ಆ್ಯಪ್ನಗರ

ಶಿಕ್ಷಣಕ್ಕಾಗಿ 3 ಚಾನೆಲ್ ಬೇಡಿಕೆ ಇಟ್ಟು ಕೇಂದ್ರಕ್ಕೆ ಪತ್ರ

ಕೊರೊನಾ ವೈರಸ್ ನಂತರದ ಸಂದರ್ಭದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬೃಹತ್ ಬದಲಾವಣೆ, ದುಷ್ಪರಿಣಾಮಗಳು ಕಾಣುತ್ತಿವೆ.

Vijaya Karnataka Web 27 May 2020, 6:01 pm

ಕೊರೊನಾ ವೈರಸ್ ನಂತರದ ಸಂದರ್ಭದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬೃಹತ್ ಬದಲಾವಣೆ, ದುಷ್ಪರಿಣಾಮಗಳು ಕಾಣುತ್ತಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ನೀಡುವುದಕ್ಕಾಗಿ ದೂರದರ್ಶನದ ಮೂರು ಚಾನೆಲ್‌ಗಳನ್ನು ಶಿಕ್ಷಣ ಇಲಾಖೆಗೆ ಒದಗಿಸುವಂತೆ ಕೋರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಅವರು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದಾರೆ.
Vijaya Karnataka Web s suresh kumar
s suresh kumar


ದೂರದರ್ಶನ ಮಾಧ್ಯಮ ಗ್ರಾಮಾಂತರ ಪ್ರದೇಶಗಳಲ್ಲಿಯೂ ಸಮರ್ಥವಾಗಿ ತಲುಪುವ ಹಾಗೂ ವಿದ್ಯಾರ್ಥಿಗಳ ಗೃಹಾಧಾರಿತ ಕಲಿಕೆಗೆ ಸೂಕ್ತವಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಮೂರು ಚಾನೆಲ್‌ಗಳನ್ನು ಶಿಕ್ಷಣ ಇಲಾಖೆಗೆ ಒದಗಿಸಿ, ಸ್ಥಳೀಯ ಕೇಬಲ್ ಮಾಧ್ಯಮಗಳಲ್ಲೂ ಕಡ್ಡಾಯವಾಗಿ ಬಿತ್ತರಿಸಲು ಸೂಚನೆ ನೀಡಬೇಕು ಎಂದು ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಈಗಾಗಲೇ ದೂರದರ್ಶನದ ಚಂದನ ಚಾನೆಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳನ್ನು ಆರಂಭಿಸಲಾಗಿದೆ. ಪ್ರತಿ ದಿನ ಮಧ್ಯಾಹ್ನ 3 ರಿಂದ 4.30 ರವರೆಗೆ ನಡೆಯುತ್ತಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡುತ್ತಿದ್ದಾರೆ. ಜೊತೆಗೆ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡುತ್ತಿದ್ದಾರೆ. ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತಿದೆ.

ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಇನ್ನೂ ದಿನಾಂಕ ನಿರ್ಧಾರವಾಗಿಲ್ಲ

ಒಂದು ವೇಳೆ ಶಿಕ್ಷಣಕ್ಕಾಗಿ ಚಾನೆಲ್‌ಗಳನ್ನು ಕೇಂದ್ರ ಒದಗಿಸಿಕೊಟ್ಟಲ್ಲಿ, ಗ್ರಾಮೀಣ ಭಾಗದ ಮಕ್ಕಳು ಎಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಿದ್ದಾರೆ ಎಂಬುದನ್ನು ಪರಿಶೀಲನೆ ಮಾಡಬೇಕಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌