ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮುಂದಿನ ಕಲಿಕೆ ಹಾಗೂ ಭವಿಷ್ಯದ ದೃಷ್ಟಿಯಿಂದ ಅವರಿಗೆ ಪರೀಕ್ಷೆಯನ್ನು ನಡೆಸಬೇಕು ಎಂದು ಹೇಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿ ಕೋವಿಡ್ ಸೋಂಕು ತೀವ್ರವಾದ ಕಾರಣ 10ನೇ ತರಗತಿ ಪರೀಕ್ಷೆ ನಡೆಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಪರ-ವಿರೋಧ ಚರ್ಚೆಗಳು ಸಾಮಾಜಿಕ ವಲಯದಲ್ಲಿ ನಡೆಯುತ್ತಿವೆ. ಆದರೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಎಸ್ಎಸ್ಎಲ್ಸಿ ಪರೀಕ್ಷೆ ನಿಲ್ಲಿಸಬಾರದು ಎಂದು ಬಸವರಾಜ ಹೊರಟ್ಟಿ ರವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ರವರಿಗೆ ಪತ್ರದ ಮೂಲಕ ಸಲಹೆ ನೀಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡುವುದರಿಂದ ಯಾವುದೇ ಉಪಯೋಗವಿಲ್ಲ. ಸೂಕ್ತ ಸಮಯಕ್ಕೆ ಸರಿಯಾಗಿ ಪರೀಕ್ಷೆ ನಡೆಸುವುದು, ಶಾಲಾ ಚಟುವಟಿಕೆಗಳನ್ನು ನಡೆಸುವುದರಿಂದ ಮಕ್ಕಳಿಗೆ ಕಲಿಕೆಯ ಬಗ್ಗೆ ಹಾಗೂ ಶಾಲೆಯ ಬಗ್ಗೆ ಆಸಕ್ತಿ ಇರುತ್ತದೆ. ಕೋವಿಡ್ ಎಲ್ಲಾ ಹಂತದಲ್ಲಿದ್ದಾಗ ಯಾವುದೇ ಬದಲಾವಣೆಗಳಿರುವುದಿಲ್ಲ. ಅಂತಿಮ ಪರೀಕ್ಷೆ ವಿದ್ಯಾರ್ಥಿಗಳಿಗೆ ಮಾನಸಿಕ ನೆಮ್ಮದಿ ನೀಡುತ್ತದೆ ಎಂದಿದ್ದಾರೆ ಸಭಾಪತಿ.
ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ ಮುಂದೂಡಿಕೆ
ಪರೀಕ್ಷೆ ಮುಂದೂಡಿದರೆ, ರದ್ದು ಮಾಡಿದರೆ, ಕಲಿಕಾ ಆಸಕ್ತಿ ಮಕ್ಕಳಲ್ಲಿ ಕುಗ್ಗುತ್ತದೆ. ಹಾಗೆ ಕಲಿಕೆಯಲ್ಲಿ ಹಿಂದೆ ಉಳಿಯುತ್ತಾರೆ. 10ನೇ ತರಗತಿ ಪರೀಕ್ಷೆ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರೀಕೃತವಾಗಿರುತ್ತದೆ. ಪರೀಕ್ಷೆಗಳನ್ನು ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಡೆಸಬೇಕು. ರಾಜ್ಯ ಸರ್ಕಾರ ಮಕ್ಕಳನ್ನು ಕೊರೊನಾ ಹಿನ್ನೆಲೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಮೂಲಕ ಸೋಂಕು ತಗುಲದಂತೆ ಕ್ರಮಕೈಗೊಳ್ಳಬೇಕು. ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ದೃಢ ನಿರ್ಧಾರ ತೆಗೆದುಕೊಂಡು ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ನೀಟ್ ಪಿಜಿ 2021 ಪರೀಕ್ಷೆ ಮುಂದೂಡಿಕೆ: ಪರಿಷ್ಕೃತ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟ
ಕರ್ನಾಟಕದಲ್ಲಿ ಕೋವಿಡ್ ಸೋಂಕು ತೀವ್ರವಾದ ಕಾರಣ 10ನೇ ತರಗತಿ ಪರೀಕ್ಷೆ ನಡೆಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಪರ-ವಿರೋಧ ಚರ್ಚೆಗಳು ಸಾಮಾಜಿಕ ವಲಯದಲ್ಲಿ ನಡೆಯುತ್ತಿವೆ. ಆದರೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಎಸ್ಎಸ್ಎಲ್ಸಿ ಪರೀಕ್ಷೆ ನಿಲ್ಲಿಸಬಾರದು ಎಂದು ಬಸವರಾಜ ಹೊರಟ್ಟಿ ರವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ರವರಿಗೆ ಪತ್ರದ ಮೂಲಕ ಸಲಹೆ ನೀಡಿದ್ದಾರೆ.
ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ ಮುಂದೂಡಿಕೆ
ಪರೀಕ್ಷೆ ಮುಂದೂಡಿದರೆ, ರದ್ದು ಮಾಡಿದರೆ, ಕಲಿಕಾ ಆಸಕ್ತಿ ಮಕ್ಕಳಲ್ಲಿ ಕುಗ್ಗುತ್ತದೆ. ಹಾಗೆ ಕಲಿಕೆಯಲ್ಲಿ ಹಿಂದೆ ಉಳಿಯುತ್ತಾರೆ. 10ನೇ ತರಗತಿ ಪರೀಕ್ಷೆ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರೀಕೃತವಾಗಿರುತ್ತದೆ. ಪರೀಕ್ಷೆಗಳನ್ನು ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಡೆಸಬೇಕು. ರಾಜ್ಯ ಸರ್ಕಾರ ಮಕ್ಕಳನ್ನು ಕೊರೊನಾ ಹಿನ್ನೆಲೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಮೂಲಕ ಸೋಂಕು ತಗುಲದಂತೆ ಕ್ರಮಕೈಗೊಳ್ಳಬೇಕು. ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ದೃಢ ನಿರ್ಧಾರ ತೆಗೆದುಕೊಂಡು ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ನೀಟ್ ಪಿಜಿ 2021 ಪರೀಕ್ಷೆ ಮುಂದೂಡಿಕೆ: ಪರಿಷ್ಕೃತ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟ