ಆ್ಯಪ್ನಗರ

ಐಸಿಎಆರ್‌ ಜೆಎಆರ್‌ಎಫ್‌ ಪ್ರಶಸ್ತಿ 2018: ಬೆಂಗಳೂರು ಕೃಷಿ ವಿವಿಗೆ ಪ್ರಥಮ ಸ್ಥಾನ

ಕೃಷಿ ವಿಜ್ಞಾನ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳು ಜೆಆರ್‌ಎಫ್‌ ಪಡೆದುಕೊಂಡ ಹಿನ್ನೆಲೆ ಬೆಂಗಳೂರಿನ ಕೃಷಿ ವಿಜ್ಞಾನ ವಿವಿಗೆ ಪ್ರಥಮ ಸ್ಥಾನ ದೊರಕಿದೆ. ಹೊಸದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Vijaya Karnataka Web 23 Mar 2019, 3:34 pm
ಬೆಂಗಳೂರು: ನಗರದ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ದೊರಕಿದೆ. ಹೆಚ್ಚು ವಿದ್ಯಾರ್ಥಿಗಳು ಜೂನಿಯರ್ ರೀಸರ್ಚ್ ಫೆಲೋಶಿಪ್‌ ಪಡೆದುಕೊಂಡ ಹಿನ್ನೆಲೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
Vijaya Karnataka Web uas bangalore


ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯ ಕೃಷಿ ವಿಜ್ಞಾನ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳು ಭಾರತೀಯ ಕೃಷಿ ಸಂಶೋಧನಾ ಮಂಡಳಿ ( ಐಸಿಎಆರ್‌ ) ನಡೆಸಿದ ಜೂನಿಯರ್ ರೀಸರ್ಚ್ ಫೆಲೋಶಿಪ್ (ಜೆಆರ್‌ಎಫ್‌) ಪಡೆದುಕೊಂಡ ಹಿನ್ನೆಲೆ ವಿವಿಗೆ ಪ್ರಥಮ ಸ್ಥಾನ ದೊರಕಿದೆ. ಅಲ್ಲದೆ, ಎಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ 7 ವಿದ್ಯಾರ್ಥಿಗಳಿಗೆ ಜೂನಿಯರ್ ರೀಸರ್ಚ್ ಫೆಲೋಶಿಪ್ ದೊರೆತ ಹಿನ್ನೆಲೆ ಎರಡನೇ ಸ್ಥಾನವನ್ನೂ ತನ್ನದಾಗಿಸಿಕೊಂಡಿದೆ.

ಈ ಸಂಬಂಧ ಜನವರಿ 30, 2019ರಲ್ಲಿ ಹೊಸದಿಲ್ಲಿಯಲ್ಲಿ ನಡೆದ ಕೃಷಿ ವಿವಿಯ ಉಪಕುಲಪತಿಗಳ ವಾರ್ಷಿಕ ಸಮ್ಮೇಳನದಲ್ಲಿ ಡಾ. ಎಸ್‌.ರಾಜೇಂದ್ರ ಪ್ರಸಾದ್‌ಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ರಾಧಾ ಮೋಹನ್ ಸಿಂಗ್ ಪ್ರಶಸ್ತಿ ವಿತರಿಸಿದರು.

ಇನ್ನೊಂದೆಡೆ, 2019-20 ರ ಶೈಕ್ಷಣಿಕ ವರ್ಷದಡಿ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ ಎಕ್ಸಾಂಪ್ಯಾಡ್ ವ್ಯವಸ್ಥೆಯನ್ನು ಜಾರಿಗೆ ತರಲುವ ಯೋಜನೆ ಮಾಡುತ್ತಿದೆ. ಇದರಡಿ ಪೇಪರ್‌ ರಹಿತ ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾನಿಲಯ ಯೋಜನೆಯನ್ನು ಮಾಡಲಾಗುತ್ತಿದೆ ಎಂದು ವಿವಿ ಪತ್ರಿಕಾ ಟಿಪ್ಪಣಿ ಹೊರಡಿಸಿದೆ.

ಪರೀಕ್ಷೆಗಳನ್ನು ಹೆಚ್ಚು ಪಾರದರ್ಶಕ ಹಾಗೂ ಟ್ಯಾಂಪರ್‌ಪ್ರೂಫ್‌ ಆಗಿರುವಂತೆ ನೋಡಿಕೊಳ್ಳಲು ಈ ವ್ಯವಸ್ಥೆ ಮಾಡಲಾಗುತ್ತಿದೆ. ಇದು ವಿದ್ಯಾರ್ಥಿ ಸ್ನೇಹಿ, ಪರಿಸರ ಸ್ನೇಹಿ ಹಾಗೂ ಪ್ರಕ್ರಿಯೆ ಸ್ನೇಹಿಯಾಗಿದ್ದು, ಇದರಿಂದ ಪರೀಕ್ಷೆಗಳ ನಿಖರತೆ, ವೇಗ ಮತ್ತು ಪರೀಕ್ಷೆಗಳು ಹಾಗೂ ಮೌಲ್ಯಮಾಪನಗಳ ಗುಣಮಟ್ಟ ಹೆಚ್ಚಿಸುವುದರ ಜತೆಗೆ ಪರಿಶ್ರಮವನ್ನು ಕಡಿಮೆ ಮಾಡುತ್ತದೆ ಎಂದು ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌