ಹೊಸದಿಲ್ಲಿ: ಜಿಎಸ್ಟಿ ಪದ್ಧತಿಯಡಿಯಲ್ಲಿ ತೆರಿಗೆ ವಂಚಿಸುವವರನ್ನು ಬಂಧಿಸುವ ತೆರಿಗೆ ಅಧಿಕಾರಿಗಳ ಅಧಿಕಾರವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಮತ್ತು ನ್ಯಾಯಮೂರ್ತಿ ಅನಿರುದ್ಧ ಬೋಸ್ ಅವರನ್ನು ಒಳಗೊಂಡ ಪೀಠ, ಕೇಂದ್ರ ಸರಕಾರಕ್ಕೆ ವಿವರಣೆ ಕೋರಿ ನೋಟಿಸ್ ಜಾರಿಗೊಳಿಸಿದೆ.
ಸಿಜಿಎಸ್ಟಿ ಅಡಿಯಲ್ಲಿ ವ್ಯಕ್ತಿಗಳನ್ನು ಬಂಧಿಸುವ ತೆರಿಗೆ ಅಧಿಕಾರಿಗಳ ಅಧಿಕಾರವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಜಿಎಸ್ಟಿ ವಂಚಕರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ಸಂಬಂಧಿಸಿ ನಾನಾ ಹೈಕೋರ್ಟ್ಗಳು ಭಿನ್ನ ದೃಷ್ಟಿಕೋನವನ್ನು ಹೊಂದಿವೆ.ಆದ್ದರಿಂದ ಈ ಕುರಿತ ಪ್ರಶ್ನೆಯನ್ನು ಇತ್ಯರ್ಥಪಡಿಸಬೇಕಾದ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್ ಪೀಠವು ಹೇಳಿದೆ.
ಜಿಎಸ್ಟಿ ವಂಚನೆ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ಸಂಬಂಧಿಸಿ ತನ್ನ ಈ ಹಿಂದಿನ ಆದೇಶವನ್ನು ಪರಿಗಣಿಸುವಂತೆ ಎಲ್ಲ ಹೈಕೋರ್ಟ್ಗಳಿಗೆ ಸುಪ್ರೀಂಕೋರ್ಟ್ ತಿಳಿಸಿದೆ. ಈ ಹಿಂದೆ ತೆಲಂಗಾಣ ಹೈಕೋರ್ಟ್ ಜಿಎಸ್ಟಿ ತೆರಿಗೆ ವಂಚನೆ ಪ್ರಕರಣದಲ್ಲಿ ವ್ಯಕ್ತಿಗಳಿಗೆ ಬಂಧನ ವಿರುದ್ಧ ರಕ್ಷಣೆ ನೀಡಬೇಕಿಲ್ಲ ಎಂದು ಆದೇಶಿಸಿತ್ತು.
ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಮತ್ತು ನ್ಯಾಯಮೂರ್ತಿ ಅನಿರುದ್ಧ ಬೋಸ್ ಅವರನ್ನು ಒಳಗೊಂಡ ಪೀಠ, ಕೇಂದ್ರ ಸರಕಾರಕ್ಕೆ ವಿವರಣೆ ಕೋರಿ ನೋಟಿಸ್ ಜಾರಿಗೊಳಿಸಿದೆ.
ಸಿಜಿಎಸ್ಟಿ ಅಡಿಯಲ್ಲಿ ವ್ಯಕ್ತಿಗಳನ್ನು ಬಂಧಿಸುವ ತೆರಿಗೆ ಅಧಿಕಾರಿಗಳ ಅಧಿಕಾರವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಜಿಎಸ್ಟಿ ವಂಚಕರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ಸಂಬಂಧಿಸಿ ನಾನಾ ಹೈಕೋರ್ಟ್ಗಳು ಭಿನ್ನ ದೃಷ್ಟಿಕೋನವನ್ನು ಹೊಂದಿವೆ.ಆದ್ದರಿಂದ ಈ ಕುರಿತ ಪ್ರಶ್ನೆಯನ್ನು ಇತ್ಯರ್ಥಪಡಿಸಬೇಕಾದ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್ ಪೀಠವು ಹೇಳಿದೆ.
ಜಿಎಸ್ಟಿ ವಂಚನೆ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ಸಂಬಂಧಿಸಿ ತನ್ನ ಈ ಹಿಂದಿನ ಆದೇಶವನ್ನು ಪರಿಗಣಿಸುವಂತೆ ಎಲ್ಲ ಹೈಕೋರ್ಟ್ಗಳಿಗೆ ಸುಪ್ರೀಂಕೋರ್ಟ್ ತಿಳಿಸಿದೆ. ಈ ಹಿಂದೆ ತೆಲಂಗಾಣ ಹೈಕೋರ್ಟ್ ಜಿಎಸ್ಟಿ ತೆರಿಗೆ ವಂಚನೆ ಪ್ರಕರಣದಲ್ಲಿ ವ್ಯಕ್ತಿಗಳಿಗೆ ಬಂಧನ ವಿರುದ್ಧ ರಕ್ಷಣೆ ನೀಡಬೇಕಿಲ್ಲ ಎಂದು ಆದೇಶಿಸಿತ್ತು.