ಆ್ಯಪ್ನಗರ

ಬಿಜೆಪಿ ಸಮಾಜ ಒಡೆದರೆ, ಕಾಂಗ್ರೆಸ್ ಕೂಡಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಲಿಂಗಾಯತ ಸಮುದಾಯಗಳ ನಡುವೆ ಒಡಕು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿಲ್ಲ. ಬಿಜೆಪಿಯವರು ಕತ್ತರಿ ಇಟ್ಟುಕೊಂಡು ಸಮಾಜ ಒಡೆಯುವ ಕೆಲಸ ಮಾಡಿದರೆ, ಕಾಂಗ್ರೆಸ್ ಸೂಚಿ ಇಟ್ಟುಕೊಂಡು ಸಮಾಜ ಹೊಲಿಯುವ ಕೆಲಸ ಮಾಡುತ್ತಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

ವಿಕ ಸುದ್ದಿಲೋಕ 13 Aug 2017, 2:47 pm
ಕಲಬುರಗಿ: ಲಿಂಗಾಯತ ಸಮುದಾಯಗಳ ನಡುವೆ ಒಡಕು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿಲ್ಲ. ಬಿಜೆಪಿಯವರು ಕತ್ತರಿ ಇಟ್ಟುಕೊಂಡು ಸಮಾಜ ಒಡೆಯುವ ಕೆಲಸ ಮಾಡಿದರೆ, ಕಾಂಗ್ರೆಸ್ ಸೂಚಿ ಇಟ್ಟುಕೊಂಡು ಸಮಾಜ ಹೊಲಿಯುವ ಕೆಲಸ ಮಾಡುತ್ತಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.
Vijaya Karnataka Web cm siddaramaiah targets bjp
ಬಿಜೆಪಿ ಸಮಾಜ ಒಡೆದರೆ, ಕಾಂಗ್ರೆಸ್ ಕೂಡಿಸುತ್ತಿದೆ: ಸಿಎಂ ಸಿದ್ದರಾಮಯ್ಯ


ವಿವಿಧ ಕಾರ್ಯಕ್ರಗಳಲ್ಲಿ ಪಾಲ್ಗೊಳ್ಳಲು ಆಳಂದ ಪಟ್ಟಣಕ್ಕೆ ಆಗಮಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಹಾಗೂ ವೀರಶೈವ ಧರ್ಮ ಎರಡನ್ನೂ ಇಟ್ಟುಕೊಂಡು ಕಾನೂನು ಪ್ರಕಾರ ಯಾವ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಾಗುತ್ತದೆ ಎಂದರು. ಎರಡು ಬಣಗಳನ್ನು ಒಗ್ಗೂಡಿಸುವ ಕೆಲಸವನ್ನ ರಾಜ್ಯ ಸರಕಾರ ಮಾಡುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಕೆಲಸ ಮಾಡಲು ಕೆಲವು ಸ್ವಾಮೀಜಿಗಳಿದ್ದು, ಅವರೇ ಜಮಾಜವನ್ನು ಒಗೂಡಿಸುತ್ತಾರೆ ಎಂದು ಹೇಳಿದರು.

ಅಹಿಂದ ವೋಟ್‌ಬ್ಯಾಂಕ್ ಸೆಳೆಯಲು ಬಿಜೆಪಿ ವಿಫಲ ಪ್ರಯತ್ನ ಮಾಡುತ್ತಿದೆ. ಅವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಅಹಿಂದ ವರ್ಗಕ್ಕೆ ಬಿಜೆಪಿ ನಡವಳಿಕೆ ಬಗ್ಗೆ ಗೊತ್ತಿದೆ. ಅವರೊಂದಿಗೆ ಯಾರೂ ಹೋಗುವುದಿಲ್ಲ ಎಂದರು.

ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಧಾನಸಭಾ ಚುನಾವಣೆವರೆಗೂ ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಲಿ. ಅದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ