Please enable javascript.ಮಾದಪಟ್ಟಣದಲ್ಲಿ ಐಎನ್‌ಟಿಯುಸಿ ಸಭೆ - Madapatna: INTUC meeting - Vijay Karnataka

ಮಾದಪಟ್ಟಣದಲ್ಲಿ ಐಎನ್‌ಟಿಯುಸಿ ಸಭೆ

ವಿಕ ಸುದ್ದಿಲೋಕ 27 Aug 2015, 4:27 am
Subscribe

ಇಲ್ಲಿಗೆ ಸಮೀಪದ ಮಾದಪಟ್ಟಣದಲ್ಲಿ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಸಭೆ ನಡೆಯಿತು.

madapatna intuc meeting
ಮಾದಪಟ್ಟಣದಲ್ಲಿ ಐಎನ್‌ಟಿಯುಸಿ ಸಭೆ
ಕುಶಾಲನಗರ: ಇಲ್ಲಿಗೆ ಸಮೀಪದ ಮಾದಪಟ್ಟಣದಲ್ಲಿ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಸಭೆ ನಡೆಯಿತು.
ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ನಾಪಂಡಮುತ್ತಪ್ಪ ಅಧ್ಯಕ್ಷತೆ ವಹಿಸಿದ್ದರು. ನಂತರ ಮಾತನಾಡಿದ ಅವರು, ಕಾರ್ಮಿಕರ ಸಂಘಟನೆ ಬಹು ಮುಖ್ಯ. ಇದರ ಜತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ನೋಂದಣಿ ಮಾಡಿಕೊಂಡು ತಮ್ಮ ಬದುಕಿನಲ್ಲಿ ಯಶಸ್ಸು ಕಾಣಲು ಸರಕಾರ ದಿಂದ ಸಿಗುವ ಸೌಲಭ್ಯಗಳನ್ನು ಪಡೆಯಲು ಮತ್ತು ಸಂಘಟನೆಯ ಮೂಳಕ ತನ್ನ ಕಾರ್ಯ ಚಟುವಟಿಕೆಗಳನ್ನು ಹೆಚ್ಚಿಸಿಕೊಳ್ಳಲು ಇಂತಹ ಸಂಘ ಸಂಸ್ಥೆಗಳು ಮುಖ್ಯವಾಗಿರುವತ್ತದೆ. ಇದರಲ್ಲಿ ಪಾಲ್ಗೊಂಡು ತನ್ನ ಬೇಕು ಬೇಡಗಳನ್ನು ಈಡೇರಿಸಿಕೊಳ್ಳಲು ಅನುಕೂಲವಾಗುದೆಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಐಎನ್‌ಟಿಯುಸಿಯ ಜಿಲ್ಲಾಧ್ಯಕ್ಷ ಟಿ.ಪಿ.ಹಮೀದ್ ಮಾತನಾಡಿ, ಸೆ.1ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮ ಕೂಡಿಗೆಯಲ್ಲಿ ನಡೆಯಲಿದ್ದು, ಕಾರ್ಮಿಕರು ತಮ್ಮ ನೋಂದಣಿ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು. ಸ್ಥಳೀಯರಾದ ಪ್ರಕಾಶ್, ಗಣೇಶ್, ಉದಯ್‌ಕುಮಾರ್ ಸೇರಿದಂತೆ ಕಟ್ಟಡ ಕಾರ್ಮಿಕರು ಹಾಜರಿದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ