ಆ್ಯಪ್ನಗರ

ಲಾಕ್‌ಡೌನ್‌ ನಂತರ ಕೆಲಸ ಕಳೆದುಕೊಂಡವರಿಗೆ ಗುಡ್‌ ನ್ಯೂಸ್‌: ಸರಕಾರವೇ ಭರಿಸಲಿದೆ ಪಿಎಫ್‌ ಹಣ!

ಕೊರೊನಾ ಲಾಕ್‌ಡೌನ್ ನಂತರ ಕೆಲಸ ಕಳೆದುಕೊಂಡ ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ದೀಪಾವಳಿ ಗಿಫ್ಟ್‌ ನೀಡಿದ್ದಾರೆ. ಕಳೆದ ಮಾರ್ಚ್ ನಿಂದ ಸೆಪ್ಟೆಂಬರ್‌ ವರೆಗೆ ಉದ್ಯೋಗ ಕಳೆದುಕೊಂಡ ನೌಕರರಿಗೆ, ಪಿಎಫ್ ಮೊತ್ತವನ್ನು ಕೇಂದ್ರ ಸರಕಾರವೇ ಭರಿಸಲಿದೆ.

Vijaya Karnataka Web 12 Nov 2020, 5:06 pm
ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆತ್ಮನಿರ್ಭರ್ ಭಾರತ 3.0 ಯೋಜನೆಯಡಿ ಗುರುವಾರ ಬೃಹತ್‌ ಪ್ಯಾಕೇಜ್‌ ಘೋಷಿಸಿದ್ದಾರೆ.
Vijaya Karnataka Web Nirmala Sitharaman


ಕೊರೊನಾ ಲಾಕ್‌ಡೌನ್ ನಂತರ ಕೆಲಸ ಕಳೆದುಕೊಂಡ ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ದೀಪಾವಳಿ ಗಿಫ್ಟ್‌ ನೀಡಿದ್ದಾರೆ. ಉದ್ಯೋಗ ಕಡಿತದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ನೌಕರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ.

ಕಳೆದ ಮಾರ್ಚ್ ನಿಂದ ಸೆಪ್ಟೆಂಬರ್‌ ವರೆಗೆ ಉದ್ಯೋಗ ಕಳೆದುಕೊಂಡ ನೌಕರರಿಗೆ, ಪಿಎಫ್ ಮೊತ್ತವನ್ನು ಕೇಂದ್ರ ಸರಕಾರವೇ ಭರಿಸುವುದಾಗಿ ಘೋಷಿಸಿದೆ. ಈ ಮೂಲಕ ಉದ್ಯೋಗ ಕಳೆದುಕೊಂಡವರಿಗೆ ಗುಡ್ ನ್ಯೂಸ್ ನೀಡಿದೆ.

ಕೇಂದ್ರದಿಂದ ಭರ್ಜರಿ ದೀಪಾವಳಿ ಗಿಫ್ಟ್‌: ₹29.8 ಲಕ್ಷ ಕೋಟಿ ಪ್ಯಾಕೇಜ್, 12 ಪ್ರಮುಖ ಘೋಷಣೆಗಳಿವು!

ಹೊಸದಿಲ್ಲಿಯಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಆತ್ಮನಿರ್ಭರ ಭಾರತ್-3.0 ಯೋಜನೆಯಡಿ ಬೃಹತ್‌ ಪ್ಯಾಕೇಜ್‌ ಘೋಷಿಸಿದರು. ಪ್ಯಾಕೇಜ್‌ ಭಾಗವಾಗಿ ಉದ್ಯೋಗ ಕಳೆದುಕೊಂಡಿರುವವರಿಗೆ ಪಿಎಫ್‌ ಹಣ ಪಾವತಿಸುವುದಾಗಿ ಘೋಷಿಸಿದ್ದಾರೆ.

ಕಳೆದ ಮಾರ್ಚ್‌ನಿಂದ ಸೆಪ್ಟೆಂಬರ್‌ವರೆಗೆ ಉದ್ಯೋಗ ಕಳೆದುಕೊಂಡವರಿಗೆ ಪಿಎಫ್‌ ಹಣ, ಹಾಗೂ ತಿಂಗಳಿಗೆ 15 ಸಾವಿರ ರೂಪಾಯಿಗೂ ಕಡಿಮೆ ವೇತನ ಪಡೆಯುತ್ತಿದ್ದಂತ ಉದ್ಯೋಗಿಗಳಿಗೂ ಇಪಿಎಫ್ ಸೌಲಭ್ಯ ಸಿಗಲಿದೆ ಎಂದು ಘೋಷಿಸಿದಿದ್ದಾರೆ.

ಕೊರೊನಾ ಲಸಿಕೆ ಸಂಶೋಧನೆಗೆ 900 ಕೋಟಿ ಘೋಷಿಸಿದ ಕೇಂದ್ರ ವಿತ್ತ ಸಚಿವೆ

ಇಪಿಎಫ್‌ಓನಲ್ಲಿ ರಿಜಿಸ್ಟರ್ ಆಗಿರುವ ಕಂಪನಿಯ ಹೊಸ ಉದ್ಯೋಗಿಗಳಿಗೆ ಪಿಎಫ್ ಸಬ್ಸಿಡಿಯನ್ನು ಘೋಷಿಸಿದ ಅವರು, ಒಂದು ಸಾವಿರ ಅಥವಾ ಅದಕ್ಕಿಂತ ಕಡಿಮೆ ನೌಕರರಿರುವ ಕಂಪನಿಗಳಿಗೆ ಮುಂದಿನ 2 ವರ್ಷಗಳ ಕಾಲ ಪಿಎಫ್ ಸಬ್ಸಿಡಿ ಸಿಗಲಿದೆ. ವೇತನದ ಶೇ.12ರಷ್ಟು ಪಿಎಫ್‌ ಹಣವನ್ನು ಕಂಪನಿ ಭರಿಸಿದರೆ, ಶೇ.12ರಷ್ಟು ಹಣವನ್ನು ಕೇಂದ್ರ ಸರಕಾರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ