ಆ್ಯಪ್ನಗರ

ಇಂದಿನಿಂದ ಶಿಕ್ಷಕರ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ಶುರು

ಹೈದರಾಬಾದ್‌ ಕರ್ನಾಟಕ ಶೇ.20 ಮಿಕ್ಕುಳಿದ ಹುದ್ದೆಗೆಳಿಗೆ ಮತ್ತು ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಹೈದರಾಬಾದ್‌ ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದದ ಶೇ.8 ಹೊರತುಪಡಿಸಿ ಶೇ.92 ಹುದ್ದೆಗಳಿಗೆ ಮತ್ತು ಇತರೆ ಜಿಲ್ಲೆಗಳ ಶೇ.100 ಹುದ್ದೆಗಳಿಗೆ ಮೇ 25 ಮತ್ತು 26 ರಂದು (ಪರೀಕ್ಷೆ-2) ಸ್ವರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Vijaya Karnataka Web 25 May 2019, 7:51 am
ಬೆಂಗಳೂರು: ರಾಜ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ 10, 611 ಪದವೀಧರ ಪ್ರಾಥಮಿಕ ಶಿಕ್ಷಕ (6ರಿಂದ 8ನೇ ತರಗತಿ)ಹುದ್ದೆಗಳ ನೇಮಕಕ್ಕೆ ಇಂದಿನಿಂದ (ಮೇ 25) ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
Vijaya Karnataka Web Teachers


ಈ ಪರೀಕ್ಷೆಯು ಜಿಲ್ಲಾ ಮಟ್ಟದಲ್ಲಿ ನಡೆಯಲಿದ್ದು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೂ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ ಪ್ರಶ್ನೆ ಪತ್ರಿಕೆಯು ರಾಜ್ಯಮಟ್ಟದಲ್ಲಿ ಒಂದೇ ರೀತಿಯಾಗಿರುತ್ತದೆ.

ಹೈದರಾಬಾದ್‌ ಕರ್ನಾಟಕ ಶೇ.20 ಮಿಕ್ಕುಳಿದ ಹುದ್ದೆಗೆಳಿಗೆ ಮತ್ತು ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಹೈದರಾಬಾದ್‌ ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದದ ಶೇ.8 ಹೊರತುಪಡಿಸಿ ಶೇ.92 ಹುದ್ದೆಗಳಿಗೆ ಮತ್ತು ಇತರೆ ಜಿಲ್ಲೆಗಳ ಶೇ.100 ಹುದ್ದೆಗಳಿಗೆ ಮೇ 25 ಮತ್ತು 26 ರಂದು (ಪರೀಕ್ಷೆ-2) ಸ್ವರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೇ ಪ್ರವೇಶ ಪತ್ರವನ್ನು ಇಲಾಖೆಯ ವೆಬ್‌ನಲ್ಲಿ ಒದಗಿಸಲಾಗಿದ್ದು, ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಇದರಲ್ಲಿ ನೀಡಲಾಗಿದೆ. ಪ್ರವೇಶ ಪತ್ರವನ್ನು ತೆಗೆದುಕೊಂಡು ಬಾರದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಶನಿವಾರ ಬೆಳಗ್ಗೆ 10.30 ರಿಂದ ಪರೀಕ್ಷೆ ಆರಂಭಗೊಳ್ಳಲಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಅಭ್ಯರ್ಥಿಗಳನ್ನು ಹೊರತು ಪಡಿಸಿ ಬೇರೆ ಯಾರೂ ಪ್ರವೇಶಿಸುವಂತಿಲ್ಲ ಎಂದು ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌