ಆ್ಯಪ್ನಗರ

ಆರ್ಥಿಕತೆ 5 ಟ್ರಿಲಿಯನ್‌ ಡಾಲರ್‌ ತಲುಪುವ ಕನಸಿಗೆ ಗುಡ್‌ ಬೈ ಹೇಳಿ: ಸುಬ್ರಮಣಿಯನ್‌ ಸ್ವಾಮಿ

ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್‌ ಡಾಲರ್‌ಗೆ ಕೊಂಡೊಯ್ಯುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವಾರು ಬಾರಿ ಪ್ರಸ್ತಾಪಿಸಿದ್ದರು. ನಿರ್ಮಲಾ ಸೀತಾರಾಮನ್‌ ಕೂಡ ಕೇಂದ್ರ ಬಜೆಟ್‌ ಭಾಷಣದಲ್ಲಿ ಈ ವಿಷಯದ ಬಗ್ಗೆ ಹೆಚ್ಚು ಗಮನ ಹರಿಸಿದ್ದರು.

Vijaya Karnataka Web 31 Aug 2019, 7:26 pm
ಹೊಸದಿಲ್ಲಿ: ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್‌ ಅಮೆರಿಕನ್‌ ಡಾಲರ್‌ಗೆ ಹೆಚ್ಚಿಸುವ ಕೇಂದ್ರ ಸರಕಾರದ ಗುರಿಗೆ ಭಾರಿ ಟೀಕೆಗಳು ವ್ಯಕ್ತವಾಗಿವೆ.
Vijaya Karnataka Web ಸುಬ್ರಮಣಿಯನ್‌ ಸ್ವಾಮಿ
ಸುಬ್ರಮಣಿಯನ್‌ ಸ್ವಾಮಿ


ಈಗ ಬಿಜೆಪಿಯ ಫೈರ್‌ ಬ್ರಾಂಡ್ ಸುಬ್ರಮಣಿಯನ್‌ ಸ್ವಾಮಿ ಅವರೇ ಟೀಕೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮುಂದಿನ ಐದು ವರ್ಷದಲ್ಲಿ ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್‌ಗೆ ಏರಿಸುವ ಗುರಿ ಹೊಂದಿದ್ದಾರೆ. ಆದರೆ ಅದನ್ನು ಸಾಧಿಸುವ ಧೈರ್ಯ ಮತ್ತು ಜ್ಞಾನ ಎರಡೂ ನಮ್ಮಲ್ಲಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

5 ಟ್ರಿಲಿಯನ್‌ ಆರ್ಥಿಕತೆ ಹೊಂದುವ ಗುರಿಯನ್ನು ಮರೆತು ಬಿಡುವುದು ಒಳಿತು ಎಂದು ಖಡಕ್ಕಾಗಿ ಸ್ವಾಮಿ ಟ್ವೀಟಿಸಿದ್ದಾರೆ.


ಕೇಂದ್ರ ಸರಕಾರ ನೂತನ ಆರ್ಥಿಕ ನೀತಿಗೆ ಆದ್ಯತೆ ನೀಡಬೇಕು. 5 ಟ್ರಿಲಿಯನ್‌ ಗುರಿಯನ್ನು ಹಂತಹಂತವಾಗಿ ಮರೆತುಬಿಡಬೇಕು ಎಂದು ಸುಬ್ರಮಣಿಯನ್‌ ಸ್ವಾಮಿ ಸಲಹೆ ನೀಡಿದ್ದಾರೆ.

ದೇಶದ ಜಿಡಿಪಿ ದರ ಈಗ ಏಳು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದೇ ರೀತಿ ಬಿಟ್ಟರೆ ಪರಿಸ್ಥಿತಿ ಇನ್ನಷ್ಟ ವಿಷಮವಾಗುತ್ತದೆ.

ಕಳೆದ ಆರು ವರ್ಷಗಳಲ್ಲೇ ಜಿಡಿಪಿ ದರ ಕನಿಷ್ಠ ಶೇ. 5ಕ್ಕೆ ಕುಸಿದಿದೆ. ಇದು ಹೀಗೆ ಮುಂದುವರೆದರೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಕೇಂದ್ರ ಸರ್ಕಾರ ಕೂಡಲೇ ಹೊಸ ಆರ್ಥಿಕ ನೀತಿಯನ್ನು ಜಾರಿಗೊಳಿಸದೆ ಹೋದರೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಗುಡ್ ಬೈ ಹೇಳಲು ಸಿದ್ಧರಾಗಬೇಕಾಗುತ್ತದೆ ಎಂದರು.

ಧೈರ್ಯ ಮತ್ತು ಜ್ಞಾನ ಬೇಕಾಗುತ್ತದೆ ಆರ್ಥಿಕತೆ ವೃದ್ಧಿಸಲು. ಆದರೆ ಆ ಎರಡೂ ಇಂದು ನಮ್ಮಲ್ಲಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ