ಆ್ಯಪ್ನಗರ

ಆರ್ಥಿಕ ಸದೃಢತೆಯತ್ತ ಕಾರ್ಯೋನ್ಮುಖರಾಗಿದ್ದೇವೆ: ಪ್ರಧಾನಿ ಮೋದಿ ಭರವಸೆ

ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಆರ್ಥಿಕತೆಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಭರವಸೆ ನೀಡದ್ದಾರೆ.

Vijaya Karnataka Web 11 May 2020, 10:57 pm
ನವದೆಹಲಿ: ಲಾಕ್‌ಡೌನ್ ಪರಿಣಾಮವಾಗಿ ಎದುರಾಗಿರುವ ಆರ್ಥಿಕ ಹಿಂಜರಿಕೆಯನ್ನು ನಿಭಾಯಿಸಲು ಭಾರತ ಸಶಕ್ತವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web Modi
ಸಂಗ್ರಹ ಚಿತ್ರ


ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಆರ್ಥಿಕತೆಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಲಾಕ್‌ಡೌನ್ ಸಡಿಲಿಕೆಯ ಕಾರಣ ಹೇಳಿದ ಪ್ರಧಾನಿ!

ದೇಶದ ಆರ್ಥಿಕತೆಗೆ ಮಾರಕ ಕೊರೊನಾ ವೈರಸ್ ನೀಡಿರುವ ಹೊಡೆತದ ಅರಿವು ಕೇಂದ್ರ ಸರ್ಕಾರಕ್ಕಿದೆ. ಈ ಕಾರಣಕ್ಕಾಗಿಯೇ ಲಾಕ್‌ಡೌನ್ ನಿಯಮಾವಳಿಗಳಲ್ಲಿ ಕೆಲವು ಸಡಿಲಿಕೆ ತಂದು ವಾಣಿಜ್ಯ ಚಟುವಟಿಕೆಗಳನ್ನು ಪುನರಾರಂಭಿಸಲಾಗಿದೆ. ಆದರೆ ಈ ಕಾರ್ಯವನ್ನು ಅತ್ಯಂತ ಜಾಗೂರಕತೆಯಿಂದ ಮಾತಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡಿ ಆರ್ಥಿಕ ಸದೃಢತೆಯನ್ನು ಸಾಧಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಸಜ್ಜಾಗಿದೆ ಎಂದು ಮೋದಿ ಈ ವೇಳೆ ಭರವಸೆ ನೀಡಿದರು.

ಆರ್ಥಿಕ ಪ್ಯಾಕೇಜ್ ಬೇಕು: ಮೋದಿ ಮುಂದೆ ಬೇಡಿಕೆಯಿಟ್ಟ ರಾಜ್ಯಗಳು!

ಕೊರೊನಾ ವೈರಸ್ ಹೋರಾಟದ ಭಾಗವಾಗಿ ಹೇರಲಾಗಿರುವ ಲಾಕ್‌ಡೌನ್‌ನಿಂದಾಗಿ ತೀವ್ರ ಆರ್ಥಿಕ ಹಿಂಜರಿಕೆ ಅನುಭವಿಸುತ್ತಿದ್ದು, ಕೇಂದ್ರ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ನಿರೀಕ್ಷೆಯಲ್ಲಿರುವುದಾಗಿ ಇಂದಿನ ವಿಡಿಯೋ ಸಂವಾದದಲ್ಲಿ ಬಹುತೇಕ ರಾಜ್ಯಗಳು ಹೇಳಿರುವುದನ್ನು ಇಲ್ಲಿ ಗಮನಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ