ಆ್ಯಪ್ನಗರ

ಬದ್ರಿನಾಥ ದೇವಸ್ಥಾನಕ್ಕೆ ಮುಕೇಶ್‌ ಅಂಬಾನಿ 2 ಕೋಟಿ ರೂ. ಕಾಣಿಕೆ

ದೇವಸ್ಥಾನದ ಪೂಜೆಗೆ ಬೇಕಾಗುವ ಶ್ರೀಗಂಧ ಪೂರೈಸಲು ತಮ್ಮ ತಂದೆ ಧೀರುಭಾಯಿ ಅಂಬಾನಿ ಹೆಸರಲ್ಲಿ ತಮಿಳುನಾಡಿನ ಶ್ರೀಗಂಧ ಅರಣ್ಯದಲ್ಲಿ ಭೂಮಿ ಖರೀದಿಸಿ ದೇವಸ್ಥಾನಕ್ಕೆ ನೀಡುವುದಾಗಿ ಅವರು ಇದೇ ವೇಳೆ ಭರವಸೆ ನೀಡಿದರು.

Agencies 26 May 2019, 11:14 am
ಚಮೋಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಶನಿವಾರ ಬದ್ರಿನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀಗಂಧ ಮತ್ತು ಕೇಸರಿ ಖರೀದಿಗಾಗಿ 2 ಕೋಟಿ ರೂ. ಕಾಣಿಕೆ ಅರ್ಪಿಸಿದರು.
Vijaya Karnataka Web MK


ದೇವಸ್ಥಾನಕ್ಕೆ ಆಗಮಿಸಿದ ಅಂಬಾನಿ ಅವರನ್ನು ಬದ್ರಿನಾಥ ಕೇದಾರನಾಥ ದೇವಸ್ಥಾನ ಸಮಿತಿ (ಬಿಕೆಟಿಸಿ)ಯ ಕಾರ್ಯನಿರ್ವಹಕ ಅಧಿಕಾರಿ ಬಿ.ಡಿ.ಸಿಂಗ್‌ ಬರಮಾಡಿಕೊಂಡರು.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ದೇಶದ ಒಳಿತಿಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಪೂಜೆಗೆ ಬೇಕಾಗುವ ಶ್ರೀಗಂಧ ಪೂರೈಸಲು ತಮ್ಮ ತಂದೆ ಧೀರುಭಾಯಿ ಅಂಬಾನಿ ಹೆಸರಲ್ಲಿ ತಮಿಳುನಾಡಿನ ಶ್ರೀಗಂಧ ಅರಣ್ಯದಲ್ಲಿ ಭೂಮಿ ಖರೀದಿಸಿ ದೇವಸ್ಥಾನಕ್ಕೆ ನೀಡುವುದಾಗಿ ಅವರು ಇದೇ ವೇಳೆ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ