ಆ್ಯಪ್ನಗರ

Reserve Bank of India : ಕರ್ನಾಟಕದ ಈ ಬ್ಯಾಂಕ್‌ ಪರವಾನಗಿ ರದ್ದು ಮಾಡಿದ ಆರ್‌ಬಿಐ! ಇದರಲ್ಲಿ ನಿಮ್ಮ ಖಾತೆ ಇದೆಯೇ? ಈಗಲೇ ಎಚ್ಚೆತ್ತುಕೊಳ್ಳಿ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕರ್ನಾಟಕದ ಸಹಕಾರಿ ಬ್ಯಾಂಕ್‌ ಒಂದರ ಪರವಾನಗಿಯನ್ನು ರದ್ದು ಮಾಡಿದೆ. ದಾವಣಗೆರೆ ಮೂಲದ 'ಮಿಲ್ಲತ್ ಕೋ ಆಪರೇಟಿವ್ ಬ್ಯಾಂಕ್ ಲಿ.' ಪರವಾನಿಗೆಯನ್ನು ಅಮಾನತುಗೊಳಿಸಿದೆ.

Edited byಬಾನುಪ್ರಸಾದ ಕೆ.ಎನ್\u200c. | Vijaya Karnataka Web 20 Jun 2022, 11:09 am

ಹೈಲೈಟ್ಸ್‌:

* ದಾವಣಗೆರೆಯ ಮಿಲ್ಲತ್ ಕೋ-ಆಪರೇಟಿವ್ ಬ್ಯಾಂಕ್ ನ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದು ಮಾಡಿದೆ.
* ಇದಕ್ಕೆ ಆರ್ ಬಿಐ ನೀಡಿದ ಕಾರಣ, ಸಹಕಾರಿ ಬ್ಯಾಂಕ್ ನಲ್ಲಿ ಸಾಕಷ್ಟು ಬಂಡವಾಳ ಇಲ್ಲ ಮತ್ತು ಆದಾಯ ಇಲ್ಲ ಎಂಬುದು.
* ಬ್ಯಾಂಕ್ ವ್ಯವಹಾರ ಸ್ಥಗಿತಗೊಳಿಸಲು ಲಿಕ್ವಿಡೇಟರ್ ವೊಬ್ಬರನ್ನು ಆರ್ ಬಿಐ ನೇಮಿಸಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web RBI new
ಮುಂಬಯಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕರ್ನಾಟಕದ ಸಹಕಾರಿ ಬ್ಯಾಂಕ್‌ ಒಂದರ ಪರವಾನಗಿಯನ್ನು ರದ್ದು ಮಾಡಿದೆ. ದಾವಣಗೆರೆ ಮೂಲದ 'ಮಿಲ್ಲತ್ ಕೋ ಆಪರೇಟಿವ್ ಬ್ಯಾಂಕ್ ಲಿ.' ಪರವಾನಿಗೆಯನ್ನು ಅಮಾನತುಗೊಳಿಸಿದೆ. ಸಹಕಾರಿ ಬ್ಯಾಂಕ್ ಸಾಕಷ್ಟು ಬಂಡವಾಳ ಹೊಂದಿಲ್ಲ ಮತ್ತು ಪ್ರಸ್ತುತ ಠೇವಣಿದಾರರಿಗೆ ಪೂರ್ಣ ಮೊತ್ತವನ್ನು ಮರುಪಾವತಿಸಲು ಸಾಕಷ್ಟು ಆದಾಯ ಹೊಂದಿಲ್ಲ ಎಂಬ ಕಾರಣಕ್ಕೆ ರಿಸರ್ವ್ ಬ್ಯಾಂಕ್ ಈ ಕ್ರಮ ಕೈಗೊಂಡಿದೆ.
ಜೂನ್‌ 17ರಂದೇ ಆರ್‌ಬಿಐ ಈ ಆದೇಶ ಹೊರಡಿಸಿತ್ತು. ಜೂನ್ 18ರ ಶನಿವಾರದಿಂದಲೇ ಬ್ಯಾಂಕಿಂಗ್ ವ್ಯವಹಾರ ಸ್ಥಗಿತಗೊಳಿಸುವಂತೆ ಆರ್‌ಬಿಐ ಆದೇಶದಲ್ಲಿ ತಿಳಿಸಿದೆ. ಬ್ಯಾಂಕ್ ಅನ್ನು ಮುಚ್ಚಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ ಅನ್ನು ನೇಮಿಸಲು ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಆದೇಶ ನೀಡುವಂತೆಯೂ ಮನವಿ ಮಾಡಲಾಗಿದೆ. ಈ ಸಂಬಂಧ ಆರ್‌ಬಿಐ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್ ಕೂಡ ಬ್ಯಾಂಕ್ ವ್ಯವಹಾರವನ್ನು ಸ್ಥಗಿತ ಮಾಡಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ ಅನ್ನು ನೇಮಿಸಲು ಆದೇಶ ನೀಡುವಂತೆ ಮನವಿ ಮಾಡಿದೆ ಎಂದು ಆರ್‌ಬಿಐ ಜೂನ್ 18 ರ ಪ್ರಕಟಣೆಯಲ್ಲಿ ತಿಳಿಸಿದೆ.

Mudhol Co-Operative Bank: ಕರ್ನಾಟಕದ ಮತ್ತೊಂದು ಬ್ಯಾಂಕ್‌ನ ಲೈಸೆನ್ಸ್‌ ರದ್ದುಗೊಳಿಸಿದ ಆರ್‌ಬಿಐ, ಸಾವಿರಾರು ಠೇವಣಿದಾರರಿಗೆ ಸಂಕಷ್ಟ

ಮಿಲ್ಲತ್ ಕೋ ಆಪರೇಟಿವ್ ಬ್ಯಾಂಕ್ ಸಾಕಷ್ಟು ಬಂಡವಾಳ ಹೊಂದಿಲ್ಲ. ಜತೆಗೆ ಠವಣಿದಾರರ ಹಣವನ್ನು ಪೂರ್ಣವಾಗಿ ಮರುಪಾವತಿಸುವಷ್ಟು ಸಾಮರ್ಥ್ಯ ಹೊಂದಿಲ್ಲ. ಅಲ್ಲದೆ, ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ, 1949 ರ ಸೆಕ್ಷನ್ 56 ರ ನಿಬಂಧನೆಗಳನ್ನು ಅನುಸರಿಸಲು ವಿಫಲವಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ವಾರಕ್ಕೆ 5 ದಿನ ಕೆಲಸ, ಪಿಂಚಣಿ ಸಮಸ್ಯೆಗೆ ಪರಿಹಾರಕ್ಕೆ ಆಗ್ರಹಿಸಿ ಜೂ. 27ರಂದು ಬ್ಯಾಂಕ್‌ ಮುಷ್ಕರಕ್ಕೆ ಕರೆ

ಬ್ಯಾಂಕ್ ಸಲ್ಲಿಸಿರುವ ವಿವರಗಳ ಪ್ರಕಾರ, ಠೇವಣಿದಾರರು ತಮ್ಮ ಸಂಪೂರ್ಣ ಠೇವಣಿಯನ್ನು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಜಿಸಿ) ಮೂಲಕ ಪಡೆಯುತ್ತಾರೆ ಎಂದು ಹೇಳಿದರು. ಲಿಕ್ವಿಡೇಟರ್ ನೇಮಕಗೊಂಡರೆ ಪ್ರತಿ ಠೇವಣಿದಾರರು DICGC ಯಿಂದ ಠೇವಣಿ ವಿಮೆಯನ್ನು ಕ್ಲೈಮ್ ಮಾಡುವ ಹಕ್ಕನ್ನು ಹೊಂದಿರುತ್ತಾರೆ. ಗರಿಷ್ಠ 5 ಲಕ್ಷ ರೂಪಾಯಿವರೆಗೆ ಠೇವಣಿ ವಿಮೆ ಪಡೆಯಬಹುದು. ಈ ಬ್ಯಾಂಕ್ ತನ್ನ ಬ್ಯಾಂಕಿಂಗ್ ವ್ಯವಹಾರ ಮುಂದುವರಿಸಲು ಅವಕಾಶ ನೀಡಿದರೆ, ಸಾರ್ವಜನಿಕ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಆರ್‌ಬಿಐ ತಿಳಿಸಿದೆ.
ಲೇಖಕರ ಬಗ್ಗೆ
ಬಾನುಪ್ರಸಾದ ಕೆ.ಎನ್\u200c.
ವಿಜಯ ಕರ್ನಾಟಕ ಡಿಜಿಟಲ್\u200c ಪತ್ರಕರ್ತ. ವಿಜ್ಞಾನ ತಂತ್ರಜ್ಞಾನ, ರಾಷ್ಟ್ರೀಯ- ಅಂತಾರಾಷ್ಟ್ರೀಯ, ಸಾಹಿತ್ಯ-ಕಲೆ, ಶಿಕ್ಷಣ, ಆಸಕ್ತಿಯ ವಿಷಯಗಳು... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ