ಆ್ಯಪ್ನಗರ

ವಿಜಯ್ ಮಲ್ಯ ಒಡೆತನದ 'ಯುಬಿಎಚ್‌ಎಲ್' ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಸಾಲ ಪಾವತಿಸದೆ ದೇಶ ಬಿಟ್ಟು ಪರಾರಿಯಾಗಿದ್ದ ವಿಜಯ್ ಮಲ್ಯ ಒಡೆತನದ ಯುನೈಟೆಡ್ ಬ್ರೆವರೀಸ್ ಹೋಲ್ಡಿಂಗ್ಸ್ ಲಿಮಿಟೆಡ್ (ಯುಬಿಎಚ್‌ಎಲ್) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

Vijaya Karnataka Web 26 Oct 2020, 6:03 pm
ಹೊಸದಿಲ್ಲಿ: ಸಾಲ ಪಾವತಿಸದೆ ದೇಶ ಬಿಟ್ಟು ಪರಾರಿಯಾಗಿದ್ದ ವಿಜಯ್ ಮಲ್ಯ ಒಡೆತನದ ಯುನೈಟೆಡ್ ಬ್ರೆವರೀಸ್ ಹೋಲ್ಡಿಂಗ್ಸ್ ಲಿಮಿಟೆಡ್ (ಯುಬಿಎಚ್‌ಎಲ್) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
Vijaya Karnataka Web Vijay Mallya
The agency has also requested a LR to be issued to grant permission for use of evidence already provided by the United States Department of Justice (USDoJ) in the two cases.


ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಯುಬಿಎಚ್‌ಎಲ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಕಿಂಗ್ ಫಿಷರ್ ಏರ್ಲೈನ್ಸ್ ಲಿಮಿಟೆಡ್ ನ ಸಾಲಗಳನ್ನು ಮರುಪಾವತಿ ಮಾಡುವುದಕ್ಕಾಗಿ ಯುಬಿಎಚ್‌ಎಲ್ ಕಂಪನಿಯನ್ನು ಮುಚ್ಚುವುದಕ್ಕೆ ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿಕೊಂಡಿತ್ತು.

ಯುಬಿಎಚ್‌ಎಲ್‌ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಅಕ್ಟೋಬರ್‌ 8 ರಂದು ಸುಪ್ರೀಂ ಕೋರ್ಟ್‌ನಲ್ಲಿ ಆಗ್ರಹಿಸಿತ್ತು.

ವಿಜಯ್ ಮಲ್ಯಗೆ ಮುಖಭಂಗ; ಮಲ್ಯ ಸಲ್ಲಿಸಿದ್ದ ಅರ್ಜಿಯನ್ನೇ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿ ಯು. ಯು. ಲಲಿತ್ ಅವರಿದ್ದ ಸುಪ್ರೀಂ ಪೀಠ, ಯುಬಿಹೆಚ್‌ಎಲ್ ನ ಅರ್ಜಿಯನ್ನು ತಿರಸ್ಕರಿಸಿದ್ದು, ಯುಬಿ ಗ್ರೂಪ್ ನ 102 ವರ್ಷಗಳ ಮಾತೃಸಂಸ್ಥೆ ಮುಚ್ಚುವುದನ್ನು ತಡೆಹಿಡಿಯಲಾಗಿದೆ.

ಎಸ್‌ಬಿಐ ಪರ ವಾದ ಮಂಡಿಸುತ್ತಿರುವ ಮುಕುಲ್ ರೋಹಟ್ಗಿ ಅವರು " ಈವರೆಗೂ 3,600 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಆದರೆ, ಮಲ್ಯಾ ಹಾಗೂ ಯುಬಿಹೆಚ್‌ಎಲ್ ನಿಂದ ಇನ್ನೂ 11,000 ಕೋಟಿ ರೂಪಾಯಿ ಬಾಕಿ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ವಿಜಯ್ ಮಲ್ಯ ಅವರ ಸಂಸ್ಥೆಗಳ ಆಸ್ತಿಗಳನ್ನು ವಶಕ್ಕೆ ಪಡೆಯಬಾರದಿತ್ತು, ಬ್ಯಾಂಕ್ ಗಳಿಗೆ ಅದರ ಮೇಲೆ ಹೆಚ್ಚು ಹಕ್ಕಿದೆ ಎಂದು ಹೇಳಿದರು.

ಇಂಗ್ಲೆಂಡ್‌ನ ರಹಸ್ಯ ವಿಚಾರಣೆಯಿಂದ ವಿಜಯ್‌ ಮಲ್ಯ ಹಸ್ತಾಂತರ ವಿಳಂಬ: ಕೇಂದ್ರ

ಇತ್ತೀಚೆಗಷ್ಟೇ ವಿಜಯ್ ಮಲ್ಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ತೀರ್ಪಿನ ಪುನರ್‌ಪರಿಶೀಲನೆ ಅರ್ಜಿಯನ್ನು ಕೂಡ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ