ಆ್ಯಪ್ನಗರ

ಷೇರು ಮಾರುಕಟ್ಟೆಯಲ್ಲಿ ಶಾಕ್‌; ಹೂಡಿಕೆದಾರರಿಗೆ 2.6 ಲಕ್ಷ ಕೋಟಿ ರೂ. ರೂ. ನಷ್ಟ

ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಷೇರು ಮಾರುಕಟ್ಟೆಯಲ್ಲಿ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಇದರಿಂದಾಗಿ ಹೂಡಿಕೆದಾರರು ಭಾರಿ ಪ್ರಮಾಣದ ನಷ್ಟ ಅನುಭವಿಸಿದ್ದಾರೆ.

Vijaya Karnataka Web 3 Sep 2019, 8:06 pm
ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಹೂಡಿಕೆದಾರರಿಗೆ ಅಮಂಗಳವಾಗಿತ್ತು. ಷೇರುಪೇಟೆಯಲ್ಲಿ ಭಾರಿ ಕುಸಿತ ಉಂಟಾಗಿದ್ದರಿಂದ ಹೂಡಿಕೆದಾರರು 2.61 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.
Vijaya Karnataka Web ಷೇರು ಮಾರುಕಟ್ಟೆ
ಷೇರು ಮಾರುಕಟ್ಟೆ


ಮುಂಬಯಿ ಷೇರು ವಿನಿಮಯ ಪೇಟೆ (ಬಿಎಸ್‌ಇ) ಮಂಗಳವಾರದ ದಿನದಂತ್ಯಕ್ಕೆ ಒಟ್ಟು 770 ಅಂಕ ಕಳೆದುಕೊಂಡಿದೆ. ದಿನದಂತ್ಯದಲ್ಲಿ ಬಿಎಸ್‌ಇ 36,562.91 ಅಂಕ ದಾಖಲಾಗಿತ್ತು.

ರಾಷ್ಟ್ರೀಯ ಷೇರು ವಿನಿಮಯ ಪೇಟೆ (ಎನ್‌ಎಸ್‌ಇ) 225 ಅಂಕ ಇಳಿಕೆ ಕಂಡಿತು.

ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ದರ ಇಳಿಕೆ ಹಾಗೂ ಆಟೊಮೊಬೈಲ್‌ ಕ್ಷೇತ್ರದಲ್ಲಿ ಭಾರಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಷೇರು ಪೇಟೆಯಲ್ಲೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಯಿತು.

ಜಾಗತಿಕ ಆರ್ಥಿಕ ಕುಸಿತದ ಪರಿಣಾಮ ಭಾರತದ ಮೇಲೂ ಆಗುತ್ತಿದೆ. ಇದರಿಂದ ದೇಶದ ಪ್ರತಿಷ್ಠಿತ ಕಂಪನಿಗಳೇ ಷೇರುಪೇಟೆಯಲ್ಲಿ ಭಾರಿ ನಷ್ಟ ಅನುಭವಿಸುತ್ತಿವೆ.

ಇದಲ್ಲದೇ ಇತ್ತೀಚಿನ ದಿನಗಳಲ್ಲಿ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಸಮರ ಕೂಡ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ಇದು ಎಲ್ಲ ದೇಶಗಳಿಗೂ ವ್ಯಾಪಿಸಿದೆ.

ದೇಶದ ಆರ್ಥಿಕತೆಯ ಸುಧಾರಣೆಗೆ ಕೇಂದ್ರ ಸರಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಭಾರಿ ಇಳಿಮುಖ ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರಕಾರ ಈಗಾಗಲೇ ಮುಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ