ಆ್ಯಪ್ನಗರ

ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆ ಶೇ.3 ಹೆಚ್ಚಳ, 1.1 ಕೋಟಿ ನೌಕರರಿಗೆ ಲಾಭ

ಜನವರಿ 1, 2019ರಿಂದ ಪೂರ್ವಾನ್ವಯವಾಗುಂತೆ ಇದನ್ನು ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು. ತುಟ್ಟಿಭತ್ಯೆ ಹೆಚ್ಚಳದಿಂದ 48.41 ಲಕ್ಷ ಉದ್ಯೋಗಿಗಳು ಹಾಗೂ 62.03 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

Vijaya Karnataka Web 19 Feb 2019, 9:44 pm
ಹೊಸದಿಲ್ಲಿ: ಸರಕಾರಿ ನೌಕರರಿಗೆ ಸಿಹಿ ಸುದ್ದಿ. ತುಟ್ಟಿ ಭತ್ಯೆಯನ್ನು ಶೇಕಡ 3ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
Vijaya Karnataka Web ನೋಟು
ನೋಟು


ಕೇಂದ್ರ ಸಚಿವ ಸಂಪುಟ ಈ ನಿರ್ಧಾರದಿಂದಾಗಿ ಒಂದು ಕೋಟಿಗೂ ಅಧಿಕ ಉದ್ಯೋಗಿಗಳು, ಪಿಂಚಣಿದಾರರಿಗೆ ಲಾಭ ದೊರೆಯಲಿದೆ.

ಹಾಲಿ ಇರುವ ಶೇಕಡ 9ಕ್ಕಿಂತ ಹೆಚ್ಚಾಗಿ ಶೇಕಡ 3ರಷ್ಟು ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.


ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಈ ವಿಷಯವನ್ನು ತಿಳಿಸಿದರು.

ಜನವರಿ 1, 2019ರಿಂದ ಪೂರ್ವಾನ್ವಯವಾಗುಂತೆ ಇದನ್ನು ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.

ತುಟ್ಟಿಭತ್ಯೆ ಹೆಚ್ಚಳದಿಂದ 48.41 ಲಕ್ಷ ಉದ್ಯೋಗಿಗಳು ಹಾಗೂ 62.03 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಏಳನೇ ವೇತನ ಆಯೋಗದ ಶಿಫಾರಸಿನಂತೆ ಕೇಂದ್ರ ಸಚಿವ ಸಂಪುಟ ತುಟ್ಟಿ ಭತ್ಯೆ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ