ರಾಜ್ಯ ಸರ್ಕಾರ ಸರ್ಕಾರಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. ಸರ್ಕಾರದ ಈ ಆದೇಶದಿಂದ ದೂರದ ಊರುಳಿಂದ ಶಾಲೆಗೆ ಬರುವ ಮಕ್ಕಳಿಗೆ ಅನುಕೂಲವಾಗಲಿದೆ. ಗ್ರಾಮೀಣ ಭಾಗದ ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾದ್ರೆ, ಅವರು ಸಾರಿಗೆ ಅಥವಾ ಖಾಸಗಿ ವಾಹನ ಬಳಸಬೇಕು. ಆದರೆ ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿರುವ ಊರುಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸುತ್ತವೆ. ಇದರಿಂದ ಬಸ್ ಅನುಕೂಲಕ್ಕಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗ ಸೇರಿಸಲು ಮುಂದಾಗುತ್ತಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಶಾಲೆಯ ಮಕ್ಕಳಿಗೂ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂಬ ಕೂಗು ಕೇಳಿ ಬಂದಿತ್ತು. ಇದೀಗ ರಾಜ್ಯ ಸರ್ಕಾರ ಶಾಲಾ ವಾಹನ ಖರೀದಿಗೆ ಅನುಮತಿ ನೀಡಿದೆ. ಸರ್ಕಾರಿ ಶಾಲೆಗಳ ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರುವುದಕ್ಕೆ ಈ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅವರಿಂದ ಆದೇಶ ಹೊರ ಬಂದಿದೆ.
ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ? ಮತ ಲೆಕ್ಕಾಚಾರ ಮತ್ತು ಆಯ್ಕೆ ಹೇಗಿರುತ್ತೇ? ಇಲ್ಲಿದೆ ಮಾಹಿತಿ..
ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಅನುಮತಿ ನೀಡಲಾಗಿದೆ. ಯಾವ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇರಲ್ಲವೋ ಅಲ್ಲಿಯ ಶಾಲೆಗಳು ಮಾತ್ರ ಬಸ್ ಖರೀದಿಸಬಹುದಾಗಿದೆ. ಶಾಲಾ- ವಾಹನ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ನೀಡಲಾಗಿದೆ. ಶಾಲಾ ವಾಹನಕ್ಕೆ ಖರ್ಚು (ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ) ವೆಚ್ಚ SDMC ಅನುದಾನದಡಿ ಭರಿಸಲು ಸೂಚನೆ ನೀಡಲಾಗಿದೆ.
ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ 48,285 ಸರ್ಕಾರಿ ಶಾಲೆಗಳು, 6312 ಅನುದಾನಿತ ಶಾಲೆಗಳಲ್ಲಿ ಒಟ್ಟು 65 ಲಕ್ಷಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಮಕ್ಕಳು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ? ಮತ ಲೆಕ್ಕಾಚಾರ ಮತ್ತು ಆಯ್ಕೆ ಹೇಗಿರುತ್ತೇ? ಇಲ್ಲಿದೆ ಮಾಹಿತಿ..
ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಅನುಮತಿ ನೀಡಲಾಗಿದೆ. ಯಾವ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇರಲ್ಲವೋ ಅಲ್ಲಿಯ ಶಾಲೆಗಳು ಮಾತ್ರ ಬಸ್ ಖರೀದಿಸಬಹುದಾಗಿದೆ. ಶಾಲಾ- ವಾಹನ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ನೀಡಲಾಗಿದೆ. ಶಾಲಾ ವಾಹನಕ್ಕೆ ಖರ್ಚು (ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ) ವೆಚ್ಚ SDMC ಅನುದಾನದಡಿ ಭರಿಸಲು ಸೂಚನೆ ನೀಡಲಾಗಿದೆ.
ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ 48,285 ಸರ್ಕಾರಿ ಶಾಲೆಗಳು, 6312 ಅನುದಾನಿತ ಶಾಲೆಗಳಲ್ಲಿ ಒಟ್ಟು 65 ಲಕ್ಷಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಮಕ್ಕಳು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.