ಆ್ಯಪ್ನಗರ

ನವೋದ್ಯಮಗಳಿಗೆ ಹೂಡಿಕೆ ಉತ್ತೇಜಿಸಲು ‘ದಿ ಬಿಗ್ ಟೆಕ್ ಷೋ@ಮೈಸೂರು'

ಕಾರ್ಯಕ್ರಮದ ಭಾಗವಾಗಿ ಆಯ್ದ ಕಂಪನಿಗಳನ್ನು ಹಾಗೂ ನಗರ ಮೂಲದ ಉದ್ಯಮ ಪ್ರವರ್ತಕರನ್ನು ಸನ್ಮಾನಿಸಲಾಗುತ್ತದೆ. ಇದರ ಜೊತೆಗೆ, ಕೆಡಿಇಎಂ ಹಾಗೂ ಭೇರುಂಡ ಫೌಂಡೇಷನ್, ಕೆಡಿಇಎಂ ಹಾಗೂ ಐಸ್ಯಾಕ್ ನಡುವೆ ಒಡಂಬಡಿಕೆಗಳು ಏರ್ಪಡಲಿವೆ.

Vijaya Karnataka Web 24 Oct 2021, 7:19 pm
ಮೈಸೂರು: ರಾಜ್ಯದ ಸಾಂಸ್ಕೃತಿಕ ರಾಜಧಾನಿ ಎಂದು ಹೆಸರಾಗಿರುವ ದಸರಾ ಖ್ಯಾತಿಯ ನಗರವು ಸೋಮವಾರ (ಅಕ್ಟೋಬರ್‌ 25) ತಂತ್ರಜ್ಞಾನ ಉದ್ದಿಮೆಗೆ ಸಂಬಂಧಿಸಿದ ‘ದಿ ಬಿಗ್ ಟೆಕ್ ಷೋ@ಮೈಸೂರು’ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ.
Vijaya Karnataka Web ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ


ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ (ದ ರಾಡಿಸನ್ ಬ್ಲೂ ಪ್ಲಾಾಜಾ ಹೋಟೆಲ್‌ನಲ್ಲಿ) ನಡೆಯುವ ಒಂದು ದಿನದ (ಬೆಳಗ್ಗೆ 10ರಿಂದ ಸಂಜೆ 4;30ರವರೆಗೆ) ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರ್ಚ್ಯುಯಲ್ ಆಗಿ ಉದ್ಘಾಟಿಸುವರು. ರಾಜ್ಯದ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸರಕಾರದ ಕಾರ್ಯಕ್ರಮಗಳು ಹಾಗೂ ಉಪಕ್ರಮಗಳಾದ ‘ಬಿಯಾಂಡ್ ಬೆಂಗಳೂರು’, ‘ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್-ಕೆಡಿಇಎಂ’, ‘ಮೇಕ್ ಇನ್ ಇಂಡಿಯಾ’, ‘ಡಿಜಿಟಲ್ ಇಂಡಿಯಾ’ ಮತ್ತು ‘ಸ್ಟಾರ್ಟ್ಅಪ್ ಇಂಡಿಯಾ’ಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹೊಸ ಉದ್ದಿಮೆಗಳಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲುವರು.

100 ಕೋಟಿ ಕೋವಿಡ್ ಲಸಿಕೆ ಮಹತ್ವದ ಸಾಧನೆ; ಡಾ.ಸಿ.ಎನ್.ಅಶ್ವತ್ಥನಾರಾಯಣ

ಕಾರ್ಯಕ್ರಮದ ಭಾಗವಾಗಿ ಆಯ್ದ ಕಂಪನಿಗಳನ್ನು ಹಾಗೂ ನಗರ ಮೂಲದ ಉದ್ಯಮ ಪ್ರವರ್ತಕರನ್ನು ಸನ್ಮಾನಿಸಲಾಗುತ್ತದೆ. ಇದರ ಜೊತೆಗೆ, ಕೆಡಿಇಎಂ ಹಾಗೂ ಭೇರುಂಡ ಫೌಂಡೇಷನ್, ಕೆಡಿಇಎಂ ಹಾಗೂ ಐಸ್ಯಾಕ್ ನಡುವೆ ಒಡಂಬಡಿಕೆಗಳು ಏರ್ಪಡಲಿವೆ. ಕೆಡಿಇಎಂ ಮೈಸೂರು ಶಾಖೆಯು ಸೈಬರ್ ಭದ್ರತೆಗೆ ಸಂಬಂಧಿಸಿದ ಉತ್ಕೃಷ್ಠತಾ ಕೇಂದ್ರದ ಸ್ಥಾಪನೆಗಾಗಿ ಪ್ರಸ್ತಾವ ಸಲ್ಲಿಸಲಿದೆ.

ನಗರವು ಇಡೀ ದೇಶದಲ್ಲೇ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI) ಕೇಂದ್ರವಿರುವ ರಾಜಧಾನಿಯಲ್ಲದ ಮೊತ್ತಮೊದಲ ನಗರವಾಗಿದೆ. ಜೊತೆಗೆ, ಇದು ರಾಜ್ಯದಲ್ಲಿ ಸಾಫ್ಟ್ ವೇರ್ ರಫ್ತಿನಲ್ಲಿ ಎರಡನೇ ಸ್ಥಾನದಲ್ಲಿದ್ದು, ಮಾಹಿತಿ ತಂತ್ರಜ್ಞಾನ ವಲಯವಾಗಿ ವಿಕಾಸಗೊಳ್ಳುತ್ತಿದೆ.

ಟೆಲಿ ಇಂಡಿಯಾ ನೆಟ್‌ವರ್ಕ್ಸ್ ನಿಂದ 500 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

ಪ್ರಮುಖ ಶೈಕ್ಷಣಿಕ ಕೇಂದ್ರವೂ ಆಗಿರುವ ನಗರವು ಎಲೆಕ್ಟ್ರಾನಿಕ್ ವ್ಯವಸ್ಥೆ ವಿನ್ಯಾಸ ಹಾಗೂ ತಯಾರಿಕೆಯಲ್ಲೂ (ಇ.ಎಸ್.ಡಿ.ಎಂ.) ದೃಢವಾದ ಹೆಜ್ಜೆಗಳನ್ನು ಊರಿ ಮುನ್ನಡೆಯುತ್ತಿದೆ. ಈ ಅಂಶಗಳ ಹಿನ್ನೆಲೆಯಲ್ಲಿ ಸೋಮವಾರ ನಡೆಯುವ ಕಾರ್ಯಕ್ರಮವು ಗಮನಾರ್ಹವಾಗಿದೆ.

ಸಿಐಐ ಮೈಸೂರು ಅಧ್ಯಕ್ಷ ಹಾಗೂ ಎನ್.ಆರ್.ಗ್ರೂಪ್ ನಿರ್ದೇಶಕ ಪವನ್ ರಂಗ, ಐಬಿಎಂ ಇಂಡಿಯಾ/ದಕ್ಷಿಣ ಏಷ್ಯಾ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ಪಟೇಲ್, ಬಯೋಕಾನ್ ಸ್ಥಾಪಕಿ ಕಿರಣ್ ಮಜುಂದಾರ್ ಷಾ, ಸಂಸದ ಪ್ರತಾಪ್ ಸಿಂಹ, ರಾಜ್ಯ ನವೋದ್ಯಮ ದೂರದರ್ಶಿತ್ವ ಮಂಡಳಿ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಎಲೆಕ್ಟ್ರಾನಿಕ್ಸ್ ಮತ್ತು ಐಟಿ/ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ ಇ ವಿ ರಮಣ ರೆಡ್ಡಿ, ನ್ಯಾಸ್ ಕಾಂ ಅಧ್ಯಕ್ಷ ದೇಬ್ ಜಾನಿ ಘೋಷ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು ಪಾಲ್ಗೊಳ್ಳುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ