ಆ್ಯಪ್ನಗರ

ವಿಚಾರಣೆ ಎದುರಿಸಲು ಮಾರನ್‌ಗೆ ಸುಪ್ರೀಂ ಕೋರ್ಟ್‌ ಆದೇಶ

ಅಕ್ರಮವಾಗಿ ಟೆಲಿಫೋನ್‌ ಎಕ್ಸ್‌ಚೇಂಜ್‌ಗಳನ್ನು ಅಳವಡಿಸಿದ್ದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್‌ಗೆ ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ.

Vijaya Karnataka 31 Jul 2018, 10:04 am
ಹೊಸದಿಲ್ಲಿ: ಅಕ್ರಮವಾಗಿ ಟೆಲಿಫೋನ್‌ ಎಕ್ಸ್‌ಚೇಂಜ್‌ಗಳನ್ನು ಅಳವಡಿಸಿದ್ದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್‌ಗೆ ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ.
Vijaya Karnataka Web dayanidhi maran


ಯುಪಿಎ ಸರಕಾರದ ಮೊದಲ ಅವಧಿಯಲ್ಲಿ ದಯಾನಧಿ ಮಾರನ್‌ ಟೆಲಿಕಾಂ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಸೋದರ ಕಲಾನಿಧಿ ಮಾರನ್‌ ಅವರ ಸನ್‌ ನೆಟ್‌ವರ್ಕ್‌ಗೆ ಅನುಕೂಲವಾಗುವಂತೆ 700 ಹೈ ಎಂಡ್‌ ಟೆಲಿಕಾಂ ಸಂಪರ್ಕವನ್ನು ಮಾರನ್‌ ನಿವಾಸ ಮತ್ತು ಕಚೇರಿಗೆ ಕಲ್ಪಿಸಲಾಗಿತ್ತು.ಈ ನಿಟ್ಟಿನಲ್ಲಿ ಅಂದು ಆರಂಭಿಸಲಾಗಿದ್ದ ಟೆಲಿಫೋನ್‌ ಎಕ್ಸ್‌ಚೇಂಜ್‌ಗಳನ್ನು ಕಾನೂನುಬಾಹಿರ ಎಂದು ಸಿಬಿಐ ಗುರ್ತಿಸಿದೆ. ಇದರ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸೂಚಿಸಿದೆ.

ಈ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸಿದ್ದ ಸಿಬಿಐ ಕೋರ್ಟ್‌ನ ಆದೇಶವನ್ನು ಮದ್ರಾಸ್‌ ಕೋರ್ಟ್‌ ಜು.25ರಂದು ರದ್ದುಗೊಳಿಸಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮಾರನ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಈಗ ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ