ್ಟು ಸಾಮರ್ಥ್ಯದ ಅರ್ಧಕ್ಕಿಂತಲೂ ಕಡಿಮೆ ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ದೇಶಾದ್ಯಂತ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಸ್ಟಾಕ್ ಕಡಿಮೆಯಾದ ನಂತರ ವಿದ್ಯುತ್ ಉತ್ಪಾದನೆಯನ್ನು ಕಡಿಮೆ ಮಾಡುತ್ತವೆ. ಈ ಸ್ಥಾವರಗಳಿಗೆ 15ರಿಂದ 30 ದಿನಗಳೊಳಗೆ ಕಲ್ಲಿದ್ದಲು ಪೂರೈಸಬೇಕಿದೆ. ಹಾಗೆ ನೋಡಿದರೆ ದೇಶಾದ್ಯಂತ ಒಟ್ಟು 135 ಕಲ್ಲಿದ್ದಲು ಆಧಾರಿತ ಉಷ್ಣವಿದ್ಯುತ್ ಸ್ಥಾವರಗಳಿವೆ. ಈ ಸ್ಥಾವರಗಳು ದೇಶಕ್ಕೆ ಬೇಕಿರುವ ಒಟ್ಟು ವಿದ್ಯುತ್ನ ಶೇ.70ರಷ್ಟು ಪೂರೈಕೆ ಮಾಡುತ್ತಿವೆ. ಆದರೆ, ಈ ಸ್ಥಾವರಗಳಲ್ಲಿ ಎರಡು ದಿನಕ್ಕಾಗುವಷ್ಟು ಕಲ್ಲಿದ್ದಲು ಮಾತ್ರವೇ ಸ್ಟಾಕ್ ಇದೆ. ಇದರಿಂದ ಕೆಲವೇ ದಿನಗಳಗಳಿ ತೀವ್ರ ವಿದ್ಯುತ್ ಬಿಕ್ಕಟ್ಟು ಉಂಟಾಗಲಿದೆ. ಕಲ್ಲಿದ್ದಲು ಕೊರತೆಯಿಂದಾಗಿ ದಿಲ್ಲಿ ಸೇರಿದಂತೆ ಹಲವು ರಾಜ್ಯಗಳು ವಿದ್ಯುತ್ ಕೊರತೆ ಎದುರಿಸಲಿವೆ. ಯಾವ ರಾಜ್ಯಗಳಲ್ಲಿ ವಿದ್ಯುತ್ ಅಭಾವ ಎದುರಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಪಂಜಾಬ್: ಪಂಜಾಬ್ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ತೀವ್ರ ಕಲ್ಲಿದ್ದಲು ಕೊರತೆ ಎದುರಾಗಿದೆ. ಪಿಎಸ್ಪಿಸಿಎಲ್ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆಯನ್ನು ಕಡಿತಗೊಳಿಸಲಾಗಿದೆ. ಇದರಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ನಿಯಮಿತವಾಗಿ ಲೋಡ್ ಶೆಡ್ಡಿಂಗ್ ಜಾರಿಗೆ ತರಲು ನಿರ್ಧರಿಸಿದೆ. ಅಲ್ಲಿನ ರಾಜ್ಯ ಸರ್ಕಾರವು ಕಲ್ಲಿದ್ದಲು ಕೊರತೆಗೆ ಕೇಂದ್ರ ಸರಕಾರವೇ ಕಾರಣ ಎಂದು ದೂಷಿಸಿದೆ. ಕಲ್ಲಿದ್ದಲು ಕೊರತೆಯಿಂದಾಗಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳು ಕಡಿಮೆ ಪ್ರಮಾಣದಲ್ಲಿ ವಿದ್ಯುತ್ ತಯಾರಿಸುತ್ತಿವೆ ಎಂದು ಪಂಜಾಬ್ ರಾಜ್ಯ ವಿದ್ಯುತ್ ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜಸ್ಥಾನ: ರಾಜ್ಯದಲ್ಲಿ ಈಗಾಗಲೇ ಪ್ರತಿನಿತ್ಯ ಒಂದು ಗಂಟೆ ಕಾಲ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಲ್ಲಿದ್ದಲು ಕೊರತೆ ಹೀಗೆಯೇ ಮುಂದುವರಿದರೆ, ಲೋಡ್ಶೆಡ್ಡಿಂಗ್ ಸಮಯ ಇನ್ನೂ ಹೆಚ್ಚಲಿದೆ. ಟಾಟಾ ಪವರ್ ಗುಜರಾತ್ನ ಮುಂದ್ರಾದಲ್ಲಿನ ತನ್ನ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಗುಜರಾತ್ಗೆ 1,850 ಮೆಗಾವಾಟ್, ಪಂಜಾಬ್ಗೆ 475 ಮೆಗಾವಾಟ್, ರಾಜಸ್ಥಾನಕ್ಕೆ 380 ಮೆಗಾವಾಟ್, ಮಹಾರಾಷ್ಟ್ರಕ್ಕೆ 760 ಮೆಗಾವಾಟ್ ಮತ್ತು ಹರಿಯಾಣಕ್ಕೆ 380 ಮೆಗಾವಾಟ್ ವಿದ್ಯುತ್ ಸರಬರಾಜು ಮಾಡುವುದಾಗಿ ಟಾಟಾ ಪವರ್ ಒಪ್ಪಂದಕ್ಕೆ ಸಹಿ ಹಾಕಿದೆ. ಆದರೆ ಈ ವಿದ್ಯುತ್ ಸ್ಥಾವರ ಕಲ್ಲಿದ್ದಲು ಕೊರತೆಯಿಂದ ಈಗಾಗಲೇ ಸ್ಥಗಿತಗೊಂಡಿದೆ.
ತಮಿಳುನಾಡು: ಚನ್ನೈ ನಗರದಲ್ಲಿ ನಿರ್ವಹಣಾ ಕಾರ್ಯಗಳು ಪ್ರಗತಿಯಲ್ಲಿರುವ ಸಲುವಾಗಿ ಕೆಲವು ಭಾಗಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ತಮಿಳುನಾಡು ಉತ್ಪಾದನೆ ಮತ್ತು ವಿತರಣಾ ನಿಗಮ (Tangedco) ಹೇಳಿದೆ.
ಆಂಧ್ರಪ್ರದೇಶ: ಆಂಧ್ರಪ್ರದೇಶವು ಪ್ರತಿದಿನ ಸುಮಾರು 185-190 ಮೆಗಾ ಯುನಿಟ್ (MU) ಗ್ರಿಡ್ ಬೇಡಿಕೆಯನ್ನು ಪೂರೈಸುತ್ತಿದೆ. APGENCO ವಿದ್ಯುತ್ ಸ್ಥಾವರಗಳು ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆಯ ಪೈಕಿ ಶೇ. 45 ರಷ್ಟು ವಿದ್ಯುತ್ ಅನ್ನು ಪೂರೈಸುತ್ತಿವೆ. ಆದರೆ ಈ ಉತ್ಪಾದನಾ ಕೇಂದ್ರಗಳು ಕೇವಲ 1 ಅಥವಾ 2 ದಿನಕ್ಕೆ ಆಗುವಷ್ಟು ಮಾತ್ರವೇ ಕಲ್ಲಿದ್ದಲನ್ನು ಹೊಂದಿವೆ. ಇದರಿಂದ ವಿದ್ಯುತ್ ಉತ್ಪಾದನೆ ಮತ್ತಷ್ಟು ಕಡಿಮೆಯಾಗಬಹುದು. ಅಲ್ಲದೆ, ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ತಲೆದೋರಬಹುದು.
ದಿಲ್ಲಿ: ರಾಷ್ಟ್ರ ರಾಜಧಾನಿಯ ಕೆಲ ಭಾಗಗಳಿಗೆ ವಿದ್ಯುತ್ ಪೂರೈಸುವ ಟಾಟಾ ಪವರ್ ಡಿಸ್ಟ್ರಿಬ್ಯೂಷನ್ ಲಿಮಿಟೆಡ್ (TPDDL) ನಿಯಮಿತವಾಗಿ ವಿದ್ಯುತ್ ಕಡಿತ ಮಾಡುವ ಕುರಿತು ಎಚ್ಚರಿಕೆ ನೀಡಿದೆ. ಏಕೆಂದರೆ ದಿಲ್ಲಿ ಡಿಸ್ಕಾಮ್ಗಳಿಗೆ ವಿದ್ಯುತ್ ಸರಬರಾಜು ಮಾಡುವ ಘಟಕಗಳು 1ರಿಂದ 2 ದಿನಗಳಿಗೆ ಸಾಕಾಗುವಷ್ಟು ಮಾತ್ರವೇ ಕಲ್ಲಿದ್ದಲು ಸ್ಟಾಕ್ ಹೊಂದಿವೆ ಎಂದು ಟಾಟಾ ಪವರ್ ಡಿಸ್ಟ್ರಿಬ್ಯೂಷನ್ ಲಿಮಿಟೆಡ್ ಸಿಇಒ ಗಣೇಶ್ ಶ್ರೀನಿವಾಸನ್ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿ ಎದುರಿಸಬಹುದಾದ ತೀವ್ರ "ವಿದ್ಯುತ್ ಬಿಕ್ಕಟ್ಟಿನ" ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಪಂಜಾಬ್: ಪಂಜಾಬ್ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ತೀವ್ರ ಕಲ್ಲಿದ್ದಲು ಕೊರತೆ ಎದುರಾಗಿದೆ. ಪಿಎಸ್ಪಿಸಿಎಲ್ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆಯನ್ನು ಕಡಿತಗೊಳಿಸಲಾಗಿದೆ. ಇದರಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ನಿಯಮಿತವಾಗಿ ಲೋಡ್ ಶೆಡ್ಡಿಂಗ್ ಜಾರಿಗೆ ತರಲು ನಿರ್ಧರಿಸಿದೆ. ಅಲ್ಲಿನ ರಾಜ್ಯ ಸರ್ಕಾರವು ಕಲ್ಲಿದ್ದಲು ಕೊರತೆಗೆ ಕೇಂದ್ರ ಸರಕಾರವೇ ಕಾರಣ ಎಂದು ದೂಷಿಸಿದೆ. ಕಲ್ಲಿದ್ದಲು ಕೊರತೆಯಿಂದಾಗಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳು ಕಡಿಮೆ ಪ್ರಮಾಣದಲ್ಲಿ ವಿದ್ಯುತ್ ತಯಾರಿಸುತ್ತಿವೆ ಎಂದು ಪಂಜಾಬ್ ರಾಜ್ಯ ವಿದ್ಯುತ್ ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜಸ್ಥಾನ: ರಾಜ್ಯದಲ್ಲಿ ಈಗಾಗಲೇ ಪ್ರತಿನಿತ್ಯ ಒಂದು ಗಂಟೆ ಕಾಲ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಲ್ಲಿದ್ದಲು ಕೊರತೆ ಹೀಗೆಯೇ ಮುಂದುವರಿದರೆ, ಲೋಡ್ಶೆಡ್ಡಿಂಗ್ ಸಮಯ ಇನ್ನೂ ಹೆಚ್ಚಲಿದೆ. ಟಾಟಾ ಪವರ್ ಗುಜರಾತ್ನ ಮುಂದ್ರಾದಲ್ಲಿನ ತನ್ನ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಗುಜರಾತ್ಗೆ 1,850 ಮೆಗಾವಾಟ್, ಪಂಜಾಬ್ಗೆ 475 ಮೆಗಾವಾಟ್, ರಾಜಸ್ಥಾನಕ್ಕೆ 380 ಮೆಗಾವಾಟ್, ಮಹಾರಾಷ್ಟ್ರಕ್ಕೆ 760 ಮೆಗಾವಾಟ್ ಮತ್ತು ಹರಿಯಾಣಕ್ಕೆ 380 ಮೆಗಾವಾಟ್ ವಿದ್ಯುತ್ ಸರಬರಾಜು ಮಾಡುವುದಾಗಿ ಟಾಟಾ ಪವರ್ ಒಪ್ಪಂದಕ್ಕೆ ಸಹಿ ಹಾಕಿದೆ. ಆದರೆ ಈ ವಿದ್ಯುತ್ ಸ್ಥಾವರ ಕಲ್ಲಿದ್ದಲು ಕೊರತೆಯಿಂದ ಈಗಾಗಲೇ ಸ್ಥಗಿತಗೊಂಡಿದೆ.
ತಮಿಳುನಾಡು: ಚನ್ನೈ ನಗರದಲ್ಲಿ ನಿರ್ವಹಣಾ ಕಾರ್ಯಗಳು ಪ್ರಗತಿಯಲ್ಲಿರುವ ಸಲುವಾಗಿ ಕೆಲವು ಭಾಗಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ತಮಿಳುನಾಡು ಉತ್ಪಾದನೆ ಮತ್ತು ವಿತರಣಾ ನಿಗಮ (Tangedco) ಹೇಳಿದೆ.
ಆಂಧ್ರಪ್ರದೇಶ: ಆಂಧ್ರಪ್ರದೇಶವು ಪ್ರತಿದಿನ ಸುಮಾರು 185-190 ಮೆಗಾ ಯುನಿಟ್ (MU) ಗ್ರಿಡ್ ಬೇಡಿಕೆಯನ್ನು ಪೂರೈಸುತ್ತಿದೆ. APGENCO ವಿದ್ಯುತ್ ಸ್ಥಾವರಗಳು ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆಯ ಪೈಕಿ ಶೇ. 45 ರಷ್ಟು ವಿದ್ಯುತ್ ಅನ್ನು ಪೂರೈಸುತ್ತಿವೆ. ಆದರೆ ಈ ಉತ್ಪಾದನಾ ಕೇಂದ್ರಗಳು ಕೇವಲ 1 ಅಥವಾ 2 ದಿನಕ್ಕೆ ಆಗುವಷ್ಟು ಮಾತ್ರವೇ ಕಲ್ಲಿದ್ದಲನ್ನು ಹೊಂದಿವೆ. ಇದರಿಂದ ವಿದ್ಯುತ್ ಉತ್ಪಾದನೆ ಮತ್ತಷ್ಟು ಕಡಿಮೆಯಾಗಬಹುದು. ಅಲ್ಲದೆ, ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ತಲೆದೋರಬಹುದು.
ದಿಲ್ಲಿ: ರಾಷ್ಟ್ರ ರಾಜಧಾನಿಯ ಕೆಲ ಭಾಗಗಳಿಗೆ ವಿದ್ಯುತ್ ಪೂರೈಸುವ ಟಾಟಾ ಪವರ್ ಡಿಸ್ಟ್ರಿಬ್ಯೂಷನ್ ಲಿಮಿಟೆಡ್ (TPDDL) ನಿಯಮಿತವಾಗಿ ವಿದ್ಯುತ್ ಕಡಿತ ಮಾಡುವ ಕುರಿತು ಎಚ್ಚರಿಕೆ ನೀಡಿದೆ. ಏಕೆಂದರೆ ದಿಲ್ಲಿ ಡಿಸ್ಕಾಮ್ಗಳಿಗೆ ವಿದ್ಯುತ್ ಸರಬರಾಜು ಮಾಡುವ ಘಟಕಗಳು 1ರಿಂದ 2 ದಿನಗಳಿಗೆ ಸಾಕಾಗುವಷ್ಟು ಮಾತ್ರವೇ ಕಲ್ಲಿದ್ದಲು ಸ್ಟಾಕ್ ಹೊಂದಿವೆ ಎಂದು ಟಾಟಾ ಪವರ್ ಡಿಸ್ಟ್ರಿಬ್ಯೂಷನ್ ಲಿಮಿಟೆಡ್ ಸಿಇಒ ಗಣೇಶ್ ಶ್ರೀನಿವಾಸನ್ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿ ಎದುರಿಸಬಹುದಾದ ತೀವ್ರ "ವಿದ್ಯುತ್ ಬಿಕ್ಕಟ್ಟಿನ" ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.