ಆ್ಯಪ್ನಗರ

ಆರ್ಥಿಕ ತಜ್ಞರ ಜತೆ ಪ್ರಧಾನಿ ಸಮಾಲೋಚನೆ

ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಆರ್ಥಿಕ ತಜ್ಞರು ಹಾಗೂ ಉದ್ಯಮ ವಲಯದ ತಜ್ಞರ ಜತೆಗೆ ಸಮಾಲೋಚನೆ ನಡೆಸಿದರು.

THE ECONOMIC TIMES 23 Jun 2019, 5:00 am
ಹೊಸದಿಲ್ಲಿ : ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಆರ್ಥಿಕ ತಜ್ಞರು ಹಾಗೂ ಉದ್ಯಮ ವಲಯದ ತಜ್ಞರ ಜತೆಗೆ ಸಮಾಲೋಚನೆ ನಡೆಸಿದರು.
Vijaya Karnataka Web pm modi interacts with 40 economists
ಆರ್ಥಿಕ ತಜ್ಞರ ಜತೆ ಪ್ರಧಾನಿ ಸಮಾಲೋಚನೆ


ನೀತಿ ಆಯೋಗವು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ 40 ಅರ್ಥ ಶಾಸ್ತ್ರಜ್ಞರು ಭಾಗವಹಿಸಿದ್ದರು.

'' ಈ ಸಂದರ್ಭ ಆರ್ಥಿಕ ತಜ್ಞರು ಮತ್ತು ಉದ್ಯಮ ತಜ್ಞರು ತಮ್ಮ ಸಲಹೆಗಳನ್ನು ನೀಡಿದರು. ಸಮಗ್ರ ಅರ್ಥಿಕತೆ, ಉದ್ಯೋಗ ಸೃಷ್ಟಿ, ಕೃಷಿ, ಜಲ ಸಂಪನ್ಮೂಲ, ರಫ್ತು, ಶಿಕ್ಷಣ, ಆರೋಗ್ಯ ವಲಯದ ಪ್ರಗತಿ ಬಗ್ಗೆ ಚರ್ಚಿಸಲಾಯಿತು'' ಎಂದು ಪ್ರಧಾನಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಮತ್ತು ಅಂಕಿ ಅಂಶ ಖಾತೆ ಸಹಾಯಕ ಸಚಿವ ಇಂದ್ರಜಿತ್‌ ಸಿಂಗ್‌ ಹಾಜರಿದ್ದರು. ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಮತ್ತು ಇತರ ಸರಕಾರಿ ಅಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ