ಆ್ಯಪ್ನಗರ

ನಾಲ್ಕು ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆ ಚುರುಕುಗೊಳಿಸಲು ಪ್ರಧಾನಿ ಕಾರ್ಯಾಲಯ ಸೂಚನೆ!

ಪ್ರಸಕ್ತ ಹಣಕಾಸು ವರ್ಷದೊಳಗೆ ಕನಿಷ್ಠ ನಾಲ್ಕು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸ್ವತಃ ಪ್ರಧಾನ ಮಂತ್ರಿಗಳ ಕಾರ್ಯಾಲಯವೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Vijaya Karnataka Web 18 Aug 2020, 4:27 pm
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದೊಳಗೆ ಕನಿಷ್ಠ ನಾಲ್ಕು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸ್ವತಃ ಪ್ರಧಾನ ಮಂತ್ರಿಗಳ ಕಾರ್ಯಾಲಯವೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Vijaya Karnataka Web banking


ನಾಲ್ಕು ಸಾರ್ವಜನಿಕ ವಲಯದ ಬ್ಯಾಂಕುಗಳ ಷೇರುಗಳಲ್ಲಿ ಸರಕಾರದ ಪಾಲುದಾರಿಕೆಯನ್ನು ಕಡಿತಗೊಳಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಸೂಚಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಪಂಜಾಬ್‌ & ಸಿಂದ್‌ ಬ್ಯಾಂಕ್‌, ಬ್ಯಾಂಕ್‌ ಆಫ್‌ ಮಹಾರಾಷ್ಟ್ರ, ಯೂಕೋ ಬ್ಯಾಂಕ್‌, ಐಡಿಬಿಐ ಬ್ಯಾಂಕುಗಳು ಷೇರುಗಳಲ್ಲಿ ಸರಕಾರವು ಗರಿಷ್ಠ ಪಾಲುದಾರಿಕೆ ಹೊಂದಿದೆ. ಆದರೆ ಸರಕಾರದ ಪಾಲುದಾರಿಕೆಯನ್ನು ಕಡಿತಗೊಳಿಸಿ ಈ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಭರದಿಂದ ಸಾಗಿದೆ.

ಬಯೋಕಾನ್‌ ಮುಖ್ಯಸ್ಥೆ 'ಕಿರಣ್ ಮಜುಂದಾರ್‌ ಶಾ'ಗೆ ಕೊರೊನಾ ಪಾಸಿಟಿವ್‌!

ರಾಷ್ಟ್ರೀಯ ಬ್ಯಾಂಕುಗಳು ಹಾಗೂ ಸಾರ್ವಜನಿಕ ವಲಯದ ಕಂಪನಿಗಳನ್ನು ಖಾಸಗೀಕರಣ ಮಾಡುವುದರಿಂದ ತೆರಿಗೆ ಹಣ ಹೆಚ್ಚಲಿದೆ. ಅಲ್ಲದೆ ಆಯವ್ಯಯ ಮಂಡನೆಗೆ ಹಣವನ್ನು ಸುಲಭವಾಗಿ ಹೊಂದಿಸಬಹುದಾಗಿದೆ ಎಂದು ಸರಕಾರದ ಉದ್ದೇಶವಾಗಿದೆ.

ಸಾರ್ವಜನಿಕ ವಲಯದ ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌, ಐಒಬಿ, ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಖಾಸಗೀಕರಣ ಸಾಧ್ಯತೆ ಇದೆ. ಐಡಿಬಿಐ ಷೇರು ಮಾರಾಟ ಪ್ರಕ್ರಿಯೆ ಆರಂಭವಾಗಿದೆ. 2020-21ರಲ್ಲಿ2.1 ಲಕ್ಷ ಕೋಟಿ ರೂ. ಬಂಡವಾಳ ಹಿಂತೆಗೆತದ ಗುರಿಯನ್ನು ಸರಕಾರ ಹೊಂದಿದೆ.

'ಪಿಎಂ ಕೇರ್ಸ್ ನಿಧಿಯನ್ನ ಎನ್‌ಡಿಆರ್‌ಎಫ್‌ಗೆ ವರ್ಗಾಯಿಸುವ ಅಗತ್ಯವಿಲ್ಲ': ಅರ್ಜಿ ತಳ್ಳಿ ಹಾಕಿದ ಸುಪ್ರೀಂಕೋರ್ಟ್

ದೊಡ್ಡ ಮಟ್ಟಿನ ಖಾಸಗೀಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಸಂಪುಟ ಶೀಘ್ರ ನೀತಿ ಅಂತಿಮಪಡಿಸುವ ಸಾಧ್ಯತೆ ಇದೆ. ವ್ಯೂಹಾತ್ಮಕವಲ್ಲದ ವಲಯಗಳಿಂದ ಸಂಪೂರ್ಣ ಹಿಂದೆ ಸರಿಯಲು ಸರಕಾರ ಚಿಂತನೆ ನಡೆಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ