ಆ್ಯಪ್ನಗರ

ಲಾಕ್‌ಡೌನ್‌ನಿಂದ ಆರ್ಥಿಕತೆಗೆ 30 ಲಕ್ಷ ಕೋಟಿ ರೂ. ನಷ್ಟ - ಎಸ್‌ಬಿಐ ವರದಿ

ದೇಶದ ಜಿಡಿಪಿ 2019-20ರ ಜನವರಿ-ಮಾರ್ಚ್‌ ಅವಧಿಯಲ್ಲಿ ಶೇ. 1.2ಕ್ಕೆ ಕುಸಿತಕ್ಕೀಡಾಗುವ ನಿರೀಕ್ಷೆ ಇದೆ ಎಂದೂ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಎಸ್‌ಬಿಐ) ಸಂಶೋಧನಾ ವರದಿ ತಿಳಿಸಿದೆ. ಮಹಾರಾಷ್ಟ್ರ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಅತಿ ಹೆಚ್ಚಿನ ಜಿಡಿಪಿ ನಷ್ಟವಾಗಿದೆ ಎಂದು ವರದಿ ಹೇಳಿದೆ.

Agencies 26 May 2020, 7:18 pm
ಹೊಸದಿಲ್ಲಿ: ಕೊರೊನಾ ವೈರಸ್‌ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಜಾರಿಗೊಳಿಸದ ಪರಿಣಾಮ ಆರ್ಥಿಕತೆಗೆ 30.3 ಲಕ್ಷ ಕೋಟಿ ರೂ. ನಷ್ಟವಾಗಿದೆ ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಎಸ್‌ಬಿಐ) ಸಂಶೋಧನಾ ವರದಿ ತಿಳಿಸಿದೆ.
Vijaya Karnataka Web Lockdown 01


ದೇಶದ ಜಿಡಿಪಿ 2019-20ರ ಜನವರಿ-ಮಾರ್ಚ್‌ ಅವಧಿಯಲ್ಲಿ ಶೇ. 1.2ಕ್ಕೆ ಕುಸಿತಕ್ಕೀಡಾಗುವ ನಿರೀಕ್ಷೆ ಇದೆ ಎಂದೂ ತಿಳಿಸಿದೆ.
ರಾಷ್ಟ್ರೀಯ ಅಂಕಿ ಅಂಶಗಳ ಸಂಘಟನೆ (ಎನ್‌ಎಸ್‌ಒ) ಮೇ 29 ರಂದು ನಾಲ್ಕನೇ ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯ ವರದಿ ಬಿಡುಗಡೆಗೊಳಿಸಲಿದೆ. ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 4.7ರಷ್ಟಿತ್ತು. ಕೊರೊನಾ ಬಿಕ್ಕಟ್ಟಿನ ಪರಿಣಾಮ ಆರ್ಥಿಕ ಬೆಳವಣಿಗೆ ಮುಗ್ಗರಿಸಿದೆ ಎಂದು ತಿಳಿಸಿದೆ.

ರಾಜ್ಯಗಳ ಪೈಕಿ ಮಹಾರಾಷ್ಟ್ರ (ಶೇ.15.6), ತಮಿಳುನಾಡು (ಶೇ.9.4) ಮತ್ತು ಗುಜರಾತ್‌ ( ಶೇ.8.6) ಅತಿ ಹೆಚ್ಚು ಜಿಡಿಪಿ ನಷ್ಟಕ್ಕೀಡಾಗಿದೆ ಎಂದು ಎಸ್‌ಬಿಐ ಗ್ರೂಪ್‌ನ ಮುಖ್ಯ ಆರ್ಥಿಕ ಸಲಹೆಗಾರ ಸೌಮ್ಯ ಕಂತಿ ಘೋಷ್‌ ತಿಳಿಸಿದ್ದಾರೆ.

ಕೆಂಪು ವಲಯಗಳಲ್ಲಿ ಶೇ.50ರಷ್ಟು ನಷ್ಟ ಸಂಭವಿಸಿದ್ದು, ಬಹುಪಾಲು ದೊಡ್ಡ ಜಿಲ್ಲೆಗಳು ಅಲ್ಲಿವೆ. ಹಸಿರು ವಲಯದಲ್ಲಿ ಗ್ರಾಮಾಂತರ ಪ್ರದೇಶಗಳಿದ್ದು, ಅಲ್ಲಿ ಸಂಭವಿಸಿರುವ ನಷ್ಟ ಕಡಿಮೆ. ಮುಂದಿನ ತ್ರೈಮಾಸಿಕದಲ್ಲಿ ಆರ್ಥಿಕ ಚಟುವಟಿಕೆಗಳು ಚೇತರಿಸುವ ಸುಳಿವನ್ನೂ ವರದಿ ನೀಡಿದೆ.

ನಾಲ್ಕನೇ ಆರ್ಥಿಕ ಹಿಂಜರಿತದೇಶ ಸ್ವಾತಂತ್ರ್ಯಾನಂತರ ಮೂರು ಆರ್ಥಿಕ ಹಿಂಜರಿತಗಳನ್ನು ಎದುರಿಸಿದ್ದು, ನಾಲ್ಕನೆಯ ಹಿಂಜರಿತ ಸಮೀಪಿಸಿದೆ ಎಂದು 'ಕ್ರಿಸಿಲ್'‌ ಎಚ್ಚರಿಸಿದೆ. ಕಳೆದ 69 ವರ್ಷಗಳಲ್ಲಿ ಭಾರತ ಕೇವಲ 3 ಸಲ ಮಾತ್ರ ಆರ್ಥಿಕ ಹಿಂಜರಿತ ಎದುರಿಸಿದೆ. 1958, 1966 ಮತ್ತು 1980ರಲ್ಲಿ ಹಿಂಜರಿತವಾಗಿದೆ ಎಂದು ತಿಳಿಸಿದೆ. ಈ ವರ್ಷ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಇದರಿಂದ ಕೃಷಿ ಚಟುವಟಿಕೆಗಳು ಸುಧಾರಿಸಲಿವೆ. ಇದು ಆರ್ಥಿಕ ಹಿಂಜರಿತದ ತೀವ್ರತೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ ಎಂದು ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ