ಆ್ಯಪ್ನಗರ

ಠೇವಣಿದಾರರಿಗೆ ಹಣ ನೀಡಲು ಲಕ್ಷ್ಮಿ ವಿಲಾಸ್‌ ಬ್ಯಾಂಕ್‌ ಬಳಿ ಹಣ ಇದೆ: ಆಡಳಿತಾಧಿಕಾರಿ ಮನೋಹರನ್‌ ಸ್ಪಷ್ಟನೆ

ಲಕ್ಷ್ಮಿ ವಿಲಾಸ್ ಬ್ಯಾಂಕ್‌ನ ನಿರ್ದೇಶಕ ಮಂಡಳಿಯನ್ನು ರದ್ದು ಪಡಿಸಲಾಗಿದ್ದು, ಕೆನರಾ ಬ್ಯಾಂಕ್‌ನ ಮಾಜಿ ನಾನ್‌–ಎಕ್ಸಿಕ್ಯುಟಿವ್‌ ಚೇರ್ಮನ್‌ ಟಿ.ಎನ್‌.ಮನೋಹರನ್‌ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

Vijaya Karnataka Web 18 Nov 2020, 8:35 pm
ಮುಂಬಯಿ: ಲಕ್ಷ್ಮಿ ವಿಲಾಸ್ ಬ್ಯಾಂಕ್ ಠೇವಣಿದಾರರ ಹಣ ಸುರಕ್ಷಿತವಾಗಿದೆ. ಗ್ರಾಹಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ನೇಮಕ ಮಾಡಿರುವ ಆಡಳಿತಾಧಿಕಾರಿ ಟಿ ಎನ್ ಮನೋಹರನ್ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಲಕ್ಷ್ಮಿ ವಿಲಾಸ್‌ ಬ್ಯಾಂಕ್‌
ಲಕ್ಷ್ಮಿ ವಿಲಾಸ್‌ ಬ್ಯಾಂಕ್‌


ಆರ್‌ಬಿಐ ನಿಗದಿಪಡಿಸಿದ ಗಡುವಿನೊಳಗೆ ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನ ಪ್ರಕ್ರಿಯೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು
ಕೆನರಾ ಬ್ಯಾಂಕ್‌ನ ಮಾಜಿ ಕಾರ್ಯನಿರ್ವಾಹಕೇತರ ಅಧ್ಯಕ್ಷ ಟಿ ಎನ್ ಮನೋಹರನ್ ತಿಳಿಸಿದ್ದಾರೆ.

ಲಕ್ಷ್ಮಿ ವಿಲಾಸ್ ಬ್ಯಾಂಕ್‌ ಮೇಲೆ ನಿರ್ಬಂಧ ವಿಧಿಸಿರುವ ಆರ್‌ಬಿಐ, ಖಾತೆದಾರರು 25 ಸಾವಿರ ರೂಪಾಯಿ ಮಾತ್ರ ಪಡೆಯಲು ಅವಕಾಶ ನೀಡಿದೆ.

ಅಲ್ಲದೇ, ಬ್ಯಾಂಕ್‌ನ ನಿರ್ದೇಶಕ ಮಂಡಳಿಯನ್ನು ರದ್ದು ಪಡಿಸಲಾಗಿದ್ದು, ಕೆನರಾ ಬ್ಯಾಂಕ್‌ನ ಮಾಜಿ ನಾನ್‌–ಎಕ್ಸಿಕ್ಯುಟಿವ್‌ ಚೇರ್ಮನ್‌ ಟಿ.ಎನ್‌.ಮನೋಹರನ್‌ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

ಡಿಸೆಂಬರ್ 16ರ ಗಡುವಿನ ಮೊದಲು ಬ್ಯಾಂಕ್ ಅನ್ನು ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ಸಮಯೋಚಿತವಾಗಿ ವಿಲೀನಗೊಳಿಸುವ ವಿಶ್ವಾಸವಿದೆ ಎಂದರು.

ಠೇವಣಿದಾರರ ಹಣ ಸುರಕ್ಷಿತವಾಗಿದೆ. ಠೇವಣಿದಾರರಿಗೆ ಮರುಪಾವತಿ ಮಾಡಲು ಬ್ಯಾಂಕ್ ಸಾಕಷ್ಟು ಹಣ ಇದೆ ಎಂದು ಮನೋಹರನ್‌ ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ