ಆ್ಯಪ್ನಗರ

ಸ್ಕೂಲ್‌ ಫೀಸ್ ಕೇಳಿದರೆ ಕೇಸ್; ಖಾಸಗಿ ಶಾಲೆಗಳಿಗೆ ಎಚ್ಚರಿಕೆ

ಖಾಸಗಿ ಶಾಲೆಗಳು, ಪೋಷಕರಲ್ಲಿ ಶುಲ್ಕ ಪಾವತಿ ಕೇಳುವುದರ ವಿರುದ್ಧ, ಕರ್ನಾಟಕ ಶಿಕ್ಷಣ ಇಲಾಖೆ ಕೇಸ್ ಫೈಲ್‌ ಮಾಡುವ ಬಗ್ಗೆ ಎಚ್ಚರಿಕೆ ನೀಡಿದೆ.

Vijaya Karnataka Web 31 Mar 2020, 4:07 pm

2020-21ನೇ ಸಾಲಿನ ತರಗತಿಗಳಿಗೆ, ದಾಖಲಾಗುವ ವಿದ್ಯಾರ್ಥಿಗಳ ಶುಲ್ಕವನ್ನು ಏಪ್ರಿಲ್, ಮೇ ನಲ್ಲಿ ಪಾವತಿಸುವಂತೆ ಪೋಷಕರ ಮೇಲೆ ಒತ್ತಡ ಹೇರುವ ಖಾಸಗಿ ಶಾಲೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
Vijaya Karnataka Web education news latest in karnataka
Education News


ಮುಂದಿನ ಶೈಕ್ಷಣಿಕ ವರ್ಷಕ್ಕೆ ದಾಖಲಾಗುವ ವಿದ್ಯಾರ್ಥಿಗಳು ಏಪ್ರಿಲ್ ಮತ್ತು ಮೇ ತಿಂಗಳೊಳಗೆ ಶುಲ್ಕ ಪಾವತಿಸುವ ದಿನಾಂಕ ನಿಗದಿಪಡಿಸಿ, ಕೆಲಸವು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಪತ್ರ, ಇ-ಮೇಲ್, ಎಸ್‌ಎಂಎಸ್‌ ಮೂಲಕ ಪೋಷಕರಿಗೆ ಒತ್ತಡ ಹಾಕುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಆದರೆ, ರಾಜ್ಯ ಸರಕಾರ ಈಗಾಗಲೇ ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ಮಕ್ಕಳ ದಾಖಲಾತಿಯನ್ನು ಮುಂದೂಡುವಂತೆ ಆದೇಶಿಸಿದೆ. ಈ ಬಗ್ಗೆ ಪೋಷಕರ ಮೇಲೆ ಯಾವುದೇ ಒತ್ತಡ ಹೇರುವಂತಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟೀಕರಿಸಲಾಗಿದೆ.

ಈಗಾಗಲೇ ಯಾವುದಾದರೂ ಶಾಲೆಗಳ ಆಡಳಿತ ಮಂಡಳಿಗಳು 2020-21ನೇ ಸಾಲಿನ ಶುಲ್ಕ ಪಾವತಿ ಮಾಡಲು ಪೋಷಕರಿಗೆ ಸೂಚನೆ ನೀಡಿದ್ದಲ್ಲಿ, ಕೂಡಲೇ ಹಿಂಪಡೆಯಬೇಕು. ಒಂದು ವೇಳೆ ಸರಕಾರದ ಆದೇಶವನ್ನು ಉಲ್ಲಂಘಿಸಿದರೆ ಅಂತಹ ಶಾಲಾ ಆಡಳಿತ ಮಂಡಳಿ ವಿರುದ್ಧ ಸಾಂಕ್ರಾಮಿಕ ರೋಗಗಳ ಅಧಿನಿಯಮ 1897ರ ಸೆಕ್ಷನ್(3), ವಿಕೋಪ ನಿರ್ವಹಣಾ ಅಧಿನಿಯಮ, ಭಾರತೀಯ ದಂಡ ಸಂಹಿತೆ 188ನೇ ಪ್ರಕರಣದ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಅಲ್ಲದೇ ಶಿಕ್ಷಣ ಕಾಯಿದೆಯ ಅಡಿಯಲ್ಲಿ ಸಂಬಂಧಪಟ್ಟ ಶಾಲೆಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಇಲಾಖೆಯ ಆಯುಕ್ತ ಡಾ.ಕೆ.ಜಿ.ಜಗದೀಶ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 20 ರವರೆಗೆ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ; ಶಿಕ್ಷಣ ಇಲಾಖೆ

ಈ ಆದೇಶವು ಸಿಬಿಎಸ್‌ಇ, ಐಸಿಎಸ್‌ಇ, ರಾಜ್ಯ ಪಠ್ಯಕ್ರಮ ಸೇರಿದಂತೆ ಎಲ್ಲ ಸರಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೂ ಅನ್ವಯವಾಗಲಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಶಾಲೆಗಳಿಗೆ ಏ.12ರಿಂದ ಬೇಸಿಗೆ ರಜೆ

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಮಾ.31 ರವರೆಗೆ ನೀಡಿದ್ದ ರಜೆಯನ್ನು ಏ.11 ರವರೆಗೆ ವಿಸ್ತರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಹಾಗೂ ಏ.12 ರವರೆಗೆ ವಿಸ್ತರಿಸಿದ ರಜೆ ಮತ್ತು ಏ.12 ರಿಂದ ಆರಂಭವಾಗುವ ಬೇಸಿಗೆ ರಜೆ ಅವಧಿಗಳಲ್ಲೂ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳು ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಡಬಾರದು. ಸೇವೆ ಅಗತ್ಯವಿದೆ ಎಂದು ಕಂಡು ಬಂದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಮನೆಯಲ್ಲೇ ಇದ್ದು ಇಂಗ್ಲಿಷ್ ಮಾತನಾಡುವ ಸ್ಕಿಲ್‌ ಹೆಚ್ಚಿಸಿಕೊಳ್ಳುವುದು ಹೇಗೆ? ಟಿಪ್ಸ್‌ ಇಲ್ಲಿವೆ..

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌