ಆ್ಯಪ್ನಗರ

ಇನ್ನೂ ಎರಡು ವರ್ಷಗಳ ಕಾಲ ಇಎಂಐ ಮುಂದೂಡಿಕೆಗೆ ಅವಕಾಶ: ಕೇಂದ್ರ ಸರಕಾರ

ಇಎಂಐ ಮೊರಾಟೋರಿಯಂ (ಸಾಲದ ಕಂತು ಮುಂದೂಡಿಕೆ) ಯೋಜನೆಯನ್ನು ಇನ್ನೂ ಎರಡು ವರ್ಷಗಳ ಕಾಲ ಮುಂದೂಡಬಹುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ಇತ್ತೀಚಿನ ಸುತ್ತೋಲೆಯಲ್ಲಿ ತಿಳಿಸಿದೆ.

Vijaya Karnataka Web 1 Sep 2020, 5:07 pm
ಹೊಸದಿಲ್ಲಿ: ಇಎಂಐ ಮೊರಾಟೋರಿಯಂ (ಸಾಲದ ಕಂತು ಮುಂದೂಡಿಕೆ) ಯೋಜನೆಯನ್ನು ಇನ್ನೂ ಎರಡು ವರ್ಷಗಳ ಕಾಲ ಮುಂದೂಡಬಹುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ಇತ್ತೀಚಿನ ಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತು ಕೇಂದ್ರ ಸರಕಾರವು ಮಂಗಳವಾರ ಸುಪ್ರೀ ಕೋರ್ಟ್‌ಗೆ ಮಾಹಿತಿ ನೀಡಿದೆ.
Vijaya Karnataka Web EMI


ಕೊರೊನಾ ಲಾಕ್‌ಡೌನ್ ನಂತರ ಜನಸಾಮಾನ್ಯರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡ ರಿಸರ್ವ್‌ ಬ್ಯಾಂಕ್‌ ಮಾರಾಟೋರಿಯಂ ಸ್ಕೀಮ್‌ (ಕಂತುಗಳ ಮುಂದೂಡಿಕೆ) ಅನ್ನು ಆ.31ರವರೆಗೆ ವಿಸ್ತರಿಸಿತ್ತು.

ಇದೀಗ ಅವಧಿ ಮುಗಿದಿದ್ದು, ಮಾರಾಟೋರಿಯಂ ಅವಧಿ ವಿಸ್ತರಿಸಬೇಕು ಎಂಬ ಒತ್ತಾಯ ಎದುರಾಗಿದ್ದವು. ಮಾರಾಟೋರಿಯಂ ಸ್ಕೀಂ ಅನ್ನು ಇನ್ನೂ ಎರಡು ವರ್ಷಗಳವರೆಗೆ ಮುಂದೂಡಲು ಅವಕಾಶವಿದೆ ಎಂದು ಕೇಂದ್ರ ಸರಕಾರವೇ ತಿಳಿಸಿರುವುದು ಸಾಲಗಾರರಲ್ಲಿ ಸಂತಸ ಮೂಡಿಸಿದೆ.

ಗಮನಿಸಿ: ಸೆಪ್ಟೆಂಬರ್‌ನಿಂದ 'ಇಎಂಐ' ವಿನಾಯಿತಿ ಇಲ್ಲ, ಸಾಲ ಮರುರಚನೆಗೆ ಇದೆ ಅವಕಾಶ

ಆಗಸ್ಟ್ 31 ರವರೆಗೆ ಅಸ್ತಿತ್ವದಲ್ಲಿರುವ ಎಲ್ಲಾ ವೈಯಕ್ತಿಕ ಮತ್ತು ಕಾರ್ಪೊರೇಟ್ ಸಾಲಗಾರರಿಗೆ ಆರು ತಿಂಗಳ ಕಾಲ ಸಾಲದ ಕಂತುಗಳ ಪಾವತಿ ಮುಂದೂಡಿಕೆಗೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಆರ್‌ಬಿಐ ಅವಕಾಶ ನೀಡಿತ್ತು.

ಆನ್‌ಲೈನ್ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಶುಲ್ಕ ವಿಧಿಸಬೇಡಿ..! ಬ್ಯಾಂಕ್‌ಗಳಿಗೆ ಕೇಂದ್ರದ ಚಾಟಿ..!

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಾಹಿತಿ ನೀಡಿದರು. ಅಲ್ಲದೆ, ಕೇಂದ್ರ ಸರಕಾರವು, ಕೇಂದ್ರ ಬ್ಯಾಂಕ್‌ (ಆರ್‌ಬಿಐ) ಮತ್ತು ಬ್ಯಾಂಕರ್‌ಗಳ ಸಂಘದೊಂದಿಗೆ ಚರ್ಚಿಸಿ ಮಾರಾಟೋರಿಯಂ ಸ್ಕೀಂ ಅವಧಿಯಲ್ಲಿ ಬಡ್ಡಿ ಮನ್ನಾ ಮಾಡುವ ಕುರಿತು ಅವಕಾಶ ನೀಡುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರಸ್ತುತ ಆರ್ಥಿಕತೆಗೆ ಸಂಬಂಧಿಸಿದಂತೆ "ಹಲವಾರು ಸಮಸ್ಯೆಗಳಿವೆ, ಜಿಡಿಪಿ ಶೇ. 23 ರಷ್ಟು ಕುಸಿದಿದೆ ಮತ್ತು ದೇಶದ ಆರ್ಥಿಕತೆಯಲ್ಲಿ ಒತ್ತಡದ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು.

ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ 23.9% ಇಳಿಕೆ, ಭಾರತದ ಇತಿಹಾಸದ ಮಹಾ ಆರ್ಥಿಕ ಕುಸಿತ

ಸರಕಾರವು ಸರಿಯಾದ ಮಾರ್ಗದಲ್ಲೇ ನಿರ್ಧಾರ ಕೈಗೊಳ್ಳಲಿದೆ. ಕೆಲವೇ ದಿನಗಳಲ್ಲಿ ಈ ಕುರಿತು ಚರ್ಚಿಸಲಾಗುವುದು. ಮಾರಾಟೋರಿಯಂ ಅವಧಿಯಲ್ಲಿ ಬಡ್ಡಿ ಮನ್ನಾ ವಿಚಾರ ಪ್ರಧಾನ ವಿಷಯವಾಗಿದೆ. ಆರ್‌ಬಿಐ ಅಧಿಕಾರಿಗಳ ಜತೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ ಎಂದು ಮೆಹ್ತಾ ಹೇಳಿದರು.

'ನಾನು ಬಹಳ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ. ಹರೀಶ್ ಸಾಲ್ವೆ ಅವರು ಬ್ಯಾಂಕರ್‌ಗಳ ಸಂಘದೊಂದಿಗೆ ಮಾತನಾಡಿದ್ದಾರೆ. ಹೆಚ್ಚಿನ ಸಮಸ್ಯೆಗಳನ್ನು ಬಗೆಹರಿಸಲಾಗಿದೆ "ಎಂದು ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್‌ನಲ್ಲಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ