ಆ್ಯಪ್ನಗರ

ಈರುಳ್ಳಿ ರಫ್ತು ನಿರ್ಬಂಧದಿಂದ ದರ ಏರಿಕೆ ಇಲ್ಲ: ಎಪಿಎಂಸಿ

ಕೇಂದ್ರ ಸರಕಾರ ಈರುಳ್ಳಿ ರಫ್ತಿಗೆ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಭಯ ಬೇಡ ದೇಸಿ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರಿಕೆಯಾಗುವ ಸಾಧ್ಯತೆ ಇಲ್ಲ ಎಪಿಎಂಸಿ ಅಧಿಕಾರಿಗಳು ಭರವಸೆ ಕೊಟ್ಟಿದ್ದಾರೆ.

Vijaya Karnataka Web 18 Sep 2020, 7:56 am
ಬೆಂಗಳೂರು: ಕೇಂದ್ರ ಸರಕಾರ ಈರುಳ್ಳಿ ರಫ್ತಿಗೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ದೇಸಿ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರಿಕೆಯಾಗುವ ಸಾಧ್ಯತೆ ಇಲ್ಲ ಎಂದು ಎಪಿಎಂಸಿ ಅಧಿಕಾರಿಗಳು ಅಭಯ ನೀಡಿದ್ದಾರೆ.
Vijaya Karnataka Web onion


ಹಾಲಿ ಕರ್ನಾಟಕ ಸಹಿತ ದೇಶದೆಲ್ಲೆಡೆ ಬೇಡಿಕೆಯಷ್ಟು ಈರುಳ್ಳಿ ಪೂರೈಕೆಯಾಗುತ್ತಿದೆ. ದಸರಾ ಬಳಿಕ ಪೂರೈಕೆ ಕಡಿಮೆಯಾಗುವ ಸಾಧ್ಯತೆಯನ್ನು ಅರಿತು ರಫ್ತು ನಿರ್ಬಂಧಿಸಲಾಗಿದೆ. ಇದರಿಂದ ಗ್ರಾಹಕರು ಹಾಗೂ ವರ್ತಕರು ಬೆಲೆಯೇರಿಕೆ ಬಿಸಿಯಿಂದ ತಪ್ಪಿಸಿಕೊಂಡಂತಾಗಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

''ರಾಜ್ಯದಲ್ಲಿಈ ಬಾರಿ ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿಈರುಳ್ಳಿ ಬಿತ್ತನೆ ಪ್ರಮಾಣ ಹೆಚ್ಚಿದೆ. ಇದರ ಇಳುವರಿಗೆ ಕೆಲ ತಿಂಗಳು ಕಾಯಬೇಕಿದೆ. ಹಾಲಿ ಮಾರುಕಟ್ಟೆಯಲ್ಲಿನ ದಾಸ್ತಾನನ್ನು ಹೊರದೇಶಕ್ಕೆ ರಫ್ತು ಮಾಡಿದರೆ ಸ್ಥಳೀಯ ಗ್ರಾಹಕರಿಗೆ ತೊಂದರೆ ಆಗುವ ಸಾಧಿಧ್ಯತೆ ಇಧಿತ್ತು. ಈ ಅಂಶವನ್ನು ಗಮನಿಸಿಯೇ ಸರಕಾರ ರಫ್ತು ನಿರ್ಬಂಧದ ಆದೇಶ ಹೊರಡಿಸಿದೆ. ಇದನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ'' ಎಂದು ಬೆಂಗಳೂರು ಈರುಳ್ಳಿ, ಆಲೂಗಡ್ಡೆ ಸಗಟು ವರ್ತಕರ ಸಂಘದ ಅಧ್ಯಕ್ಷ ಬಿ.ಎಲ್‌ ಶಂಕರಪ್ಪ ಪ್ರತಿಕ್ರಿಯಿಸಿದ್ದಾರೆ.

ಹೆಚ್ಚಿನ ದರದ ಆಸೆಗೆ ಕೆಲ ವರ್ತಕರು ದೊಡ್ಡ ಪ್ರಮಾಣದಲ್ಲಿಈರುಳ್ಳಿ ಖರೀದಿಸಿ ರಫ್ತು ಮಾಡಲು ಸಜ್ಜಾಗಿದ್ದರು. ಸರಕಾರದ ಆದೇಶದಿಂದ ಇವರೆಲ್ಲರೂ ಕೈಸುಟ್ಟುಕೊಳ್ಳುವಂತಾಗಿದೆ. ಇದರಿಂದ ಪಾರಾಗಲು ಈರುಳ್ಳಿ ಅಭಾವವಾಗಲಿದೆ ಎಂಬ ವದಂತಿ ಹಬ್ಬಿಸುವ ಚಿತಾವಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ