ಆ್ಯಪ್ನಗರ

ಬೆಲೆ ಏರಿಕೆ ಹಿನ್ನೆಲೆ, ರಾಜ್ಯದ ಸಣ್ಣ ರೈತರಿಗೆ ಡೀಸೆಲ್‌ ಸಬ್ಸಿಡಿ- ಕೃಷಿ ಸಚಿವ ಬಿ.ಸಿ. ಪಾಟೀಲ್‌

ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ 5 ಎಕರೆಗೆ ಸಹಾಯಧನ ನೀಡಲಾಗುತ್ತಿದೆ. ಬಜೆಟ್‌ನಲ್ಲಿ ಘೋಷಿಸಲಾದ ರೈತ ಶಕ್ತಿ ಯೋಜನೆಗೆ ಸರಕಾರ 500 ಕೋಟಿ ರೂ. ಕಲ್ಪಿಸಿದೆ ಎಂದು ಸಚಿವ ಬಿ.ಸಿ ಪಾಟೀಲ್‌ ಹೇಳಿದ್ದಾರೆ.

Vijaya Karnataka Web 4 Apr 2022, 3:09 pm
ಬೈಂದೂರು: ಪ್ರಾಯೋಗಿಕವಾಗಿ ದೇಶದಲ್ಲಿಯೇ ಮೊದಲ ಭಾರಿಗೆ 5 ಎಕ್ರೆಗಿಂತ ಕಡಿಮೆ ಜಮೀನು ಹೊಂದಿರುವ ಸಣ್ಣ ರೈತರ ಟ್ರಾಕ್ಟರ್‌ಗಳಿಗೆ 1,250 ರೂ. ಡೀಸೆಲ್‌ ಸಬ್ಸಿಡಿ ನೀಡಲು ನಿರ್ಧರಿಸಲಾಗಿದ್ದು, ಏ. 1 ರಿಂದ ಜಾರಿಗೆ ಬಂದಿದೆ. ಇದಕ್ಕಾಗಿ ರಾಜ್ಯ ಸರಕಾರ 500 ಕೋಟಿ ರೂ. ಮೀಸಲಿರಿಸಿದೆ ಎಂದು ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದ್ದಾರೆ.
Vijaya Karnataka Web BC Patil


ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಕುಟುಂಬಸ್ಥರೊಂದಿಗೆ ಭಾನುವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ 5 ಎಕರೆಗೆ ಸಹಾಯಧನ ನೀಡಲಾಗುತ್ತಿದೆ. ಬಜೆಟ್‌ನಲ್ಲಿ ಘೋಷಿಸಲಾದ ರೈತ ಶಕ್ತಿ ಯೋಜನೆಗೆ ಸರಕಾರ 500 ಕೋಟಿ ರೂ. ಕಲ್ಪಿಸಿದೆ ಎಂದು ವಿವರ ನೀಡಿದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಬೆಳೆ ಹಾನಿ ಪರಿಹಾರವನ್ನು 6,000 ರೂ.ನಿಂದ 28,000 ರೂ.ಗೆ ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಿದ್ದಕ್ಕಾಗಿ ರಾಜ್ಯ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಸಚಿವರು ಹೇಳಿದೆ.

ಇನ್ನು ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯಕ್ಕೆ ಪ್ರತಿ ಬಾರಿಯೂ ಕೇಂದ್ರ ನಾಯಕರು ಆಗಮಿಸಿದ ಬಳಿಕ ಸಂಪುಟ ಪುನರ್‌ ರಚನೆಯ ವಿಚಾರ ಮುನ್ನಲೆಗೆ ಬರುತ್ತದೆ. ಸಂಪುಟದ 4 ಖಾಲಿ ಸ್ಥಾನ ತುಂಬುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಈ ಸಂದರ್ಭ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ, ಡಾ. ಅತುಲ್‌ ಕುರ್ಮಾ ಶೆಟ್ಟಿ, ಗೋಪಾಲಕೃಷ್ಣ, ಸಂಧ್ಯಾ ರಮೇಶ್‌, ರತ್ನಾ ರಮೇಶ್‌, ಬೈಂದೂರು ತಹಶಿಲ್ದಾರ್‌ ಶೋಭಾಲಕ್ಷ್ಮೀ ಎಚ್‌.ಎಸ್‌., ಕಾರ್ಯನಿರ್ಹಣಾಧಿಕಾರಿ ಎಸ್‌.ಪಿ.ಬಿ ಮಹೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ