ಆ್ಯಪ್ನಗರ

ರೈಲು ಪ್ರಯಾಣಕ್ಕೆ ಉಚಿತ ವಿಮೆ ಇಲ್ಲ

ಭಾರತೀಯ ರೈಲ್ವೆಯು ಸೆಪ್ಟೆಂಬರ್‌ 1ರಿಂದ ಗ್ರಾಹಕರ ಪ್ರಯಾಣಕ್ಕೆ ಉಚಿತ ವಿಮೆಯನ್ನು ನೀಡುವುದಿಲ್ಲ ಎಂದು ಶನಿವಾರ ತಿಳಿಸಿದೆ.

Vijaya Karnataka 12 Aug 2018, 9:20 am
ಮುಂಬಯಿ: ಭಾರತೀಯ ರೈಲ್ವೆಯು ಸೆಪ್ಟೆಂಬರ್‌ 1ರಿಂದ ಗ್ರಾಹಕರ ಪ್ರಯಾಣಕ್ಕೆ ಉಚಿತ ವಿಮೆಯನ್ನು ನೀಡುವುದಿಲ್ಲ ಎಂದು ಶನಿವಾರ ತಿಳಿಸಿದೆ.
Vijaya Karnataka Web tr


ಐಆರ್‌ಸಿಟಿಸಿಯ ಹಿರಿಯ ಅಧಿಕಾರಿಗಳು ಈ ವಿಷಯ ತಿಳಿಸಿದ್ದಾರೆ. ಸೆಪ್ಟೆಂಬರ್‌ 1ರಿಂದ ಪ್ರಯಾಣಕ್ಕೆ ಉಚಿತ ವಿಮೆ ಸ್ಥಗಿತಗೊಳಿಸಲಾಗುವುದು. ಹಾಗೂ ಉಚಿತ ವಿಮೆಯು ಐಚ್ಛಿಕ ಆಗಿರಲಿದೆ ಎಂದರು.

ಪ್ರಯಾಣಿಕರು ಐಆರ್‌ಸಿಟಿಸಿ ವೆಬ್‌ಸೈಟ್‌ ಅಥವಾ ಮೊಬೈಲ್‌ ಅಪ್ಲಿಕೇಶನ್‌ ಮೂಲಕ ಟಿಕೆಟ್‌ ಬುಕ್‌ ಮಾಡುವ ಸಂದರ್ಭ ಉಚಿತ ಪ್ರಯಾಣ ವಿಮೆಯನ್ನು ಪಡೆದುಕೊಳ್ಳಬಹುದು ಅಥವಾ ಪಡೆಯದಿರಲು ಆಯ್ಕೆ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಪ್ರಯಾಣದ ವೇಳೆ ಪ್ರಯಾಣಿಕ ಮೃತಪಟ್ಟರೆ 10 ಲಕ್ಷ ರೂ. ಗರಿಷ್ಠ ಪರಿಹಾರ ಹಾಗೂ ಅಪಘಾತದಿಂದ ವಿಕಲ ಚೇತನರಾದರೆ 7.5 ಲಕ್ಷ ರೂ, ಗಾಯವಾದರೆ 2 ಲಕ್ಷ ರೂ. ವಿಮೆ ಪರಿಹಾರ ಸಿಗುತ್ತದೆ.

ವಿಮೆಗೆ ತಗಲುವ ಶುಲ್ಕ ಶೀಘ್ರ ನಿಗದಿಯಾಗುವ ಸಾಧ್ಯತೆ ಇದೆ. ಎಷ್ಟು ಮೊತ್ತ ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ