ಆ್ಯಪ್ನಗರ

ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಭಾರತೀಯರು ಚಿಂತಿಸಬೇಕಿದೆ: ರಘುರಾಂ ರಾಜನ್

ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ಸೋಮವಾರ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಂ ರಾಜನ್, ರಾಜೀನಾಮೆ ನೀಡಿರುವುದು ಅವರ ವೈಯಕ್ತಿಕ ವಿಚಾರವಾದರೂ ಭಾರತೀಯರೆಲ್ಲರೂ ಚಿಂತಿಸಬೇಕಾದ ವಿಚಾರ ಎಂದಿದ್ದಾರೆ.

Vijaya Karnataka Web 10 Dec 2018, 8:27 pm
ಹೊಸದಿಲ್ಲಿ: ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ಸೋಮವಾರ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಂ ರಾಜನ್, ರಾಜೀನಾಮೆ ನೀಡಿರುವುದು ಅವರ ವೈಯಕ್ತಿಕ ವಿಚಾರವಾದರೂ ಭಾರತೀಯರೆಲ್ಲರೂ ಚಿಂತಿಸಬೇಕಾದ ವಿಚಾರ ಎಂದಿದ್ದಾರೆ.
Vijaya Karnataka Web RBI


ಆರ್‌ಬಿಐ ಗವರ್ನರ್ ಸ್ಥಾನಕ್ಕೆ ಉರ್ಜಿತ್ ಪಟೇಲ್ ರಾಜೀನಾಮೆ

ಉರ್ಜಿತ್ ಪಟೇಲ್ ವೈಯಕ್ತಿಕ ಕಾರಣ ನೀಡಿ ಆರ್‌ಬಿಐನಿಂದ ನಿರ್ಗಮಿಸಿದ್ದಾರೆ. ಆದರೆ ರಾಜೀನಾಮೆ ಹಿಂದಿನ ಸಂಗತಿ ಕುರಿತು ನಾವು ಗಮನ ಹರಿಸಬೇಕಿದೆ. ಆ ಬಗ್ಗೆ ತನಿಖೆಯಾಗಬೇಕಿದೆ ಎಂದಿರುವ ರಘುರಾಂ ರಾಜನ್, ಆರ್‌ಬಿಐ ಮತ್ತು ಆರ್ಥಿಕತೆಯ ಮೇಲೆ ಉರ್ಜಿತ್ ಪಟೇಲ್ ರಾಜೀನಾಮೆ ಪರಿಣಾಮ ಬೀರಲಿದೆ ಎಂದಿದ್ದಾರೆ.

ಆರ್‌ಬಿಐ ಮತ್ತು ಕೇಂದ್ರ ಸರಕಾರ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಹಲವು ಸುತ್ತಿನ ಸಭೆ ಕೂಡ ನಡೆದಿತ್ತು. ಆದರೆ ಕೊನೆಗೆ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿ ಹೊರನಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ