ಆ್ಯಪ್ನಗರ

ಪಿಯುಸಿ ಫಲಿತಾಂಶ: ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಾಹಿತಿ

ಮರುಮೌಲ್ಯಮಾಪನದಲ್ಲಿ ನಿಗದಿಪಡಿಸಿರುವ ಅಂಕಗಳಿಗಿಂತ ಹೆಚ್ಚಿನ ಅಂಕಗಳು ಅಥವಾ ಕಡಿಮೆ ಅಂಕಗಳು ಬಂದಲ್ಲಿ ಅಂಕಗಳೊಂದಿಗೆ ಪರಿಷ್ಕರಿಸಿ ಪ್ರಕಟಿಸಲಿದೆ.

Vijaya Karnataka Web 15 Apr 2019, 12:48 pm
ಬೆಂಗಳೂರು: ಮರುಮೌಲ್ಯಮಾಪನ ಬಯಸುವ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಆನ್‌ಲೈನ್‌ ಪೋರ್ಟಲ್‌ ಅಪ್‌ಡೇಟ್‌ ಮಾಡಲು ಏಪ್ರಿಲ್‌ 30 ಕಡೆಯ ದಿನಾಂಕ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Vijaya Karnataka Web Exam


ಮರುಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ ರೂ.1670. ಅಂಕಗಳ ಮರುಎಣಿಕೆಗೆ ಪ್ರತ್ಯೇಕ ಶುಲ್ಕವಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬಾರದು ಎಂದು ಪಿಯು ಇಲಾಖೆ ತಿಳಿಸಿದೆ.

ಪಿಯುಸಿ ಫಲಿತಾಂಶ: ಮೂಡಬಿದಿರೆಯ ಒಲ್ವಿಟಾ ಅನ್ಸಿಲ್ಲಾ, ಅಳಿಕೆಯ ಕೃಷ್ಣ ಶರ್ಮ ರಾಜ್ಯಕ್ಕೆ ಪ್ರಥಮ

ಮರುಮೌಲ್ಯಮಾಪನದಲ್ಲಿ ನಿಗದಿಪಡಿಸಿರುವ ಅಂಕಗಳಿಗಿಂತ ಹೆಚ್ಚಿನ ಅಂಕಗಳು ಅಥವಾ ಕಡಿಮೆ ಅಂಕಗಳು ಬಂದಲ್ಲಿ ಅಂಕಗಳೊಂದಿಗೆ ಪರಿಷ್ಕರಿಸಿ ಪ್ರಕಟಿಸಲಿದೆ. ವಿದ್ಯಾರ್ಥಿಗಳಿಗೆ ಈ ಮೊದಲು ಪಡೆದ ಅಂಕಗಳನ್ನು ಮರು ಸ್ಥಾಪಿಸಲು ಅವಕಾಶವಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅನುತ್ತೀರ್ಣ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ನಿಗದಿ ಪಡಿಸಿದ ದಿನಾಂಕಗಳು
  • ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಆನ್‌ಲೈನ್‌ ಪೋರ್ಟಲ್‌ನಲ್ಲಿ ಅಪ್‌ಡೇಟ್‌ ಮಾಡಲು ಕೊನೆಯ ದಿನಾಂಕ ಏಪ್ರಿಲ್‌ 30, 2019.
  • ಕಾಲೇಜಿನವರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕಾದ ಕೊನೆಯ ದಿನಾಂಕ ಮೇ 02, 2019.
  • ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್‌ ಸಹಿತ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ ಮೇ 04, 2019
ಜೂನ್‌ ತಿಂಗಳಲ್ಲಿ ನಡೆಸಲಾಗುವ ಪೂರಕ ಪರೀಕ್ಷೆಗೆ ಅನುತ್ತೀರ್ಣ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕಗಳ ವಿವರ
  • ಒಂದು ವಿಷಯಕ್ಕೆ ರೂ. 140
  • ಎರಡು ವಿಷಯಕ್ಕೆ ರೂ. 270
  • ಮೂರು ಅಥವಾ ಹೆಚ್ಚಿನ ವಿಷಯಗಳಿಗೆ ರೂ. 400
  • ಎಸ್‌ಸಿ/ಎಸ್‌ಟಿ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತು ಪಡಿಸಿದ ಶುಲ್ಕವಾಗಿದೆ.
  • ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಕಡ್ಡಾಯವಾಗಿ ಸಲ್ಲಿಸಬೇಕಾದ ಅಂಕಪಟ್ಟಿ ಶುಲ್ಕ ರೂ. 50

ಫಲಿತಾಂಶ ತಿರಸ್ಕರಣಾ ಶುಲ್ಕ
  • ಪ್ರಥಮ ಬಾರಿಗೆ ಒಂದು ವಿಷಯಕ್ಕೆ ರೂ. 175
  • ದ್ವಿತೀಯ ಹಾಗೂ ಅಂತಿಮ ಬಾರಿಗೆ ಒಂದು ವಿಷಯಕ್ಕೆ ರೂ. 350
ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌, ವಿದ್ಯಾರ್ಥಿನಿಯರೇ ಮೇಲುಗೈ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌