ಆ್ಯಪ್ನಗರ

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾಗೆ ಚಿಕಿತ್ಸೆ ಲಭ್ಯ!

ಕೇಂದ್ರ ಸರಕಾರದ ಆರೋಗ್ಯ ವಿಮಾ ಯೋಜನೆಯಾದ ಆಯುಷ್ಮಾನ್ ಭಾರತ್ ಅಡಿ ಕೊರೊನಾ ವೈರಸ್ ಪ್ಯಾಕೇಜ್ ಸೇರಿಸಲು ಕೇದ್ರ ಸರ್ಕಾರ ನಿರ್ಧರಿಸಿದೆ. ಕಡುಬಡವರಿಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್‌ಗೆ ಚಿಕಿತ್ಸೆ ಒದಗಿಸಲು 'ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ' ನಿರ್ಧರಿಸಿದೆ.

Vijaya Karnataka Web 24 Mar 2020, 3:32 pm
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ (ಕೋವಿಡ್‌-19) ವ್ಯಾಪಕವಾಗಿ ಹರಡುತ್ತಿದೆ. ಈಗಾಗಲೇ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ಪ್ರಸ್ತುತ ಕೊರೊನಾ ಚಿಕಿತ್ಸಾ ವೆಚ್ಚ ಸೇರಿದಂತೆ ಪೂರ್ಣ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಂಡಿದೆ. ಇದೀಗ ಕೇಂದ್ರ ಸರಕಾರದ ಆರೋಗ್ಯ ವಿಮಾ ಯೋಜನೆಯಾದ ಆಯುಷ್ಮಾನ್ ಭಾರತ್ ಅಡಿ ಕೊರೊನಾ ವೈರಸ್ ಪ್ಯಾಕೇಜ್ ಸೇರಿಸಲು ಕೇದ್ರ ಸರ್ಕಾರ ನಿರ್ಧರಿಸಿದೆ.
Vijaya Karnataka Web Ayushman Bharat


ದೇಶದ ಕಡುಬಡ ಜನರಿಗೂ ಆಯುಶ್ಮಾನ್‌ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್‌ಗೆ ಚಿಕಿತ್ಸೆ ಒದಗಿಸಲು 'ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ' ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 500ಕ್ಕೂ ಹೆಚ್ಚಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ಕೊರೊನಾ ವೈರಸ್ ಪ್ಯಾಕೇಜ್ ಸೇರಿಸಲು ಸರ್ಕಾರ ನಿರ್ಧರಿಸಿದೆ.ಶಂಕಿತರಿಗೆ ಐಸೊಲೇಶನ್‌ನಲ್ಲಿ ನೀಡಲಾಗುವಾ ಚಿಕಿತ್ಸೆಯನ್ನೂ ಆಯುಶ್ಮಾನ್ ಯೋಜನೆಯಡಿ ತರಲಾಗಿದೆ.

ಕೊರೊನಾ ವೈರಸ್ ಲೈವ್ ಅಪ್ಡೇಟ್ಸ್: ದೇಶದಲ್ಲಿ 500ರ ಗಡಿ ಸಮೀಪಕ್ಕೆ ಸೋಂಕಿತ ಪ್ರಕರಣ!

ಕೊರೊನಾ ಪರೀಕ್ಷಿಸಲು ದೇಶದಲ್ಲಿ ಪ್ರಸ್ತುತ 111 ಲ್ಯಾಬ್ ಗಳಿವೆ. ಈ ವೈರಸ್ ವಿರುದ್ಧ ಹೋರಾಡಲು ಸರ್ಕಾರ ಖಾಸಗಿ ಲ್ಯಾಬ್ ಗಳೊಂದಿಗೆ ಕೈಜೋಡಿಸಿದೆ. ಆದರೆ, ಖಾಸಗಿ ಲ್ಯಾಬ್ ನಲ್ಲಿನ ಕೊರೊನಾ ಪರೀಕ್ಷೆಯು ತುಂಬಾ ದುಬಾರಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಆಯುಷ್ಮಾನ್ ಯೋಜನೆ ಫಲಾನುಭವಿಗಳೂ ಉಚಿತವಾಗಿ ಕೊರೊನಾ ವೈರಸ್ ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೊರೊನಾ ಅಟ್ಟಹಾಸ: ಮಂಗಳವಾರ ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ