ಆ್ಯಪ್ನಗರ

ಸುಳ್ಳು ಸುದ್ದಿ ಪತ್ತೆಗೆ ಫೇಸ್‌ಬುಕ್‌ ಪರಿಶೀಲನೆ

ಹೊಸ ಬಗೆಯ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಸೂಕ್ತ ತಂತ್ರಜ್ಞಾನ ಮತ್ತು ಟೂಲ್ಸ್‌ಗಳ ಅಗತ್ಯ ಇದೆ. ಇದನ್ನು ಅಭಿವೃದ್ಧಿಪಡಿಸಲು ಕಾರ್ಯಪ್ರವೃತ್ತವಾಗಿರುವುದಾಗಿ ಫೇಸ್‌ಬುಕ್‌ ತಿಳಿಸಿದೆ.

Vijaya Karnataka Web 11 Feb 2019, 10:00 pm
ಹೊಸದಿಲ್ಲಿ: ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್‌ಬುಕ್‌, ಭಾರತದಲ್ಲಿ ತನ್ನ ನೆಟ್‌ವರ್ಕ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರವನ್ನು ತಡೆಯಲು ಪ್ರತ್ಯೇಕ ಸಮಿತಿಯನ್ನು ರಚಿಸಿದೆ.
Vijaya Karnataka Web facebook


ಇಂಡಿಯಾ ಟುಡೇ ಗ್ರೂಪ್‌, ಸ್ಟಾರ್ಟಿಂಗ್‌ ಟುಡೆ, ವಿಶ್ವಾಸ್‌ ಡಾಟ್‌ ನ್ಯೂಸ್‌, ನ್ಯೂಸ್‌ಮೊಬೈಲ್‌ ಸೇರಿದಂತೆ ಕೆಲ ಸಂಸ್ಥೆಗಳನ್ನು ಒಳಗೊಂಡಿರುವ ಸಮಿತಿಯ ಮೂಲಕ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಕಾರ್ಯಪ್ರವೃತ್ತವಾಗುವುದಾಗಿ ಫೇಸ್‌ಬುಕ್‌ ತಿಳಿಸಿದೆ. ಈ ಸಮಿತಿಯು ಫೇಸ್‌ಬುಕ್‌ನಲ್ಲಿ ಪ್ರಕಟವಾಗುವ ಸುದ್ದಿಗಳು, ಮಾಹಿತಿಗಳ ಪರಾಮರ್ಶೆ ನಡೆಸಲಿದೆ.

ಇಂಗ್ಲಿಷ್‌, ಹಿಂದಿ, ಬೆಂಗಾಲಿ, ತೆಲುಗು, ಮಲಯಾಳಂ ಮತ್ತು ಮರಾಠಿ ಭಾಷೆಯಲ್ಲಿರುವ ಕಂಟೆಂಟ್‌ಗಳನ್ನೂ ಪರಿಶೀಲಿಸಲಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಸುಳ್ಳು ಸುದ್ದಿಗಳನ್ನು ಹರಡದಂತೆ ತಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಫೇಸ್‌ಬುಕ್‌ ತಿಳಿಸಿದೆ.

ಹೊಸ ಬಗೆಯ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಸೂಕ್ತ ತಂತ್ರಜ್ಞಾನ ಮತ್ತು ಟೂಲ್ಸ್‌ಗಳ ಅಗತ್ಯ ಇದೆ. ಇದನ್ನು ಅಭಿವೃದ್ಧಿಪಡಿಸಲು ಕಾರ್ಯಪ್ರವೃತ್ತವಾಗಿರುವುದಾಗಿ ಫೇಸ್‌ಬುಕ್‌ ತಿಳಿಸಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಸರಕಾರ, ಸುಳ್ಳು ಸುದ್ದಿ ಪ್ರಸಾರ ತಡೆಯುವಂತೆ ಜಾಲತಾಣಗಳಿಗೆ ಎಚ್ಚರಿಸಿದೆ.

ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಯಾರಾದರೂ ದೇಶದ ಚುನಾವಣಾ ಪ್ರಕ್ರಿಯೆ ಮೇಲೆ, ದುಷ್ಪರಿಣಾಮ ಬೀರಲು ಯತ್ನಿಸಿದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಸರಕಾರ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ