ಆ್ಯಪ್ನಗರ

ಕಿಸಾನ್‌ ಸಮ್ಮಾನ್‌ ನಿಧಿ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ? ಹಾಗಿದ್ದರೆ ಏನು ಮಾಡಬೇಕು?

ಕೇಂದ್ರ ಸರ್ಕಾರವು ದೇಶದ 8.5 ಕೋಟಿ ರೈತರ ಖಾತೆಗಳಿಗೆ ಒಟ್ಟು 17,000 ಕೋಟಿ ರೂಪಾಯಿಯನ್ನು ಜಮೆ ಮಾಡಿದೆ. ನಿಮ್ಮ ಖಾತೆಗೆ ಕಿಸಾನ್‌ ಸಮ್ಮಾನ್‌ ನಿಧಿಯ ಕಂತು ಜಮೆಯಾಗಿಲ್ಲದಿದ್ದರೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ.

Authored byಬಾನುಪ್ರಸಾದ ಕೆ.ಎನ್\u200c. | Vijaya Karnataka Web 15 Oct 2020, 7:06 pm
ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ' ಯೋಜನೆಯಡಿ ಸರಕಾರವು ಎಲ್ಲ ಅರ್ಹ ರೈತರಿಗೆ ಪ್ರತಿ ವರ್ಷ 6000 ರೂಪಾಯಿಯನ್ನು ವಿವಿಧ ಕಂತುಗಳಲ್ಲಿ ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತದೆ.
Vijaya Karnataka Web farmers
Picture used for representational purpose only


ಕಳೆದ ಆಗಸ್ಟ್ 9 ರಂದು ಕೇಂದ್ರ ಸರ್ಕಾರವು ದೇಶದ 8.5 ಕೋಟಿ ರೈತರ ಖಾತೆಗಳಿಗೆ ಒಟ್ಟು 17,000 ಕೋಟಿ ರೂಪಾಯಿಯನ್ನು ಜಮೆ ಮಾಡಿದೆ. ನೀವು ಯೋಜನೆಯ ಫಲಾನುಭವಿಗಳಾಗಿದ್ದಲ್ಲಿ ನಿಮ್ಮ ಖಾತೆಗೂ ಕಿಸಾನ್‌ ಸಮ್ಮಾನ್‌ ನಿಧಿಯ ಕಂತು ಜಮೆಯಾಗಿರುತ್ತದೆ. ನೀವು ಖಾತೆ ಹೊಂದಿರುವ ಬ್ಯಾಂಕಿನಲ್ಲಿ ವಿಚಾರಿಸುವ ಮೂಲಕ ಹಣ ಜಮೆಯಾಗಿರುವ ಕುರಿತು ಖಾತರಿಸಿಪಡಿಸಿಕೊಳ್ಳಬಹುದು.

ಕಿಸಾನ್‌ ಸಮ್ಮಾನ್ ನಿಧಿ ಯೋಜನೆಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್‌ ಮಾಡುವುದು ಹೇಗೆ?

ಹಣ ಜಮೆಯಾಗದಿದ್ದರೆ ಏನು ಮಾಡಬೇಕು?
ಒಂದು ವೇಳೆ ನಿಮ್ಮ ಖಾತೆಗೆ ಕೃಷಿ ಸಮ್ಮಾನ್‌ ನಿಧಿ ಹಣ ವರ್ಗಾವಣೆ ಆಗಿರದಿದ್ದರೆ, ಸರಕಾರಕ್ಕೆ ನೀವು ನೀಡಿರುವ ಮಾಹಿತಿಯಲ್ಲಿ ಏನಾದರೂ ಲೋಪವಿರಬಹುದು. ಅಥವಾ ನಿಮ್ಮ ಖಾತೆಯಲ್ಲಿ ಸಮಸ್ಯೆ ಇರಬಹುದು ಎಂಬುದನ್ನು ಮೊದಲು ಪರಿಶೀಲಿಸಿ. ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಬರುವುದರೊಳಗೆ ಈ ಸಮಸ್ಯೆಗಳನ್ನು ಸರಿಪಡಿಸುವ ಮೂಲಕ ನೀವು ಈ ಯೋಜನೆಯ ಲಾಭ ಪಡೆಯಬಹುದು.

ಈ ತಪ್ಪುಗಳಾಗಿವೆಯೇ ಪರಿಶೀಲಿಸಿ:
ಕಿಸಾನ್‌ ಸಮ್ಮಾನ್‌ ನಿಧಿಗೆ ನೋಂದಣಿಯಾಗುವಾಗ ನೋಂದಣಿಯಾಗುವಾಗ ನೀವು ಸಲ್ಲಿಸಿರುವ ದಾಖಲೆಗಳಲ್ಲಿ ಯಾವುದೇ ಒಂದು ದಾಖಲೆಯ ಕೊರತೆಯಿದ್ದರೆ ಸಮಸ್ಯೆಯಾಗಿರುತ್ತದೆ. ಆಧಾರ್ ಸಂಖ್ಯೆ, ಖಾತೆ ಸಂಖ್ಯೆ ಅಥವಾ ಬ್ಯಾಂಕ್ ವಿವರಗಳಲ್ಲಿನ ವ್ಯತ್ಯಾಸದಿಂದಾಗಿಯೂ ಖಾತೆಗೆ ಹಣ ವರ್ಗಾಯಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಇಂತಹ ತಪ್ಪುಗಳಾಗಿದ್ದರೆ, ಕೂಡಲೇ ಸರಿಪಡಿಸಬೇಕು. ನಂತರವಷ್ಟೇ ನೀವು ಮುಂದಿನ ಕಂತನ್ನು ಪಡೆಯಬಹುದು.

ತುಮಕೂರಿನಲ್ಲಿ ಕೃಷಿ ಸಮ್ಮಾನ್‌ಗೆ ನಮೋ ಚಾಲನೆ: 6 ಕೋಟಿ ರೈತರ ಖಾತೆಗೆ 12 ಸಾವಿರ ಕೋಟಿ ಜಮೆ..

ಲೋಪಗಳನ್ನು ಸರಿಪಡಿಸುವುದು ಹೇಗೆ?
ನಿಮ್ಮ ಖಾತೆಗೆ ಕಿಸಾನ್‌ ಸಮ್ಮಾನ್‌ ನಿಧಿಯ 2000 ರೂಪಾಯಿ ಜಮೆಯಾಗಿಲ್ಲದಿದ್ದರೆ, ಚಿಂತೆ ಮಾಡುವ ಬದಲು, ಇಲ್ಲಿ ತಿಳಿಸಿರುವಂತೆ ಮಾಡಿ.

ನೀವಿ ನೀಡಿರುವ ವಿವರಗಳನ್ನು ನವೀಕರಿಸಿ :ಪಿಎಂ-ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ (https://pmkisan.gov.in/). ಇಲ್ಲಿ ಫಾರ್ಮರ್ ಕಾರ್ನರ್‌ಗೆ ಹೋಗಿ ಮತ್ತು ಎಡಿಟ್ ಟ್ಯಾಬ್‌ ಅನ್ನು ಕ್ಲಿಕ್‌ ಮಾಡಿ. ಆಧಾರ್ ವಿವರಗಳ ಆಯ್ಕೆಯನ್ನು ಕ್ಲಿಕ್ ಮಾಡಿ. ನಿಮ್ಮ ಆಧಾರ್ ಸಂಖ್ಯೆಯನ್ನು ಇಲ್ಲಿ ನಮೂದಿಸಿ. ಕ್ಯಾಪ್ಚಾ ಕೋಡ್ ಕ್ರಿಯೇಟ್‌ ಆಗುತ್ತದೆ. ನಿಗದಿತ ಸ್ಥಳದಲ್ಲಿ ಅದನ್ನು ನಮೂದಿಸಿದ ನಂತರ ಸಲ್ಲಿಸಿ.

‘ಕೃಷಿ ಸಮ್ಮಾನ್‌’ನಡಿ 1.50 ಲಕ್ಷ ರೈತರ ನೋಂದಣಿ

ಆನ್‌ಲೈನ್‌ನಲ್ಲಿ ಹೆಸರು ಸರಿಪಡಿಸಿ:
ನಿಮ್ಮ ಹೆಸರು ತಪ್ಪಾಗಿರುವುದರಿಂದಲೂ ಹಣ ಜಮೆಯಾಗಿಲ್ಲದಿರುವ ಸಾಧ್ಯತೆಗಳಿವೆ. ಅಂದರೆ, ವೆಬ್‌ಸೈಟ್‌ನಲ್ಲಿ ನೀವು ನೀಡಿರುವ ಹೆಸರು ಮತ್ತು ಆಧಾರ್‌ನಲ್ಲಿ ನಿಮ್ಮ ಹೆಸರು ವಿಭಿನ್ನವಾಗಿದ್ದರೆ, ಈ ಸಮಸ್ಯೆಯಾಗುತ್ತದೆ. ನಂತರ ನೀವು ಅದನ್ನು ಆನ್‌ಲೈನ್‌ನಲ್ಲಿ ಸರಿಪಡಿಸಬಹುದು. ಬೇರೆ ಏನಾದರೂ ತಪ್ಪು ಇದ್ದರೆ, ಅದನ್ನು ನಿಮ್ಮ ಕೃಷಿ ಇಲಾಖೆ ಕಚೇರಿಯಲ್ಲಿ ಸಂಪರ್ಕಿಸಿ ಸರಿಪಡಿಸಿಕೊಳ್ಳಬಹುದು.

ಈ ಮೂಲಕವೂ ಸಂಪರ್ಕಿಸಬಹುದು:
ನಿಮ್ಮ ಖಾತೆಗೆ ಹಣ ಜಮೆಯಾಗಿಲ್ಲದಿದ್ದರೆ, ಜಿಲ್ಲಾ ಕೃಷಿ ಅಧಿಕಾರಿಗಳೊಂದಿಗೆ ಮಾತನಾಡಬಹುದು. ಅಲ್ಲಿ ನಿಮಗೆ ಯಾವುದೇ ಮಾಹಿತಿ ಸಿಗದಿದ್ದರೆ, ಕೇಂದ್ರ ಕೃಷಿ ಸಚಿವಾಲಯದ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು. ನೀವು ಪಿಎಂ-ಕಿಸಾನ್ ಸಹಾಯವಾಣಿ 155261 ಅಥವಾ ಟೋಲ್ ಫ್ರೀ 1800115526 ಅನ್ನು ಸಂಪರ್ಕಿಸಬಹುದು. ಇದಲ್ಲದೆ ನೀವು ಸಚಿವಾಲಯದ ಈ ಸಂಖ್ಯೆಯನ್ನು (011-23381092) ಸಹ ಸಂಪರ್ಕಿಸಬಹುದು.

ಅಧಿಕೃತ ವೆಬ್‌ಸೈಟ್‌ ಸಂಪರ್ಕಿಸಿ :
ಪ್ಕಿರಧಾನ ಮಂತ್ರಿ ಕಿಸಾನ್ ಸಮ್ಮಾನ್‌ ನಿಧಿ (PM KISAN SAMMAN NIDHI) ಯೋಜನೆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಲು www.yojanagyan.in ಕ್ಲಿಕ್ ಮಾಡಿ ನಿಮಗೆ ಅಗತ್ಯವಾದ ಮಾಹಿತಿ ಪಡೆಯಬಹುದು.
ಲೇಖಕರ ಬಗ್ಗೆ
ಬಾನುಪ್ರಸಾದ ಕೆ.ಎನ್\u200c.
ವಿಜಯ ಕರ್ನಾಟಕ ಡಿಜಿಟಲ್\u200c ಪತ್ರಕರ್ತ. ವಿಜ್ಞಾನ ತಂತ್ರಜ್ಞಾನ, ರಾಷ್ಟ್ರೀಯ- ಅಂತಾರಾಷ್ಟ್ರೀಯ, ಸಾಹಿತ್ಯ-ಕಲೆ, ಶಿಕ್ಷಣ, ಆಸಕ್ತಿಯ ವಿಷಯಗಳು... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ