ಆ್ಯಪ್ನಗರ

ಏರ್‌ ಇಂಡಿಯಾ, ಬಿಎಸ್ಸೆನ್ನೆಲ್‌, ಎಂಟಿಎನ್ನೆಲ್‌ ಖಾಸಗೀಕರಣ ಚಿಂತನೆ: ನಿರ್ಮಲಾ ಸೀತಾರಾಮನ್‌

ಜಾಗತಿಕ ಆರ್ಥಿಕ ಹಿನ್ನಡೆಯಿಂದ ಹಲವಾರು ಪರಿಣಾಮಗಳು ಆಗಿವೆ. ಆರ್ಥಿಕ ಸುಧಾರಣೆಗಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಮುಂದಾಗಿದ್ದಾರೆ.

Vijaya Karnataka Web 11 Oct 2019, 9:14 pm
ಪುಣೆ: ಏರ್ ಇಂಡಿಯಾ, ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಚರ್ಚೆ ಪ್ರಗತಿಯಲ್ಲಿದೆ. ಆದರೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Vijaya Karnataka Web ನಿರ್ಮಲಾ ಸೀತಾರಾಮನ್‌
ನಿರ್ಮಲಾ ಸೀತಾರಾಮನ್‌


ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯೋಗ ಸೃಷ್ಟಿ ಮತ್ತು ಸಣ್ಣ, ಅತಿ ಸಣ್ಣ ಕೈಗಾರಿಕೆಗಳ ಸಬಲೀಕರಣಕ್ಕೆ ಕೇಂದ್ರ ಮುಂಗಡ ಪತ್ರದಲ್ಲಿ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಲಾಗಿದೆ ಎಂದರು.

ರಫೇಲ್ ಯುದ್ಧ ವಿಮಾನಗಳಿಗೆ ಶಾಸ್ತ್ರ, ಪೂಜೆಗಳನ್ನು ನೆರವೇರಿಸಿದ ಕ್ರಮವನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್ ಅವರು ಇದು ನಮ್ಮ ಸಂಪ್ರದಾಯ ಮತ್ತು ಆಚರಣೆ ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370ನೆ ವಿಧಿ ರದ್ದು ಮಾಡಿರುವ ಕೇಂದ್ರ ಸರಕಾರದ ನಡೆಯ ಬಗ್ಗೆ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಲು ನಿರ್ಮಲಾ ಸೀತಾರಾಮನ್‌ ನಿರಾಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ