ಆ್ಯಪ್ನಗರ

ಮಂಗಳೂರು- ಯಶವಂತಪುರ ಮಧ್ಯೆ ಹೊಸ ರೈಲಿಗೆ ಹಸಿರು ನಿಶಾನೆ

ಸ್ವಾತಂತ್ರ್ಯಾ ನಂತರದ ದಿನಗಳಲ್ಲಿ ಆಮೆನಡಿಗೆಯಲ್ಲಿದ್ದ ರೈಲ್ವೆ ಇಲಾಖೆಗೆ ಐದೇ ವರ್ಷಗಳಲ್ಲಿ ಕುದುರೆ ವೇಗ ನೀಡಿದ್ದು, ಸಾಕಷ್ಟು ಪರಿವರ್ತನೆ ಕಾರಣವಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

Vijaya Karnataka Web 22 Feb 2019, 5:00 am
ಮಂಗಳೂರು : ಸ್ವಾತಂತ್ರ್ಯಾ ನಂತರದ ದಿನಗಳಲ್ಲಿ ಆಮೆನಡಿಗೆಯಲ್ಲಿದ್ದ ರೈಲ್ವೆ ಇಲಾಖೆಗೆ ಐದೇ ವರ್ಷಗಳಲ್ಲಿ ಕುದುರೆ ವೇಗ ನೀಡಿದ್ದು, ಸಾಕಷ್ಟು ಪರಿವರ್ತನೆ ಕಾರಣವಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
Vijaya Karnataka Web new mangaluru yeshwantpur train launched
ಮಂಗಳೂರು- ಯಶವಂತಪುರ ಮಧ್ಯೆ ಹೊಸ ರೈಲಿಗೆ ಹಸಿರು ನಿಶಾನೆ


ನಗರದ ಸೆಂಟ್ರಲ್‌ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಮಂಗಳೂರು- ಯಶವಂತಪುರ ಮಧ್ಯೆ ರಾತ್ರಿ ವೇಳೆ ಸಂಚರಿಸುವ ಹೊಸ ರೈಲಿಗೆ ಹಸಿರು ನಿಶಾನೆ ನೀಡಿ ಅವರು ಮಾತನಾಡಿದರು.

ಐದು ವರ್ಷಗಳಲ್ಲಿ ರೈಲ್ವೇ ಇಲಾಖೆಯಿಂದ ದ.ಕ. ಜಿಲ್ಲೆಗೆ 1500 ಕೋಟಿ ರೂ. ಹರಿದು ಬಂದಿದೆ. ಮಾನವ ರಹಿತ ರೈಲ್ವೇ ಗೇಟ್‌, ರೈಲ್ವೇ ನಿಲ್ದಾಣಗಳ ಸ್ವಚ್ಛತೆ, ರೈಲ್ವೇ ಹಾಗೂ ಇತರ ಇಲಾಖೆಗಳ ನಡುವಿನ ಸಮನ್ವಯ ಕೊರತೆ ನಿವಾರಣೆ, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ, ಪಡೀಲ್‌- ಬಜಾಲ್‌, ಜಪ್ಪು ಕುಡುಪಾಡಿ, ಬೈಕಂಪಾಡಿ, ಕನ್ನಡಗುಡ್ಡೆ ಸೇತುವೆಗಳ ನಿರ್ಮಾಣ, ಮಹಾಕಾಳಿಪಡ್ಪು ಸೇತುವೆಗೆ ಅನುಮೋದನೆ ನೀಡಲಾಗಿದೆ ಎಂದರು.

ಮಂಗಳೂರು- ಬೆಂಗಳೂರು ನಡುವಿನ ಸಿಂಗಲ್‌ ಟ್ರ್ಯಾಕ್‌ ಕಾಮಗಾರಿ ಕುಂಠಿತಗೊಂಡಿತ್ತು. ಡಿವಿ ಸದಾನಂದ ಸಚಿವರಾದ ಬಳಿಕ ವೇಗ ಪಡೆದುಕೊಂಡಿತು. ಮಂಗಳೂರು ವಿಶ್ವದರ್ಜೆ ರೈಲ್ವೇ ನಿಲ್ದಾಣಕ್ಕೂ ಸರ್ವೆ ನಡೆದಿದೆ ಇಂದು ಮತ್ತೆ 7.8 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ನಡೆದಿದೆ ಎಂದು ನಳಿನ್‌ ಹೇಳಿದರು.

ಕುಂಭ ಮೇಳದ ಹಿನ್ನೆಲೆಯಲ್ಲಿ ರೈಲುಗಳ ಕೊರತೆ ಇರುವುದರಿಂದ ಯಶವಂತಪುರ- ಮಂಗಳೂರು ನಡುವಿನ ಹೊಸ ಎಕ್ಸ್‌ಪ್ರೆಸ್‌ ರೈಲು ವಾರದಲ್ಲಿ ಮೂರು ದಿನಗಳ ಕಾಲ ಮಾತ್ರ ಸಂಚಾರ ನಡೆಸಲಿದೆ. ಮಾರ್ಚ್‌ನಿಂದ ಪ್ರತಿದಿನ ಸಂಚಾರ ಆರಂಭಿಸಲು ರೈಲ್ವೇ ಇಲಾಖೆ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದರು.

ಶಾಸಕ ವೇದವ್ಯಾಸ ಡಿ.ಕಾಮತ್‌, ಮೇಯರ್‌ ಭಾಸ್ಕರ ಕೆ., ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನೈಋುತ್ಯ ರೈಲ್ವೇ ವಿಭಾಗೀಯ ಪ್ರಬಂಧಕಿ ಅಪರ್ಣಾ ಗರ್ಗ್‌, ಪಾಲ್ಘಾಟ್‌ನ ವಿಭಾಗೀಯ ಸಹಾಯಕ ಪ್ರಬಂಧಕ ಸಾಯಿಬಾಬ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಬಕ ಪುತ್ತೂರು ನಿಲ್ದಾಣದಲ್ಲಿ ಪ್ಲಾಟ್‌ ಫಾರಂ ವಿಸ್ತರಣೆ, ಬಂಟ್ವಾಳ ನಿಲ್ದಾಣದ ಪ್ಲಾಟ್‌ ಫಾರಂ ವಿಸ್ತರಣೆ ಮತ್ತು ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.

......................

ವಾರದಲ್ಲಿ ಮೂರು ದಿನ ಸಂಚಾರ

ಮಂಗಳೂರು: ಬೆಂಗಳೂರು- ಯಶವಂತಪುರ ಹೊಸ ರೈಲು ವಾರದಲ್ಲಿ ಮೂರು ದಿನ ಸಂಚರಿಸಲಿದೆ. ಭಾನುವಾರ, ಮಂಗಳವಾರ ಹಾಗೂ ಗುರುವಾರ ಬೆಂಗಳೂರಿನಿಂದ ಮತ್ತು ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಂಗಳೂರಿನಿಂದ ರೈಲು ಹೊರಡಲಿದೆ.

ಬೆಂಗಳೂರಿನಿಂದ ಸಂಜೆ 4.30ಕ್ಕೆ ಹೊರಡುವ ಈ ರೈಲು ಮರುದಿನ ಬೆಳಗ್ಗೆ 4ರ ಸುಮಾರಿಗೆ ಮಂಗಳೂರಿಗೆ ತಲುಪಲಿದೆ ಹಾಗೂ ರಾತ್ರಿ 7 ಗಂಟೆಗೆ ಮಂಗಳೂರಿನಿಂದ ಹೊರಡುವ ರೈಲು ಮರುದಿನ ಮುಂಜಾನೆ 4.30ಕ್ಕೆ ಬೆಂಗಳೂರು ತಲುಪಲಿದೆ.

364 ಕಿ.ಮೀ. ಪ್ರಯಾಣಕ್ಕೆ ಪ್ರಸ್ತಾವಿತ ಸಮಯದ ಪ್ರಕಾರ, ಬೆಂಗಳೂರಿನಿಂದ ಮಂಗಳೂರಿಗೆ 11.30 ಗಂಟೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ 9.30 ಗಂಟೆ ತಗುಲಲಿದೆ. ಘಾಟಿ ಪ್ರದೇಶದಲ್ಲಿ ರೈಲ್ವೇ ಸುರಕ್ಷೆ ಹಿನ್ನೆಲೆ ಹಾಗೂ ಇತರ ರೈಲುಗಳ ಕ್ರಾಸಿಂಗ್‌ ಇರುವ ಕಾರಣದಿಂದ ಬೆಂಗಳೂರಿನಿಂದ ಹೊರಟ ರೈಲು ತಡವಾಗಿ ಮಂಗಳೂರಿಗೆ ತಲುಪುವಂತಾಗುತ್ತದೆ.

ಈಗ ಮಂಗಳೂರು ಸೆಂಟ್ರಲ್‌ನಿಂದ ಪ್ರತಿದಿನ ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ರಾತ್ರಿ 8.55ಕ್ಕೆ ಹೊರಟು ಮರುದಿನ ಬೆಳಗ್ಗೆ ಸುಮಾರು 7.30ಕ್ಕೆ ಬೆಂಗಳೂರು ತಲುಪುತ್ತದೆ. ಇದು ಮೂರು ದಿನ ಮೈಸೂರು ಹಾಗೂ 4 ದಿನ ಶ್ರವಣಬೆಳಗೊಳ ಮಾರ್ಗವಾಗಿ ಸಂಚರಿಸುತ್ತಿದೆ. ಇನ್ನೊಂದೆಡೆ, ಮಂಗಳೂರು ಜಂಕ್ಷನ್‌ನಿಂದ ಪ್ರತೀದಿನ (ಭಾನುವಾರ ಹೊರತುಪಡಿಸಿ) ಬೆಳಗ್ಗೆ 11.30ಕ್ಕೆ ಹೊರಡುವ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ರಾತ್ರಿ 8.30ರ ಸುಮಾರಿಗೆ ಬೆಂಗಳೂರು ತಲುಪುತ್ತದೆ. ಇದು ಶ್ರವಣಬೆಳಗೋಳ ಮಾರ್ಗವಾಗಿ ಸಂಚರಿಸುತ್ತಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ