ಆ್ಯಪ್ನಗರ

ಕೊರೊನಾ ಪ್ಯಾಕೇಜ್: ಕಿಸಾನ್ ಸಮ್ಮಾನ್ ಹಣ ಶೀಘ್ರ ಬಿಡುಗಡೆಗೆ ವಿತ್ತ ಸಚಿವಾಲಯ ಸಮ್ಮತಿ

ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ದೇಶದ ಎಲ್ಲಾ ಕ್ಷೇತ್ರಗಳ ನೆರವಿಗೆ ಧಾವಿಸಿರುವ ಕೇಂದ್ರ ಹಣಕಾಸು ಸಚಿವಾಲಯ, ಕಿಸಾನ್ ಸಮ್ಮಾನ್ ಯೋಜನೆಯ ಈ ವರ್ಷದ ಮೊದಲ ಕಂತನ್ನು ಕೂಡಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೂಲಕ ಕೇಂದ್ರ ಹಣಕಾಸು ಸಚಿವಾಲಯ ದೇಶದ ರೈತಾಪಿ ವರ್ಗದ ನೆರವಿಗೆ ಧಾವಿಸಿದೆ.

Vijaya Karnataka Web 26 Mar 2020, 2:13 pm
ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ದೇಶದ ಎಲ್ಲಾ ಕ್ಷೇತ್ರಗಳ ನೆರವಿಗೆ ಧಾವಿಸಿರುವ ಕೇಂದ್ರ ಹಣಕಾಸು ಸಚಿವಾಲಯ, ಪ್ರಮುಖವಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನಾ ಮೂಲಕ ದೇಶದ 80 ಕೋಟಿ ಜನರಿಗೆ ಉಚಿತ ಧವಸ ಧಾನ್ಯಗಳನ್ನು ಪೂರೈಸುವ ವಾಗ್ದಾನ ಮಾಡಿದೆ.
Vijaya Karnataka Web Kisan
ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಜನೆತಗೆ ಮತ್ತಷ್ಟು ವಿನಾಯ್ತಿಗಳನ್ನು ಘೋಷಿಸಿರುವ ಕೇಂದ್ರ ಹಣಕಾಸು ಸಚಿವಾಲಯ, ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತನ್ನು ಕೂಡಲೇ ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದೆ.


ಈ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಹಣಕಾಸು ಸಚಿವಾಲಯ ರಾಜ್ಯ ಸಚಿವ ಅನುರಾಗ್ ಠಾಕೂರ್, ಕೊರೊನಾ ವಿರುದ್ಧ ಹೋರಾಟದ ಭಾಗವಾಗಿ ಮತ್ತೆ ಹಲವು ವಿನಾಯ್ತಿಗಳನ್ನು ಘೋಷಣೆ ಮಾಡಿದರು.

ಇದೇ ವೇಳೆ ದೇಶದ ರೈತಾಪಿ ವರ್ಗದ ನೆರವಿಗೆ ಧಾವಿಸಿರುವ ಕೇಂದ್ರ ಹಣಕಾಸು ಸಚಿವಾಲಯ, ಕಿಸಾನ್ ಸಮ್ಮಾನ್ ಯೋಜನೆಯ ಈ ವರ್ಷದ ಮೊದಲ ಕಂತನ್ನು ಕೂಡಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.


ಕಿಸಾನ್ ಸಮ್ಮಾನ್ ಯೋಜನೆಯಡಿ ಮೊದಲ ಕಂತಿನ 2 ಸಾವಿರ ರೂ. ಹಣವನ್ನು ಕೂಡಲೇ ರೈತರ ಬ್ಯಾಂಕ್ ಅಕೌಂಟ್‌ಗಳಿಗೆ ವರ್ಗಾಯಿಸಲಾಗುವುದು ಎಂದು ಹಣಕಾಸು ಇಲಾಖೆ ಸ್ಪಷ್ಪಪಡಿಸಿದೆ.

ಕೊರೊನಾ ಸೋಂಕು ಪರಿಹಾರ ನಿಧಿಗೆ 1.70 ಲಕ್ಷ ಕೋಟಿ ರೂ. ಘೋಷಿಸಿದ ಸೀತಾರಾಮನ್‌

ಇನ್ನು ಕೇಂದ್ರ ಹಣಕಾಸು ಸಚಿವಾಲಯದ ಈ ನಿರ್ಧಾರದಿಂದ ದೇಶದ ಸುಮಾರು 8.69 ಕೋಟಿ ರೈತರು ಲಾಭ ಪಡೆಯಲಿದ್ದು, ಮೊದಲ ಕಂತಿನ 2 ಸಾವಿರ ರೂ. ಹಣ ನೇರವಾಗಿ ಅವರ ಖಾತೆಗೆ ವರ್ಗಾವಣೆಯಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ